Featured

ಸೆ.20ರೊಳಗಾಗಿ ಮರಳು ದಿಬ್ಬ ತೆರವು ಮಾಡಲು ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಶಾಸಕ ರಘುಪತಿ ಭಟ್ -Vishwanews24

ಉಡುಪಿ: ಸಿಆರ್‌ಝಡ್ ವ್ಯಾಪ್ತಿಯಲ್ಲಿ ಸೆ.20ರೊಳಗಾಗಿ ಮರಳು ದಿಬ್ಬ ತೆರವು ಮಾಡಲು ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಜಿಲ್ಲೆಯ ಎಲ್ಲ ಶಾಸಕರು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಭೇಟಿ ಮಾಡಿ, ಸೆ.15ರೊಳಗೆ ಏಳು ಸದಸ್ಯರ ಸಮಿತಿ ಸಭೆ ನಡೆಸಿ ಹಿಂದಿನ ಪದ್ಧತಿಯಲ್ಲಿ ಎಫ್‌ಐಆರ್ ಆಗಿರುವವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಪರವಾನಗಿ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ವಹಿವಾಟು ನಡೆಸಲು ಮೂರು ತಿಂಗಳ ಸಮಯಾವಕಾಶ ಕೇಳಲಾಗಿದೆ.

ಇದಕ್ಕೆ ಗಣಿ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್ ಸಮ್ಮತಿ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ದರ ನಿಗದಿ ಮಾಡಲಾಗುವುದು. ಈಗಾಗಲೇ 8.7 ಲಕ್ಷ ಮೆಟ್ರಿಕ್ ಟನ್ ಮರಳು ಗುರುತಿಸಲಾಗಿದ್ದು, 3 ಯುನಿಟ್ 5,500 ರೂ.ನಂತೆ ಮರಳು ಜನರಿಗೆ ಲಭಿಸುವ ಸಾಧ್ಯತೆ ಇದೆ. ಅ.15ರಿಂದ ನಾನ್-ಸಿಆರ್‌ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಪ್ರಾರಂಭ ಮಾಡಲು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಇಬ್ಬರು ಗುತ್ತಿಗೆದಾರರು ಅರ್ಹತೆ ಪಡೆದಿದ್ದು, ಉಳಿದ ಒಂಬತ್ತು ಕಡೆಗಳಲ್ಲಿ ಷರತ್ತುಗಳನ್ನು ಸರಳೀಕರಣಗೊಳಿಸಲು ಸಲಹೆ ನೀಡಲಾಗಿದೆ ಎಂದರು.

ಕುಂದಾಪುರ-ಬೈಂದೂರಿನಲ್ಲಿ ಇಕೋ ಸೆನ್ಸಿಟಿವ್ ರೆನ್ ಎಂದು ಗುರುತಿಸಲಾಗಿದ್ದು, ಇಲ್ಲಿ ಮರಳು ದಿಬ್ಬ ತೆರವು ಮಾಡಲು ಅನುಮತಿಗಾಗಿ ಜಿಲ್ಲಾಧಿಕಾರಿ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.

 

 

 

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

3 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

3 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

3 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

4 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

5 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

5 hours ago