ಕಲಬುರಗಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್ ಕಾರ್ಯಕ್ರಮ ನಿರ್ಬಂಧ ಹೇರಿದ್ದ ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ತೆರವುಗೊಳಿಸಿದೆ.
ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಜಿಲ್ಲಾಡಳಿತ ರದ್ದು ಮಾಡಿ ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
ಸೂಲಿಬೆಲೆ ಜಿಲ್ಲೆ ಪ್ರವೇಶಿಸಿದರೆ ಶಾಂತಿ ಕದಡುತ್ತಾರೆ ಹಾಗೂ ಕಾನೂನು ವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಫೆ.29 ರಿಂದ ಮಾರ್ಚ್ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.
ಜಿಲ್ಲಾಡಳಿತದ ಆದೇಶವನ್ನ ಪ್ರಶ್ನಿಸಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಶ್ರೀಶಾನಂದ ಅವರಿದ್ದ ಪೀಠ, ಈ ಹಿಂದೆ ಕಾರ್ಯಕ್ರಮ ನಡೆಸಲು ಪೊಲೀಸರು ನೀಡಿದ್ದ ಅನುಮತಿಯನ್ನು ನೀಡಬೇಕು. ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೇಳಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವು ಮಾಡಿತು.
ಕೋರ್ಟ್ ತೀರ್ಪು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸೂಲಿಬೆಲೆ, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಧೈರ್ಯವಾಗಿ ಪ್ರಶ್ನೆ ಮಾಡಿ ನಾವು ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ. ದೇಶ ಭಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ತಾಪುರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…