Featured

ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್‌ – Vishwanews24

ಸೂಲಿಬೆಲೆಗೆ ಕಲಬುರಗಿ ಜಿಲ್ಲಾ ಪ್ರವೇಶಕ್ಕೆ ವಿಧಿಸಿದ್ದ ನಿರ್ಬಂಧ ತೆರವುಗೊಳಿಸಿದ ಹೈಕೋರ್ಟ್‌

ಕಲಬುರಗಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್‌  ಕಾರ್ಯಕ್ರಮ ನಿರ್ಬಂಧ ಹೇರಿದ್ದ ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್‌ನ ಕಲಬುರಗಿ ಪೀಠ  ತೆರವುಗೊಳಿಸಿದೆ.

ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ  ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್‌ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಜಿಲ್ಲಾಡಳಿತ ರದ್ದು ಮಾಡಿ ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.

ಸೂಲಿಬೆಲೆ ಜಿಲ್ಲೆ ಪ್ರವೇಶಿಸಿದರೆ ಶಾಂತಿ ಕದಡುತ್ತಾರೆ ಹಾಗೂ ಕಾನೂನು ವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಫೆ.‌29 ರಿಂದ ಮಾರ್ಚ್‌ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.

ಜಿಲ್ಲಾಡಳಿತದ ಆದೇಶವನ್ನ ಪ್ರಶ್ನಿಸಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಶ್ರೀಶಾನಂದ ಅವರಿದ್ದ ಪೀಠ, ಈ ಹಿಂದೆ ಕಾರ್ಯಕ್ರಮ ನಡೆಸಲು ಪೊಲೀಸರು ನೀಡಿದ್ದ ಅನುಮತಿಯನ್ನು ನೀಡಬೇಕು. ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೇಳಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವು ಮಾಡಿತು.

ಕೋರ್ಟ್‌ ತೀರ್ಪು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸೂಲಿಬೆಲೆ, ಅಂಬೇಡ್ಕರ್‌ ನೀಡಿದ ಸಂವಿಧಾನದಿಂದ ಧೈರ್ಯವಾಗಿ ಪ್ರಶ್ನೆ ಮಾಡಿ ನಾವು ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ. ದೇಶ ಭಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ತಾಪುರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

11 hours ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

12 hours ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

12 hours ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

12 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

12 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

15 hours ago