ಮಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರ ಪಕ್ಷಾಂತರದಿಂದಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾಗಿದೆ. ಹೊಸ ಸರ್ಕಾರ ರಚನೆಯಾದ ಬಳಿಕ ನೆರೆ ಬಂದಿದೆ. ಆದರೆ, ಕೇಂದ್ರ ಸರ್ಕಾರ ಇದಕ್ಕೆ ಸ್ಪಂದಿಸಿಲ್ಲ. ಇದೊಂದು ನಿಷ್ಕ್ರಿಯ ಸರ್ಕಾರ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಈ ಹಿಂದೆ ಹುಲಿ ಎಂದಿದ್ದರು. ಇದೀಗ ಆನೆ ಎನ್ನುತ್ತಿದ್ದಾರೆ. ಈ ವಿಚಾರ ಅವರು ಒಪ್ಪಿಕೊಂಡಿದ್ದು, ನಾನೇನು ಮಾತನಾಡುವುದಿಲ್ಲ ಎಂಬುವುದಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಇನ್ನು ಕೇಂದ್ರ ಸರ್ಕಾರದ ವಿರುದ್ದ ಚಿಂತಕ ಚಕ್ರವರ್ತಿ ಸೂಲಿಬೆಲೆ ಅಸಮಾಧಾನ ವ್ಯಕ್ತಪಡಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಸೂಲಿಬೆಲೆಗೆ ಅವರ ಪರವಾಗಿ ನಿಂತು ಸಾಕಾಗಿ ಹೋಗಿದೆ. ಅವರು ಹೇಳಿದ ಒಂದು ಮಾತು ಕೂಡ ಅನುಷ್ಠಾನವಾಗಿಲ್ಲ. ಸೂಲಿಬೆಲೆ ಹೇಳಿದ್ದೆಲ್ಲವೂ ಸುಳ್ಳು ಎನ್ನುವುದು ಜನರ ಮನಸ್ಸಿಗೆ ಬಂದಿದೆ. ಅವರು ಹೇಳಿದ್ದು ಯಾವುದೂ ಕೈಗೂಡಲೇ ಇಲ್ಲ ವಾಸ್ತವಿಕವಾಗಿ ಅವರ ಮಾತುಗಳು ಸುಳ್ಳು ಅನ್ನೋದು ಜನರಿಗೆ ಅರ್ಥವಾಗಿದೆ. ಇದೀಗ ಅವರೇ ಕೇಂದ್ರದ ವಿರುದ್ಧ ಮಾತನಾಡುತ್ತಿದ್ದಾರೆ. ಅವರ ಮಾತುಗಳು ಅನುಷ್ಟಾನಕ್ಕೆ ಬರದ ಹಿನ್ನೆಲೆ ಈ ರೀತಿ ವರ್ತಿಸುತ್ತಿದ್ದಾರೆ ಎಂದು ರಮಾನಾಥ ರೈ ಪ್ರತಿಕ್ರಿಯೆ ನೀಡಿದ್ದಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…