Featured

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ : HDK – VIshwanews24

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ : HDK

ಬೆಂಗಳೂರು: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಾಗಿ ಉತ್ತರ ಕನ್ನಡ ಜಿಲ್ಲೆಯ ಜನರು ನಡೆಸುತ್ತಿರುವ ಹೋರಾಟಕ್ಕೆ ನನ್ನ ಪರಿಪೂರ್ಣ ಬೆಂಬಲವಿದೆ ಮತ್ತು ಹೋರಾಟದಲ್ಲಿ ನಮ್ಮ ಪಕ್ಷವೂ ನಿಲ್ಲುತ್ತದೆ. ವರ್ಷಗಳ ಕಾಲದ ನ್ಯಾಯಯುತವಾದ ಈ ಬೇಡಿಕೆಯನ್ನು ರಾಜ್ಯ ಬಿಜೆಪಿ ಸರ್ಕಾರ ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಉತ್ತರ ಕನ್ನಡಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎಂಬ ಅಭಿಯಾನಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮೂಲಕ ಬೆಂಬಲ ವ್ಯಕ್ತ ಪಡಿಸಿದ್ದಾರೆ.

ಟ್ವೀಟ್‍ನಲ್ಲಿ ಏನಿದೆ?
ಕೋವಿಡ್ ವೇಳೆ ಎಲ್ಲ ಸಮುದಾಯ ಕೇಂದ್ರ, ತಾಲೂಕು, ಜಿಲ್ಲಾ ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುತ್ತೇವೆ ಎಂದು ಅಬ್ಬರಿಸಿ ಬೊಬ್ಬಿರಿದ ಸರ್ಕಾರ, ಕೋವಿಡ್ ಇಳಿದ ಮೇಲೆ ತಣ್ಣಗಾಗಿದೆ. ಆಕ್ಸಿಜನ್ ಘಟಕ, ವೆಂಟಿಲೇಟರ್ ಸೇರಿ ಖರೀದಿ ಮಾಡಿದ ವೈದ್ಯ ಪರಿಕರಗಳೆಲ್ಲ ಅನೇಕ ಕಡೆ ಧೂಳು ತಿನ್ನುತ್ತಿವೆ. ಕೆಲವೆಡೆ ಮಾತ್ರ ಸುಸಜ್ಜಿತ ಆಸ್ಪತ್ರೆಗಳಿವೆ. ಬಹುತೇಕ ಜಿಲ್ಲೆಗಳಲ್ಲಿ ಇಲ್ಲ. ತುರ್ತು ಚಿಕಿತ್ಸೆ ಬೇಕೆಂದರೆ, ಬೆಂಗಳೂರು, ಹುಬ್ಬಳ್ಳಿ, ಮಂಗಳೂರು, ಮೈಸೂರು, ಬೆಳಗಾವಿಯಂಥ ಕೆಲವಷ್ಟೇ ನಗರಗಳಲ್ಲಿ ಮಾತ್ರ ಲಭ್ಯವಿದೆ. ಜನ ಹೋಗುವುದು ಹೇಗೆ? ಆರೋಗ್ಯ ಸೌಲಭ್ಯದಲ್ಲಿ ಅಸಮಾನತೆ ರಾಜ್ಯಕ್ಕೆ ಭೂಷಣವಲ್ಲ. ಮುಖ್ಯಮಂತ್ರಿ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಸುಧಾಕರ್ ಅವರೇ ಖುದ್ದು ಕ್ರಮ ವಹಿಸಬೇಕು ಎಂಬುದು ನನ್ನ ಆಗ್ರಹ.

ರಾಜ್ಯದಲ್ಲಿ ಇನ್ನೆಷ್ಟು ಅಂಬುಲೆನ್ಸ್ ದುರಂತಗಳು ಆಗಬೇಕು? ಇನ್ನೆಷ್ಟು ಜನರು ರಸ್ತೆಗಳ ಮೇಲೆಯೇ ಜೀವ ಕಳೆದುಕೊಳ್ಳಬೇಕು? ಶಿರೂರು ಟೋಲ್ ಬಳಿ ಸಂಭವಿಸಿದ ಭೀಕರ ಅಪಘಾತದಿಂದ ರಾಜ್ಯ ಬಿಜೆಪಿ ಸರ್ಕಾರ ಕಣ್ತೆರೆಯಲೇಬೇಕು. ಆರೋಗ್ಯ ಸೌಲಭ್ಯ ಕಲ್ಪಿಸುವುದರ ಜೊತೆಗೆ ಇರುವ ವ್ಯವಸ್ಥೆಯ ಸಮರ್ಪಕ ನಿರ್ವಹಣೆ ಸರ್ಕಾರದ ಹೊಣೆ. ಆರೋಗ್ಯ ಎಲ್ಲರ ಹಕ್ಕು. ನಾನು ರೂಪಿಸಿರುವ ಪಂಚರತ್ನ ಕಾರ್ಯಕ್ರಮದಲ್ಲಿ ಆರೋಗ್ಯವೂ ಪ್ರಮುಖ ಕಾರ್ಯಕ್ರಮ. ಜನತೆಗೆ ಅತ್ಯುತ್ತಮ ಆರೋಗ್ಯ ಸೌಲಭ್ಯ ಕೊಡುವುದು ನನ್ನ ಗುರಿ ಎಂದು ಟ್ವೀಟ್ ಮಾಡಿ ಯಾವ ಜಿಲ್ಲೆಯಲ್ಲಿ ಆಸ್ಪತ್ರೆ ಇಲ್ಲವೋ ಕೂಡಲೇ ಅಲ್ಲಿ ಆಸ್ಪತ್ರೆ ನಿರ್ಮಾಣ ಮಾಡುವಂತೆ ಎಚ್‍ಡಿಕೆ ಆಗ್ರಹಿಸಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago