Featured

ಸೆಪ್ಟೆಂಬರ್ 7 ರಂದು ಪಡುಬಿದ್ರಿಯಲ್ಲಿ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ -Vishwanews24

ಉಡುಪಿ:ದಿನಾಂಕ 07-09-2019 ನೇ ಶನಿವಾರ ಪಡುಬಿದ್ರಿಯ ಸಾಗರ ವಿದ್ಯಾ ಮಂದಿರ ಶಾಲೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಉಡುಪಿ ಇದರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟವು ನಡೆಯಲಿರುವುದು.

17ರ ವಯೋಮಾನದ ಬಾಲಕ-ಬಾಲಕಿಯರು ಮತ್ತು 14 ರ ವಯೋಮಾನದ ಬಾಲಕ – ಬಾಲಕಿಯರ ವಿಭಾಗಗಳಲ್ಲಿ ಬೈಂದೂರು, ಕುಂದಾಪುರ, ಕಾರ್ಕಳ, ಉಡುಪಿ. ಬ್ರಹ್ಮಾವರ ವಲಯಗಳ ಒಟ್ಟು 20 ತಂಡಗಳು ಭಾಗವಹಿಸಲಿದೆ.

ಪಂದ್ಯಾಟವು ಮ್ಯಾಟಲ್ಲಿ ನಡೆಯಲಿದ್ದು, ಪ್ರತೀ ವಿಭಾಗಗಳಲ್ಲಿ ಗೆದ್ದ ತಂಡಗಳಿಗೆ ಪ್ರಥಮ ಮತ್ತು ದ್ವಿತೀಯ ಬಹುಮಾನ ನೀಡಲಾಗುವುದು. ಹಾಗೂ ಬೆಸ್ಟ್ ರೈಡರ್, ಬೆಸ್ಟ್ ಡಿಫೆಂಡರ್ ಹಾಗೂ ಬೆಸ್ಟ್ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿಗಳನ್ನು ನೀಡಲಾಗುವುದು. ಗೆದ್ದ ತಂಡಗಳು ಮೈಸೂರು ವಿಭಾಗ ಮಟ್ಟದ ಪಂದ್ಯಾಟಗಳಿಗೆ ಆಯ್ಕೆಯಾಗಿ ವಿಭಾಗ ಮಟ್ಟದಲ್ಲಿ ಪ್ರತಿನಿಧಿಸಲಿರುವರು.

ದಿನಾಂಕ 07.09.2019 ನೇ ಶನಿವಾರ ಬೆಳಿಗ್ಗೆ 9.30 ಕ್ಕೆ ಕಾಪು ವಿಧಾನ ಸಭಾ ಶಾಸಕರಾದ ಮಾನ್ಯ ಶ್ರೀ.ಲಾಲಾಜಿ ಆರ್ ಮೆಂಡನ್ ಅವರ ಅಮೃತ ಹಸ್ತದಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಲಿರುವುದು. ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಪಡುಬಿದ್ರಿ ಬೀಡಿನ ಅರಸರಾದ ರತ್ನಾಕರ್ ರಾಜ್ ಕಿನ್ಯಕ್ಕ ಬಲ್ಲಾಳ್, ಶ್ರೀ ಮನೋಹರ್ ಶೆಟ್ಟಿ, ಸಾಯಿರಾಧ ಗ್ರೂಪ್ಸ್ ಉಡುಪಿ, ಶ್ರೀಮತಿ ಗಾಯತ್ರಿ ರಾವ್, ದಾನಿಗಳು ಪಡುಬಿದ್ರಿ. ಜಿಲ್ಲಾ ಪಂಚಾಯತ್ ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಉಡುಪಿ ತಾಲೂಕು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ನೀತಾ ಗುರುರಾಜ್, ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಉಡುಪಿ ವಲಯ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಮಧುಕರ್ ಎಸ್, ಉಡುಪಿ ತಾಲೂಕು ದೈಹಿಕ ಶಿಕ್ಷಣಾಧಿಕಾರಿ ವಿಶ್ವನಾಥ ಬಾಯರಿ, ಊರ ಪರ ಊರಿನ ಗಣ್ಯ ವ್ಯಕ್ತಿಗಳು ಭಾಗವಹಿಸಲಿದ್ದಾರೆ ಎಂದು ಸಾಗರ ವಿದ್ಯಾ ಮಂದಿರ ಪಡುಬಿದ್ರಿಯ ಸಂಚಾಲಕರಾದ ಸುಕುಮಾರ್ ಸಿ ಶ್ರೀಯಾನ್ ಕಾಪುವಿನಲ್ಲಿ ನಡೆದ ಪತ್ರೀಕಾಗೋಷ್ಠಿಯಲ್ಲಿ ತಿಳಿಸಿದರು.

ಸಾಯಂಕಾಲ ನಡೆಯುವ ಸಮಾರೋಪ ಸಮಾರಂಭದಲ್ಲಿ ಪಡುಬಿದ್ರಿ ಗ್ರಾಮ ಪಂಚಾಯತ್ ಅಧ್ಯಕ್ಷೆಯಾದ ಶ್ರೀಮತಿ ದಮಯಂತಿ ವಿ ಅಮೀನ್, ರಾಕೇಶ್ ಮಲ್ಲಿ, ರಾಜ್ಯ ಅಮೆಚ್ಯುರ್ ಕಬಡ್ಡಿ ಸಂಸ್ಥೆಯ ಚೇರ್‍ಮ್ಯಾನ್, ಕಿಶೋರ್ ಆಳ್ವ, ಅಧ್ಯಕ್ಷರು ಮತ್ತು ಜಂಟಿ ನಿರ್ದೇಶಕರು ಅದಾನಿ, ಉದ್ಯಮಿಯಾದ ರಕುವ್ವಾನಿ, ಪೂಣೆಯ ಉದ್ಯಮಿ ಶ್ರೀ ಎರ್ಮಾಳ್ ಚಂದ್ರಹಾಸ್ ಶೆಟ್ಟಿ ಹಾಗೂ ಇನ್ನಿತರ ಗಣ್ಯರು ಬಹುಮಾನ ವಿತರಣೆ ಮಾಡಲಿರುವರು.

ಪತ್ರೀಕಾಗೋಷ್ಠಿಯಲ್ಲಿ ರಕ್ಷಕರ ಸಂಘದ ಅಧ್ಯಕ್ಷ ಗಣೇಶ್ ಎನ್ ಕೋಟ್ಯಾನ್ ,ಮುಖ್ಯೋಪಧ್ಯಾಯಿನಿ ಶ್ರೀಮತಿ ಪದ್ಮಶ್ರೀ ಸುರೇಶ್ ರಾವ್,ಮೊದಲಾದವರು ಉಪಸ್ಥಿತರಿದ್ದರು.

 

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago