Featured

ಸೆ. 07 ರಂದು ಭಾರತದಾದ್ಯಂತ ಚಂದ್ರಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? vishwanews24

ಸೆ. 07  ರಂದು ಭಾರತದಾದ್ಯಂತ ಚಂದ್ರ ಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ?

ಬೆಂಗಳೂರು: ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ. ವಿಜ್ಞಾನಿಗಳು ಹಾಗೂ ಜ್ಯೋತಿಷ್ಯರು ಈ ಗ್ರಹಣದ ಬಗ್ಗೆ ಹೇಳೋದೇನು?

ಸೆ.7 ಮತ್ತು 8 ರಂದು ಗ್ರಹಣ ಸಂಭವಿಸಲಿದೆ. ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56 ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್‌ ತಿಳಿಸಿದ್ದಾರೆ.

ಚಂದ್ರಗ್ರಹಣ ಅಂದರೆ ಸಾಮಾನ್ಯವಾಗಿ ಕೆಡುಕು ಎನ್ನುವ ಭಾವನೆಯೇ ಹೆಚ್ಚು. ರಾಜಕೀಯ ವಿಪ್ಲವ ಪ್ರಾಕೃತಿಕ ಅವಘಡ ಸಂಭವಿಸುತ್ತದೆ. ಸಂಬಂಧಗಳ ಮಧ್ಯೆಯೂ ಚಂದ್ರಗ್ರಹಣ ಬಿರುಕು ಮೂಡಿಸಬಹುದು. ಚಂದ್ರಗ್ರಹಣ 12 ರಾಶಿಯ ಮೇಲೂ ಪ್ರಭಾವ ಬೀರಲಿದೆ. ಕೆಲ ರಾಶಿಗೆ ಅದೃಷ್ಟ ಕೆಲ ರಾಶಿಗೆ ಸಂಕಷ್ಟ ಹಾಗೂ ಕೆಲ ರಾಶಿಗೆ ಮಿಶ್ರಫಲವನ್ನು ಈ ಗ್ರಹಣ ತರಲಿದೆ ಎನ್ನುತ್ತಾರೆ ಜ್ಯೋತಿಷಿಗಳು.

ಯಾವ ರಾಶಿಗೆ ಏನು ಫಲ?

ಶುಭಫಲ: ಧನು, ಕನ್ಯಾ, ಮೇಷ, ವೃಷಭ

ಮಿಶ್ರಫಲ: ಮಕರ, ಸಿಂಹ, ಮಿಥುನ, ತುಲಾ

ಅಶುಭ ಫಲ: ಕುಂಭ, ವೃಶ್ಚಿಕ, ಕರ್ಕ, ಮೀನ

ರಕ್ತ ಚಂದ್ರಗ್ರಹಣ ಆರಂಭ ಯಾವಾಗ?

ಸ್ಪರ್ಶಕಾಲ: 8.58 ನಿಮಿಷ
ಮಧ್ಯಮ: 9.57 (ಚಂದ್ರನ ಗೋಲದ ಒಂದು ಪಾರ್ಶ್ವ ನಿಧಾನವಾಗಿ ಬಣ್ಣ ಬದಲಾಯಿಸುವ ಪ್ರಕ್ರಿಯೆ ಆರಂಭ
ರಾತ್ರಿ 11 ಗಂಟೆಯಿಂದ 12:22 ನಿಮಿಷದ ವರೆಗೆ ಸಂಪೂರ್ಣ ಚಂದ್ರಗ್ರಹಣದ ದೃಶ್ಯ ಗೋಚರವಾಗಲಿದೆ.

ಗ್ರಹಣ ಮೋಕ್ಷ

ಸೆಪ್ಟೆಂಬರ್ 8 ರಂದು ಮಧ್ಯರಾತ್ರಿ 2:25 ನಿಮಿಷಕ್ಕೆ
5 ಗಂಟೆ 27 ನಿಮಿಷಗಳ ಕಾಲ ಸುದೀರ್ಘ ಗ್ರಹಣ ಇರಲಿದೆ. ಬರಿ ಕಣ್ಣಿನಿಂದಲೇ ಈ ವಿದ್ಯಮಾನ ನೋಡಬಹುದು. ಭಾರತದಾದ್ಯಂತ ಚಂದ್ರಗ್ರಹಣ ಗೋಚರಿಸಲಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago