Featured

ಸೆ. 07 ರಂದು ಭಾರತದಾದ್ಯಂತ ಚಂದ್ರಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ? vishwanews24

ಸೆ. 07  ರಂದು ಭಾರತದಾದ್ಯಂತ ಚಂದ್ರ ಗ್ರಹಣ ಗೋಚರ : ಯಾವ ರಾಶಿಗೆ ಶುಭ, ಅಶುಭ?

ಬೆಂಗಳೂರು: ಸುದೀರ್ಘ ಅವಧಿಯ ಅಪರೂಪದ ಚಂದ್ರಗ್ರಹಣ ಭಾರತದಾದ್ಯಂತ ಗೋಚರಿಸಲಿದೆ. ಸೆ.7 ಮತ್ತು 8 ರಂದು ಚಂದ್ರಗ್ರಹಣ ಸಂಭವಿಸಲಿದೆ. ವಿಜ್ಞಾನಿಗಳು ಹಾಗೂ ಜ್ಯೋತಿಷ್ಯರು ಈ ಗ್ರಹಣದ ಬಗ್ಗೆ ಹೇಳೋದೇನು?

ಸೆ.7 ಮತ್ತು 8 ರಂದು ಗ್ರಹಣ ಸಂಭವಿಸಲಿದೆ. ಸೆ.7ರ ರಾತ್ರಿ 9:57ರ ರಾತ್ರಿ ಸ್ಪರ್ಶಕಾಲ ಹಾಗೂ ಸೆ.8ರ ಮಧ್ಯರಾತ್ರಿ 1:26ಕ್ಕೆ ಮೋಕ್ಷಕಾಲ ಸಂಭವಿಸಲಿದೆ. ಚಂದ್ರಗ್ರಹಣದ ಪೂರ್ಣ ಪ್ರಭಾವದ ಆರಂಭವು ಮಧ್ಯರಾತ್ರಿ 12:28 ರಿಂದ 1:56 ರ ವರೆಗೆ ಇರಲಿದೆ. ಸುದೀರ್ಘ ಅವಧಿ ಅಂದರೆ ಮೂರು ಗಂಟೆಗಳ ಕಾಲ ಸಂಭವಿಸಲಿದೆ. ಭಾರತದಲ್ಲಿ ಎಲ್ಲೆಡೆ ಗ್ರಹಣ ಗೋಚರವಾಗಲಿದೆ. ರಕ್ತವರ್ಣದಲ್ಲಿ ಚಂದಿರ ಗೋಚರಿಸಲಿದ್ದಾನೆ.

ಇದು ಪೂರ್ಣ ಚಂದ್ರಗ್ರಹಣ. ಇಡೀ ಚಂದ್ರ ಭೂಮಿಯ ದಟ್ಟವಾದ ನೆರಳನ್ನು ಪ್ರವೇಶಿಸುತ್ತದೆ. ಇದೊಂದು ಅಪರೂಪದ ವಿದ್ಯಮಾನ. ಖಗೋಳ ವಿಸ್ಮಯ ಎಂದು ನೆಹರೂ ತಾರಾಲಯದ ನಿರ್ದೇಶಕ ಗುರುಪ್ರಸಾದ್‌ ತಿಳಿಸಿದ್ದಾರೆ.

ಚಂದ್ರಗ್ರಹಣ ಅಂದರೆ ಸಾಮಾನ್ಯವಾಗಿ ಕೆಡುಕು ಎನ್ನುವ ಭಾವನೆಯೇ ಹೆಚ್ಚು. ರಾಜಕೀಯ ವಿಪ್ಲವ ಪ್ರಾಕೃತಿಕ ಅವಘಡ ಸಂಭವಿಸುತ್ತದೆ. ಸಂಬಂಧಗಳ ಮಧ್ಯೆಯೂ ಚಂದ್ರಗ್ರಹಣ ಬಿರುಕು ಮೂಡಿಸಬಹುದು. ಚಂದ್ರಗ್ರಹಣ 12 ರಾಶಿಯ ಮೇಲೂ ಪ್ರಭಾವ ಬೀರಲಿದೆ. ಕೆಲ ರಾಶಿಗೆ ಅದೃಷ್ಟ ಕೆಲ ರಾಶಿಗೆ ಸಂಕಷ್ಟ ಹಾಗೂ ಕೆಲ ರಾಶಿಗೆ ಮಿಶ್ರಫಲವನ್ನು ಈ ಗ್ರಹಣ ತರಲಿದೆ ಎನ್ನುತ್ತಾರೆ ಜ್ಯೋತಿಷಿಗಳು.

ಯಾವ ರಾಶಿಗೆ ಏನು ಫಲ?

ಶುಭಫಲ: ಧನು, ಕನ್ಯಾ, ಮೇಷ, ವೃಷಭ

ಮಿಶ್ರಫಲ: ಮಕರ, ಸಿಂಹ, ಮಿಥುನ, ತುಲಾ

ಅಶುಭ ಫಲ: ಕುಂಭ, ವೃಶ್ಚಿಕ, ಕರ್ಕ, ಮೀನ

ರಕ್ತ ಚಂದ್ರಗ್ರಹಣ ಆರಂಭ ಯಾವಾಗ?

ಸ್ಪರ್ಶಕಾಲ: 8.58 ನಿಮಿಷ
ಮಧ್ಯಮ: 9.57 (ಚಂದ್ರನ ಗೋಲದ ಒಂದು ಪಾರ್ಶ್ವ ನಿಧಾನವಾಗಿ ಬಣ್ಣ ಬದಲಾಯಿಸುವ ಪ್ರಕ್ರಿಯೆ ಆರಂಭ
ರಾತ್ರಿ 11 ಗಂಟೆಯಿಂದ 12:22 ನಿಮಿಷದ ವರೆಗೆ ಸಂಪೂರ್ಣ ಚಂದ್ರಗ್ರಹಣದ ದೃಶ್ಯ ಗೋಚರವಾಗಲಿದೆ.

ಗ್ರಹಣ ಮೋಕ್ಷ

ಸೆಪ್ಟೆಂಬರ್ 8 ರಂದು ಮಧ್ಯರಾತ್ರಿ 2:25 ನಿಮಿಷಕ್ಕೆ
5 ಗಂಟೆ 27 ನಿಮಿಷಗಳ ಕಾಲ ಸುದೀರ್ಘ ಗ್ರಹಣ ಇರಲಿದೆ. ಬರಿ ಕಣ್ಣಿನಿಂದಲೇ ಈ ವಿದ್ಯಮಾನ ನೋಡಬಹುದು. ಭಾರತದಾದ್ಯಂತ ಚಂದ್ರಗ್ರಹಣ ಗೋಚರಿಸಲಿದೆ.

Vishwa News 24

Recent Posts

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ – vishwanews24

ರೀಲ್ಸ್ ಮಾಡಲು ಹೋಗಿ ಸಮುದ್ರಪಾಲಾದ  ಐಟಿ ಉದ್ಯೋಗಿ ಕಾರವಾರ: ರೀಲ್ಸ್ ಮಾಡಲು ಹೋಗಿ ಐಟಿ ಉದ್ಯೋಗಿಯೊಬ್ಬ  ಸಮುದ್ರಪಾಲಾದ ಘಟನೆ ಉತ್ತರ…

10 hours ago

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ – vishwanews24

ತಮಿಳುನಾಡು ಸಿಎಂ ವಿಜಯ್ ವಿಚ್ಛೇದನ ಪ್ರಕರಣ: ಆಗಸ್ಟ್ 7ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್ ಚೆನ್ನೈ :ತಮಿಳುನಾಡು ಮುಖ್ಯಮಂತ್ರಿ, ನಟ ದಳಪತಿ…

10 hours ago

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ – vishwanews24

ಕೊಡವೂರು: ಶಂಕರನಾರಾಯಣ ದೇವಸ್ಥಾನದ ತಾತ್ಕಾಲಿಕ ಮೇಲುಸ್ತುವಾರಿ ವೆಂಕಟಕೃಷ್ಣ ನಾಪತ್ತೆ ಮಲ್ಪೆ :ಉಡುಪಿ ತಾಲೂಕಿನ ಕೊಡವೂರು ಗ್ರಾಮದ ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ…

11 hours ago

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ – vishwanews24

ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆ ಪರಿಷ್ಕರಣೆ: ಸೌಲಭ್ಯ ಪಡೆಯಲು ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಬೆಂಗಳೂರು: ಗೃಹಲಕ್ಷ್ಮಿ, ಗೃಹಜ್ಯೋತಿ ಯೊಜನೆಗಳಲ್ಲಿ ನಕಲಿ…

11 hours ago

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ – vishwanews24

ಕಾಸರಗೋಡು: ಬೇಕಲ ಕಡಲತೀರದಲ್ಲಿ ಸಮುದ್ರಪಾಲಾದ ಕೊಟ್ಟಾಯಂನ ಇಬ್ಬರು ವಿದ್ಯಾರ್ಥಿಗಳು; ಮತ್ತಿಬ್ಬರ ರಕ್ಷಣೆ ಕಾಸರಗೋಡು: ಬೇಕಲ ಕೋಟೆಯ ಸಮೀಪವಿರುವ ಪಳ್ಳಿಕೆರೆ ಕಡಲತೀರದಲ್ಲಿ…

11 hours ago

ಹಿಂದಿ ಕಿರುತೆರೆ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮುಂಬೈ: ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಲೆ…

11 hours ago