ಹೈದರಾಬಾದ್ : ಸೂಪರ್ ಸ್ಟಾರ್ ರಜನಿಕಾಂತ್ ರಕ್ತದೊತ್ತಡದಲ್ಲಿ ತೀವ್ರ ಏರುಪೇರು ಕಂಡು ಹೈದರಾಬಾದ್ ನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಅಪೋಲೋ ಆಸ್ಪತ್ರೆ ಬಿಡುಗಡೆ ಮಾಡಿರುವ ಹೇಳಿಕೆಯ ಪ್ರಕಾರ, ‘ಇಂದು ಬೆಳಗ್ಗೆ ರಜನಿಕಾಂತ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ 10 ದಿನಗಳಿಂದ ಹೈದರಾಬಾದ್ ನಲ್ಲಿ ಸಿನಿಮಾ ವೊಂದರ ಶೂಟಿಂಗ್ ನಲ್ಲಿದ್ದಾರೆ. ಸೆಟ್ ನಲ್ಲಿದ್ದ ಒಂದೆರಡು ಮಂದಿ ಕೋವಿಡ್-19 ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಡಿಸೆಂಬರ್ 22ರಂದು ಕೋವಿಡ್-19 ಗಾಗಿ ರಜನಿಕಾಂತ್ ಅವರನ್ನು ಪರೀಕ್ಷಿಸಲಾಗಿತ್ತು. ರಜನಿಕಾಂತ್ ಅವರಿಗೆ ಕೊರೋನಾ ನೆಗೆಟಿವ್ ಎಂಬುದಾಗಿ ತಿಳಿಸಿದೆ.
ಕರೋನಾ ನೆಗೆಟಿವ್ ಎಂಬುದಾಗಿ ಪರೀಕ್ಷೆಯ ವರದಿಯಿಂದ ತಿಳಿದು ಬಂದರೂ, ಅಂದಿನಿಂದ ಅವರು ಪ್ರತ್ಯೇಕಗೊಂಡು, ಸೂಕ್ಷ್ಮವಾಗಿ ನಿಗಾ ವಹಿಸುತ್ತಿದ್ದಾರೆ. ಅವರಿಗೆ ಕೋವಿಡ್-19 ರ ಯಾವುದೇ ಲಕ್ಷಣಗಳು ಇರಲಿಲ್ಲವಾದರೂ, ಅವರ ರಕ್ತದೊತ್ತಡದಲ್ಲಿ ತೀವ್ರವಾದ ಏರಿಳಿತಗಳು ಕಂಡುಬಂದಿವೆ. ಅವರಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದು, ಅದಕ್ಕಾಗಿ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿಸಿದೆ.
ಡಿಸ್ಚಾರ್ಜ್ ಆಗುವ ಮುನ್ನ ಅವರ ರಕ್ತದೊತ್ತಡ ಕಡಿಮೆಯಾಗುವವರೆಗೂ ಅವರನ್ನು ಆಸ್ಪತ್ರೆಯಲ್ಲಿಯೇ ತಪಾಸಣೆ ಗೊಳಪಡಿಸಲಾಗುತ್ತದೆ. ಅವರ ಆರೋಗ್ಯದ ಬಗ್ಗೆ ತೀವ್ರ ನಿಗಾ ವಹಿಸಲಾಗುತ್ತಿದೆ. ರಕ್ತದೊತ್ತಡದಲ್ಲಿ ಏರುಪೇರು ಮತ್ತು ಆಯಾಸದ ಹೊರತಾಗಿ ಅವರಿಗೆ ಬೇರೆ ಯಾವುದೇ ರೋಗಲಕ್ಷಣಗಳಿರುವುದಿಲ್ಲ. ಹಿಮೋಡೈನಮಿಕ್ ಆಗಿ ಸ್ಥಿರವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ..
ಶಿರ್ವ ವಿದ್ಯಾವರ್ಧಕ ಸಮೂಹ ಶಿಕ್ಷಣ ಸಂಸ್ಥೆಗಳ ಪ್ರಧಾನ ಕಾರ್ಯದರ್ಶಿಯಾಗಿ ಮಟ್ಟಾರ್ ರತ್ನಾಕರ್ ಹೆಗ್ಡೆ ಆಯ್ಕೆ ಉಡುಪಿ: ಕಾಪು ತಾಲೂಕಿನ ಶಿರ್ವದಲ್ಲಿರುವ…
ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದ ಕೇರಳಂ ಮುಖ್ಯಮಂತ್ರಿ ವಿ. ಡಿ. ಸತೀಶನ್ ಕೊಲ್ಲೂರು: ಕೇರಳಂ…
ಸೌದಿಯಲ್ಲಿ ಹೃದಯಾಘಾತ: ಪಡುಬಿದ್ರಿ ಮೂಲದ ಉದ್ಯಮಿ ನಿಧನ ಪಡುಬಿದ್ರಿ: ಪಡುಬಿದ್ರಿಯ ದೀನ್ಸ್ಟ್ರೀಟ್ ನಿವಾಸಿ, ದಿ. ಇದಿನಬ್ಬ ಅವರ ಪುತ್ರ ರಿಯಾಝ್…
ಗುಂಡು ಹಾರಿಸಿಕೊಂಡು ಯುವಕ ಆತ್ಮಹತ್ಯೆ ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ…
ಉಡುಪಿ : ಬಿಎಲ್ಒಗಳು ಪ್ರತಿ ಮನೆಗೆ ಭೇಟಿ ನೀಡಿ ಅರ್ಜಿಗಳನ್ನು ವಿತರಿಸಲು ಮತ್ತು ಸಂಗ್ರಹಿಸಲು ಸೂಚಿಸಲಾಗಿದೆ : ಡಿಸಿ ಸ್ವರೂಪ…
ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಬಸ್ ಕಂಡಕ್ಟರ್ ಬಂಧನ ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ…