ಮೈಸೂರು: ನಾನು ಸದ್ಯಕ್ಕೆ ಪ್ರಜ್ವಲ್ ಭೇಟಿಗೆ ಹೋಗಲ್ಲ. ನಾನು ಭೇಟಿಗೆ ಹೋದರೆ ರೇವಣ್ಣ ಏನೋ ಹೇಳಿಕೋಟ್ಟ ಅಂತಾ ಹೇಳುತ್ತಾರೆ. ಹೀಗಾಗಿ ನಾನು ಹೋಗಲ್ಲ ಎಂದು ಮಾಜಿ ಸಚಿವ ಹೆಚ್.ಡಿ ರೇವಣ್ಣ ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, ನಮಗೆ ಸದ್ಯಕ್ಕೆ ದೇವರು ಬಿಟ್ಟರೆ ಇನ್ಯಾರು ಎಂದು ಮಾತು ಆರಂಭಿಸಿದ ರೇವಣ್ಣ, ಸೋಮವಾರ ನನ್ನ ಪತ್ನಿ ಹೋಗಿದ್ದಾರೆ, ಮಗ ಅಲ್ವ ಹೀಗಾಗಿ ಹೋಗಿದ್ದಾರೆ ಅಷ್ಟೇ. ತಾಯಿ-ಮಗ ಏನು ಮಾತಾಡಿದ್ದಾರೆ ನನಗೆ ಗೊತ್ತಿಲ್ಲ, ಕೇಳಲೂ ಹೋಗಿಲ್ಲ ಎಂದರು.
ಸೂರಜ್ ರೇವಣ್ಣ ಮಹಾನ್ ದೈವ ಭಕ್ತ. ಅವನು ಬಹಳ ಬೇಗ ಇದರಿಂದ ಹೊರಬರುತ್ತಾನೆ ಅನ್ನೋ ನಂಬಿಕೆ ಇದೆ. ಉಳಿದ ಯಾವ ವಿಚಾರಗಳ ಬಗ್ಗೆಯೂ ನಾನು ಮಾತನಾಡಲ್ಲ. ಎಲ್ಲವೂ ನ್ಯಾಯಾಲಯದ ಮುಂದೆ ಇವೆ. ಎಲ್ಲವೂ ಮುಗಿಯಲಿ, ಆಮೇಲೆ ಎಲ್ಲವನ್ನೂ ಎಳೆ ಎಳೆಯಾಗಿ ಬಿಚ್ಚಿಡುತ್ತೇನೆ ಎಂದು ರೇವಣ್ಣ ತಿಳಿಸಿದರು.
ಎಂಥೆಂತವರಿಗೋ ಕಷ್ಟ ಬರುತ್ತದೆ, ಅದ್ರಲ್ಲಿ ನಮ್ಮದು ಏನಿದೆ. ದೇವೇಗೌಡರು ಒಂದು ತಿಂಗಳಿನಿಂದ ಸಹಜವಾಗಿ ನೋವಿನಲ್ಲೇ ಇದ್ದಾರೆ. ಎಲ್ಲದಕ್ಕೂ ಕಾಲದಲ್ಲಿ ಉತ್ತರ ಸಿಗುತ್ತದೆ. ನಾನು ಯಾವತ್ತೂ ಯಾವುದಕ್ಕೂ ಎದೆಗುಂದುವುದಿಲ್ಲ. 30 ವರ್ಷದಿಂದ ರಾಜಕಾರಣ ಮಾಡಿದ್ದೇನೆ. ಇಂಥವನೆಲ್ಲ ಬಹಳ ನೋಡಿದ್ದೇನೆ ಎಂದರು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…