ಬೆಂಗಳೂರು: ಇದೇ ತಿಂಗಳ 15ರಂದು ಮೈಸೂರಿನಲ್ಲಿ ವಿಷ್ಣು ಸ್ಮಾರಕಕ್ಕೆ ಭೂಮಿ ಪೂಜೆ ನೆರವೇರಲಿದೆ ಎಂದು ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭಾರತಿ ವಿಷ್ಣುವರ್ಧನ್ ಹಾಗೂ ಅನಿರುದ್ಧ್ ಭೇಟಿ ಮಾಡಿ ವಿಷ್ಣು ಸ್ಮಾರಕ ನಿರ್ಮಾಣದ ಗುದ್ದಲಿ ಪೂಜೆ ನೆರೆವೇರಿಸುವಂತೆ ಮನವಿ ಮಾಡಿಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಭಾರತಿ, 11ನೇ ವರ್ಷದ ವಿಷ್ಣುವರ್ಧನ್ ಪುಣ್ಯ ಸ್ಮರಣೆಗೆ ಸಿಂಎಂ ಅವರನ್ನ ಕರೆಯಲು ಬಂದಿದ್ದೇವೆ. ಮೈಸೂರಿನಲ್ಲಿ ವಿಷ್ಣುವರ್ಧನ್ ಸ್ಮಾರಕ ನಿರ್ಮಾಣ ಆಗುತ್ತಿದೆ. ಈ ತಿಂಗಳ 15ರಂದು ಸ್ಮಾರಕದ ಗುದ್ದಲಿ ಪೂಜೆ ಕಾರ್ಯಕ್ರಮವಿದೆ. ಸೂಕ್ತ ಭದ್ರತೆಗಾಗಿ ಮತ್ತು ಉದ್ಘಾಟನಾ ಕಾರ್ಯಕ್ರಮಕ್ಕಾಗಿ ಸಿಎಂಗೆ ಮನವಿ ಮಾಡಿದ್ದೇವೆ ಎಂದರು.
ಕೋವಿಡ್ ಇರೋ ಕಾರಣ ಸಿ.ಎಂ ಗುದ್ದಲಿಪೂಜೆಗೆ ಬರಲು ಆಗುತ್ತಿಲ್ಲ. ಹೀಗಾಗಿ ಅವರು ಆನ್ ಲೈನ್ ಮೂಲಕ ವಿಷ್ಣು ಸ್ಮಾರಕದ ಶಂಕುಸ್ಥಾಪನೆ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…
2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನು ನಿರ್ಮಿಸುತ್ತೇವೆ : ಪ್ರಧಾನಿ ಮೋದಿ ನವದೆಹಲಿ: 2047ರ ವೇಳೆಗೆ ‘ವಿಕಸಿತ ಭಾರತ’ದ ಕನಸನ್ನು…