ಕಲಬುರಗಿ: ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ನಮೋ ಭಾರತ್ ಕಾರ್ಯಕ್ರಮ ನಿರ್ಬಂಧ ಹೇರಿದ್ದ ಕಲಬುರಗಿ ಜಿಲ್ಲಾಡಳಿತಕ್ಕೆ ಭಾರೀ ಮುಖಭಂಗವಾಗಿದೆ. ಚಕ್ರವರ್ತಿ ಸೂಲಿಬೆಲೆ ಅವರ ಪ್ರವೇಶಕ್ಕೆ ಜಿಲ್ಲಾಡಳಿತ ಹೇರಿದ್ದ ನಿರ್ಬಂಧವನ್ನು ಕರ್ನಾಟಕ ಹೈಕೋರ್ಟ್ನ ಕಲಬುರಗಿ ಪೀಠ ತೆರವುಗೊಳಿಸಿದೆ.
ಗುರುವಾರ ಸಂಜೆ 6 ಗಂಟೆಗೆ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪ್ರತಿನಿಧಿಸುವ ಚಿತ್ತಾಪುರ ಪಟ್ಟಣದ ಬಾಪುರಾವ್ ಪಾಟೀಲ್ ಕಲ್ಯಾಣ ಮಂಟಪದಲ್ಲಿ ನಮೋ ಭಾರತ್ ಕಾರ್ಯಕ್ರಮ ಆಯೋಜನೆಗೊಂಡಿತ್ತು. ಈ ಕಾರ್ಯಕ್ರಮಕ್ಕೆ ನೀಡಿದ್ದ ಅನುಮತಿಯನ್ನು ರಾತ್ರೋರಾತ್ರಿ ಜಿಲ್ಲಾಡಳಿತ ರದ್ದು ಮಾಡಿ ಸೂಲಿಬೆಲೆ ಪ್ರವೇಶಕ್ಕೆ ನಿರ್ಬಂಧ ಹೇರಿತ್ತು.
ಸೂಲಿಬೆಲೆ ಜಿಲ್ಲೆ ಪ್ರವೇಶಿಸಿದರೆ ಶಾಂತಿ ಕದಡುತ್ತಾರೆ ಹಾಗೂ ಕಾನೂನು ವ್ಯವಸ್ಥೆ ಹಾಳಾಗಬಹುದು ಎಂಬ ನಿಟ್ಟಿನಲ್ಲಿ ಕಲಬುರಗಿ ಸಹಾಯಕ ಆಯುಕ್ತರು ಫೆ.29 ರಿಂದ ಮಾರ್ಚ್ 4ರವರೆಗೆ ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಿ ಆದೇಶ ಹೊರಡಿಸಿದ್ದರು.
ಜಿಲ್ಲಾಡಳಿತದ ಆದೇಶವನ್ನ ಪ್ರಶ್ನಿಸಿ ನಮೋ ಬ್ರಿಗೇಡ್ ಮತ್ತು ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು ಅರ್ಜಿಯನ್ನು ಮಾನ್ಯ ಮಾಡಿದ ನ್ಯಾ. ಶ್ರೀಶಾನಂದ ಅವರಿದ್ದ ಪೀಠ, ಈ ಹಿಂದೆ ಕಾರ್ಯಕ್ರಮ ನಡೆಸಲು ಪೊಲೀಸರು ನೀಡಿದ್ದ ಅನುಮತಿಯನ್ನು ನೀಡಬೇಕು. ಪೊಲೀಸರು ನೀಡಿದ್ದ ನಿಯಮಾವಳಿಗೆ ಅನುಗುಣವಾಗಿ ಕಾರ್ಯಕ್ರಮ ಆಯೋಜಿಸಬೇಕು. ಜಿಲ್ಲಾ ಪ್ರವೇಶಕ್ಕೆ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೇಳಿ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವು ಮಾಡಿತು.
ಕೋರ್ಟ್ ತೀರ್ಪು ಬಂದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಸೂಲಿಬೆಲೆ, ಅಂಬೇಡ್ಕರ್ ನೀಡಿದ ಸಂವಿಧಾನದಿಂದ ಧೈರ್ಯವಾಗಿ ಪ್ರಶ್ನೆ ಮಾಡಿ ನಾವು ಕಾರ್ಯಕ್ರಮಕ್ಕೆ ಅನುಮತಿ ಪಡೆದಿದ್ದೇವೆ. ದೇಶ ಭಕ್ತ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಚಿತ್ತಾಪುರಕ್ಕೆ ಬರಬೇಕು ಎಂದು ಅವರು ಮನವಿ ಮಾಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…