Featured

ಸೆ.2 ಪ್ರಧಾನಿ ಮೋದಿ ಮಂಗಳೂರಿಗೆ : ಅದ್ಧೂರಿ ಸ್ವಾಗತಕ್ಕೆ ಬಿಜೆಪಿ ಭರದ ಸಿದ್ಧತೆ ; ಸಂಸದರ ಬದಲಾವಣೆಯ ಕೂಗು ನಳಿನ್‌ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ – Vishwanews24

ಸೆ.2 ಪ್ರಧಾನಿ ಮೋದಿ ಮಂಗಳೂರಿಗೆ : ಅದ್ಧೂರಿ ಸ್ವಾಗತಕ್ಕೆ ಬಿಜೆಪಿ ಭರದ ಸಿದ್ಧತೆ ;

ನಳಿನ್‌ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬಾರದು ಜಾಲತಾಣಗಳಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರ ಅಭಿಯಾನ

ನಮ್ಮ ಜಿಲ್ಲೆಯ ಸಂಸದರ ಬದಲಾವಣೆಯ ಕೂಗು ಕೇಳಿ ಬರಲಿ ಸಂದೇಶ ವೈರಲ್

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಸೆ. 2ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಅದ್ಧೂರಿ ಸ್ವಾಗತಕ್ಕೆ ಬಿಜೆಪಿ ಭರದ ಸಿದ್ಧತೆ ನಡೆಸುತ್ತಿದೆ.

ಆದರೆ, ಇನ್ನೊಂದೆಡೆ ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಇನ್ನೊಂದು ಅವಧಿಗೆ ಸಂಸದರಾಗಿ ಮುಂದುವರಿಯಲು ಅವಕಾಶ ಕಲ್ಪಿಸಬಾರದು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹಿಂದು ಸಂಘಟನೆಗಳ ಕಾರ್ಯಕರ್ತರ ಅಭಿಯಾನ ವ್ಯಾಪಕವಾಗಿ ಮುಂದುವರಿದಿದೆ.

ನಾವು ಮಂಗಳೂರಿಗರು, ದೇಶದಲ್ಲೇ ಹಿಂದುತ್ವದ ಭದ್ರಕೋಟೆಯಾಗಿ ಕರಾವಳಿಯನ್ನು ಕಟ್ಟಿಕೊಂಡವರು. ನಮಗೆ ಹಿಂದುತ್ವದ ಜೊತೆಗೆ ಮಂಗಳೂರಿನ ಅಭಿವೃದ್ಧಿಯ ದೃಷ್ಟಿಕೋನ ಹೊಂದಿರುವ ನಾಯಕನ ಅಗತ್ಯವಿದೆ. ಸೆ. 2ರಂದು ಮೋದಿಜಿಯನ್ನು ಅದ್ಧೂರಿಯಾಗಿ ಸ್ವಾಗತಿಸುವ ಮೊದಲು ನಮ್ಮ ಜಿಲ್ಲೆಯ ಸಂಸದರ ಬದಲಾವಣೆಯ ಕೂಗು ಕೇಳಿ ಬರಲಿ’ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ‘ಪೋಸ್ಟ್‌ ಕಾರ್ಡ್‌’ ಸಂದೇಶವೊಂದನ್ನು ಹರಿಯಬಿಟ್ಟಿದೆ. ಈ ಸಂದೇಶವನ್ನು ‘ವಾಟ್ಸ್ಆ್ಯಪ್‌ ಸ್ಟೇಟಸ್‌’ ಹಾಕಿಕೊಂಡು ಅನೇಕರು ಬೆಂಬಲ ಸೂಚಿಸಿದ್ದಾರೆ.

 

ಮಂಗಳೂರು– ಹಾಸನ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಚತುಷ್ಪಥ ಕಾಮಗಾರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಂಟುತ್ತಾ ಸಾಗಿದೆ. ಕಾಮಗಾರಿ ನಡೆಯುವಲ್ಲಿ ಹೆದ್ದಾರಿ ಕಂಬಳದ ಗದ್ದೆಯಂತಾಗಿದ್ದು, ವಾಹನ ಸವಾರರು ಹೈರಾಣಾಗಿದ್ದಾರೆ. ಸುರತ್ಕಲ್‌ ಟೋಲ್‌ ಪ್ಲಾಜಾ ರದ್ದತಿ ಭರವಸೆ ಇನ್ನೂ ಈಡೇರಿಲ್ಲ. ಜಿಲ್ಲೆಯಲ್ಲಿ ಟೋಲ್‌ ನೀಡಿ ಬಳಸುವ ಹೆದ್ದಾರಿ ಗಳೆಲ್ಲವೂ ಹೊಂಡಮಯವಾಗಿವೆ. ಇವೆಲ್ಲವೂ ಜಿಲ್ಲೆಯ ಕಟ್ಟರ್‌ ಹಿಂದುತ್ವವಾದಿಗಳ ಕೆಂಗಣ್ಣಿಗೂ ಗುರಿಯಾಗಿವೆ.

ಹತ್ಯೆಗೊಳಗಾದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿ ಸಮಿತಿ ಸದಸ್ಯ ಪ್ರವೀಣ್‌ ನೆಟ್ಟಾರು ಅಂತಿಮ ಯಾತ್ರೆ ವೇಳೆ ಪಕ್ಷದ ಕಾರ್ಯಕರ್ತರು ನಳಿನ್‌ ಕಾರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರವೀಣ್‌ ಮನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ವೇಳೆಯೂ ಪ್ರತಿಭಟನೆಯ ಕೂಗೆದ್ದಿತ್ತು. ಈ ಬೆಳವಣಿಗೆಯಿಂದ ವಿಚಲಿತಗೊಂಡ ಬಿಜೆಪಿ ಮುಖಂಡರು, ಕೇರಳದ ಕೊಚ್ಚಿಗೆ ಸೆ. 2ರಂದು ಆಗಮಿಸಲಿರುವ ಪ್ರಧಾನಿಯನ್ನು ಮಂಗಳೂರಿಗೆ ಕರೆಸಿ ಕಾರ್ಯಕರ್ತರ ಆಕ್ರೋಶ ತಣಿಸುವ ಪ್ರಯತ್ನಕ್ಕೆ ಕೈಹಾಕಿದ್ದರು.

‘ಪಕ್ಷದ ಕಾರ್ಯಕರ್ತರಲ್ಲಿ ಅಂತಹ ಭಾವನೆ ಇಲ್ಲ. ಪ್ರಧಾನಿ ಕಾರ್ಯಕ್ರಮದ ಯಶಸ್ಸಿಗಾಗಿ ಜಿಲ್ಲೆಯ ಎಂಟೂ ವಿಧಾನಸಭಾ ಕ್ಷೇತ್ರಗಳಲ್ಲೂ ಪಕ್ಷದ ವತಿಯಿಂದಲೂ ಸಭೆ ನಡೆಸಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ’ ಎಂದು ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್‌ ಎಂ. ಹೇಳಿದ್ದಾರೆ.

ಆರ್ಥಿಕ ಬಿಕ್ಕಟ್ಟು – ಶಾಂಪೂ, ಚಾಕೊಲೇಟ್ ಸೇರಿದಂತೆ 300 ವಸ್ತುಗಳ ಆಮದು ನಿಷೇಧ ಹೇರಿದ ಶ್ರೀಲಂಕಾ – Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

11 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

14 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

14 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

14 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

14 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

15 hours ago