ಬೆಂಗಳೂರು: ಸೂರಜ್ ರೇವಣ್ಣ ಪ್ರಕರಣ ವಿಚಾರ ನಮಗೆ ಇನ್ನೂ ದೂರು ಬಂದಿಲ್ಲ. ಸುದ್ದಿ ವಾಹಿನಿಗಳಲ್ಲಿ ಈ ಬಗ್ಗೆ ನೋಡಿದ್ದೇವೆ. ಆದರೆ, ನಮಗೆ ಅಧಿಕೃತ ದೂರು ನೀಡಿಲ್ಲ. ದೂರು ಬಂದ ಕೂಡಲೇ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸೂರಜ್ ರೇವಣ್ಣ ವಿರುದ್ಧ ಕೇಳಿಬಂದಿರುವ ಸಲಿಂಗ ಕಾಮ ಆರೋಪದ ಬಗ್ಗೆ ಪ್ರತಿಕ್ರಿಯಿಸಿ, ಗೃಹ ಸಚಿವರಿಗೆ ಪತ್ರ ಬರೆದಿದ್ದಾರೆ ಅಂತ ಹೇಳಿದ್ದಾರೆ. ನನಗೆ ಯಾವುದೇ ಪತ್ರ ಬಂದಿಲ್ಲ, ಈಗ ತನಿಖೆ ಮಾಡುತ್ತೇವೆ. ಏನು ಅಂತ ತಿಳಿದುಕೊಂಡು ತನಿಖೆ ಮಾಡುತ್ತೇವೆ. ಸಿಐಡಿಗೆ ಕೊಡುವ ಮುನ್ನ ಪ್ರಕರಣದ ನೈಜತೆ ತಿಳಿದುಕೊಳ್ಳುತ್ತೇವೆ. ಪತ್ರ ಬರೆಯುವುದಕ್ಕೂ, ದೂರು ಕೊಡುವುದಕ್ಕೂ ವ್ಯತ್ಯಾಸ ಇದೆ. ಅಧಿಕೃತ ದೂರು ಬಂದ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಈ ಬಗ್ಗೆ ಖಾಸಗಿ ಸುದ್ದಿ ವಾಹಿನಿಯವರನ್ನು ಕರೆದು ಮಾತನಾಡುತ್ತೇವೆ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
ಅಸಹಜ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ದೌರ್ಜನ್ಯ ಎಸಗಿದ್ದು, ನನ್ನ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂದು ಸೂರಜ್ ರೇವಣ್ಣ ವಿರುದ್ಧ ಅರಕಲಗೂಡಿನ ಜೆಡಿಎಸ್ ಕಾರ್ಯಕರ್ತರೊಬ್ಬರು ಆರೋಪ ಮಾಡಿದ್ದರು. ಈ ಬಗ್ಗೆ ಡಿಜಿಪಿ, ಹಾಸನದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ ಎನ್ನಲಾಗಿದೆ.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…