Featured

ಸೆ.19 ರಂದು ಫ್ರಾನ್ಸ್ ನ ರಫೇಲ್ ಸಮರ ವಿಮಾನ ಭಾರತೀಯ ವಾಯುಪಡೆಗೆ ಸೇರ್ಪಡೆ -Vishwanews24

ನವದೆಹಲಿ:  ಫ್ರಾನ್ಸ್ ನ ರಫೇಲ್ ಸಮರ ವಿಮಾನ ಭಾರತೀಯ ವಾಯುಪಡೆಗೆ ಇದೇ 9 ರಂದು ಔಪಚಾರಿಕವಾಗಿ ಸೇರ್ಪಡೆಯಾಗಲಿದೆ.

ಇದಕ್ಕಾಗಿ ರಕ್ಷಣಾ  ಸಚಿವ  ರಾಜನಾಥ್ ಸಿಂಗ್ ಮತ್ತು  ಮುಖ್ಯ ವಾಯುಪಡೆಯ ಮುಖ್ಯಸ್ಥ ಬಿಎಸ್ ಧನೋವಾ ಫ್ರಾನ್ಸ್ ಗೆ  ಭೇಟಿ ನೀಡಲಿದ್ದಾರೆ  ಎನ್ನಲಾಗಿದೆ.   9 ರಂದು ಫ್ರಾನ್ಸ್ ತನ್ನ ಮೊದಲ ರಫೇಲ್ ಫೈಟರ್ ವಿಮಾನವನ್ನು ಔಪಚಾರಿಕವಾಗಿ ಹಸ್ತಾಂತರಿಸಲಿದೆ ಎಂದು ಫ್ರಾನ್ಸ್ಅಧಿಕಾರಿಗಳು ಹೇಳಿದ್ದಾರೆ ಎಂದೂ ವರದಿ ಯಾಗಿದೆ .

ಔಪಚಾರಿಕ ಸೇರ್ಪಡೆ ಸಮಾರಂಭವು ಫ್ರಾನ್ಸ್‌ನ ಮೆರಿಗ್ನಾಕ್‌ನಲ್ಲಿ ನಡೆಯಲಿದೆ.  ಇದಕ್ಕಾಗಿ ಸಚಿವ ರಾಜನಾಥ್ ಸಿಂಗ್ ಕೂಡ ಫ್ರಾನ್ಸ್‌ಗೆ ತೆರಳುವುದು ಬಹತೇಕ ನಿಚ್ಚಳ ಎನ್ನಲಾಗಿದೆ. ಭಾರತ-  ಫ್ರಾನ್ಸ್ ಒಪ್ಪಂದಕ್ಕೆ ಸಹಿ ಹಾಕಿದ ಮೂರು ವರ್ಷಗಳಲ್ಲಿ  ಮೊದಲನೆಯ ಸಮರ ವಿಮಾನ ಸೇರ್ಪಡೆ  ಸಮಾರಂಭ  ಸೆಪ್ಟೆಂಬರ್ ಮೂರನೇ ವಾರದಲ್ಲಿ ನಡೆಸಬೇಕು ಎಂದು ಭಾರತ ಫ್ರೆಂಚ್ ಸರ್ಕಾರಕ್ಕೆ ಸಷ್ಟಪಡಿಸಿತ್ತು .

ನಾಲ್ಕು ರಫೇಲ್ ಜೆಟ್‌ ವಿಮಾನಗಳು ಮುಂದಿನ ಏಪ್ರಿಲ್-ಮೇ ತಿಂಗಳಲ್ಲಿ ಭಾರತಕ್ಕೆ ಬರಲಿವೆ  ಒಪ್ಪಂದದ ಪ್ರಕಾರ ಎಲ್ಲಾ 36 ವಿಮಾನಗಳು  2022 ರ ವೇಳೆಗೆ ವಾಯುಪಡೆಯ ವಶಕ್ಕೆ ಬರಲಿವೆ ಎಂದೂ ಹೇಳಲಾಗಿದೆ. 2016 ರಲ್ಲಿ ಭಾರತವು ಫ್ರಾನ್ಸ್‌ನಿಂದ 36 ರಫೇಲ್ ಸಮರ ವಿಮಾನ ಖರೀದಿಗಾಗಿ 59,ಸಾವಿರ  ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿತ್ತು.

Vishwa News 24

Recent Posts

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

14 minutes ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

26 minutes ago

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ : ಪ್ರಿಯಾಂಕ್ ಖರ್ಗೆ – vishwanews24

ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…

52 minutes ago

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು – vishwanews24

ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…

1 hour ago

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ – vishwanews24

ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು  ತಂಬಾಕು ಮತ್ತು ನಿಕೋಟಿನ್ ಹೊಂದಿರುವ…

1 hour ago

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಅಣ್ಣಾಮಲೈ  ಭೇಟಿ  – vishwanews24

ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ  ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ  ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…

2 hours ago