Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಅಭಿಯಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಬೆಂಬಲ ವ್ಯಕ್ತ ಪಡಿಸಿದ್ದಾರೆ.
ಟ್ವೀಟ್ನಲ್ಲಿ ಏನಿದೆ?
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ.
ರಾಜ್ಯದಲ್ಲಿ ಇನ್ನೆಷ್ಟು ಅಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಟ್ವೀಟ್ ಮಾಡಿ ಯಾವ ಜಿಲ್ಲೆಯಲ್ಲಿ ಆಸ್ಪತ್ರೆ ಇಲ್ಲವೋ ಕೂಡಲೇ ಅಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಎಚ್ಡಿಕೆ ಆಗ್ರಹಿಸಿದ್ದಾರೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…