ಉಡುಪಿ: ಸಿಆರ್ಝಡ್ ವ್ಯಾಪ್ತಿಯಲ್ಲಿ ಸೆ.20ರೊಳಗಾಗಿ ಮರಳು ದಿಬ್ಬ ತೆರವು ಮಾಡಲು ಜಿಲ್ಲಾಧಿಕಾರಿ ಸೂಕ್ತ ಕ್ರಮ ಕೈಗೊಳ್ಳುವ ಬಗ್ಗೆ ಶಾಸಕ ರಘುಪತಿ ಭಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಜಿಲ್ಲೆಯ ಎಲ್ಲ ಶಾಸಕರು ಜಿಲ್ಲಾಧಿಕಾರಿ ಜಗದೀಶ್ ಅವರನ್ನು ಭೇಟಿ ಮಾಡಿ, ಸೆ.15ರೊಳಗೆ ಏಳು ಸದಸ್ಯರ ಸಮಿತಿ ಸಭೆ ನಡೆಸಿ ಹಿಂದಿನ ಪದ್ಧತಿಯಲ್ಲಿ ಎಫ್ಐಆರ್ ಆಗಿರುವವರನ್ನು ಹೊರತುಪಡಿಸಿ ಉಳಿದ ಎಲ್ಲರಿಗೂ ಪರವಾನಗಿ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸ್ಯಾಂಡ್ ಬಜಾರ್ ಆ್ಯಪ್ ಮೂಲಕ ವಹಿವಾಟು ನಡೆಸಲು ಮೂರು ತಿಂಗಳ ಸಮಯಾವಕಾಶ ಕೇಳಲಾಗಿದೆ.
ಇದಕ್ಕೆ ಗಣಿ ಇಲಾಖೆ ಕಾರ್ಯದರ್ಶಿ ಮಹೇಶ್ವರ ರಾವ್ ಸಮ್ಮತಿ ಸೂಚಿಸಿದ್ದಾರೆ. ರಾಜ್ಯ ಸರ್ಕಾರದ ಆದೇಶದಂತೆ ದರ ನಿಗದಿ ಮಾಡಲಾಗುವುದು. ಈಗಾಗಲೇ 8.7 ಲಕ್ಷ ಮೆಟ್ರಿಕ್ ಟನ್ ಮರಳು ಗುರುತಿಸಲಾಗಿದ್ದು, 3 ಯುನಿಟ್ 5,500 ರೂ.ನಂತೆ ಮರಳು ಜನರಿಗೆ ಲಭಿಸುವ ಸಾಧ್ಯತೆ ಇದೆ. ಅ.15ರಿಂದ ನಾನ್-ಸಿಆರ್ಝಡ್ ವ್ಯಾಪ್ತಿಯಲ್ಲಿ ಮರಳುಗಾರಿಕೆ ಪ್ರಾರಂಭ ಮಾಡಲು ಜಿಲ್ಲಾಡಳಿತ ಕ್ರಮ ತೆಗೆದುಕೊಳ್ಳಲಿದೆ. ಇಬ್ಬರು ಗುತ್ತಿಗೆದಾರರು ಅರ್ಹತೆ ಪಡೆದಿದ್ದು, ಉಳಿದ ಒಂಬತ್ತು ಕಡೆಗಳಲ್ಲಿ ಷರತ್ತುಗಳನ್ನು ಸರಳೀಕರಣಗೊಳಿಸಲು ಸಲಹೆ ನೀಡಲಾಗಿದೆ ಎಂದರು.
ಕುಂದಾಪುರ-ಬೈಂದೂರಿನಲ್ಲಿ ಇಕೋ ಸೆನ್ಸಿಟಿವ್ ರೆನ್ ಎಂದು ಗುರುತಿಸಲಾಗಿದ್ದು, ಇಲ್ಲಿ ಮರಳು ದಿಬ್ಬ ತೆರವು ಮಾಡಲು ಅನುಮತಿಗಾಗಿ ಜಿಲ್ಲಾಧಿಕಾರಿ ವರದಿಯೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…