ಬೆಂಗಳೂರು/ಮೈಸೂರು: ಈ ಬಾರಿ ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ನಾಡಹಬ್ಬ ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ದಸರಾ ಆಚರಣೆ ಕುರಿತ ಪೂರ್ವಭಾವಿ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಿಜೃಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ ಮಹತ್ವ ಮರೆಯಾಗಬಾರದು. ಅನಗತ್ಯವಾಗಿ ಹಣ ಖರ್ಚು ಮಾಡುವುದು ವೈಭವ ಅಲ್ಲ. ಜನರ ಸುರಕ್ಷತೆ ಮತ್ತು ಅನುಕೂಲಕ್ಕೆ ಪ್ರಥಮ ಆದ್ಯತೆ ಇರಲಿ ಎಂದು ಅಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಸೆಪ್ಟೆಂಬರ್ 22 ರಿಂದ ಅಕ್ಟೋಬರ್ 2 ರ ವರೆಗೆ ಒಟ್ಟು 11 ದಿನಗಳ ಕಾಲ ದಸರಾ ಆಚರಣೆ ನಡೆಯಲಿದೆ. ಕಳೆದ 100 ವರ್ಷದಲ್ಲಿ 8 ನೇ ಬಾರಿ 11 ದಿನದ ದಸರಾ ಆಚರಣೆ ಮಾಡಲಾಗುತ್ತಿದೆ. ಈ ಬಾರಿಯೂ 21 ದಿನಗಳ ಕಾಲ ದೀಪ ಅಲಂಕಾರ ಇರಲಿದೆ. ಈ ಬಾರಿ ಅಂದಾಜು 10 ಲಕ್ಷ ಜನ ದಸರಾದಲ್ಲಿ ಭಾಗವಹಿಸಬಹುದು ಎಂದು ನಿರೀಕ್ಷಿಸಲಾಗಿದೆ ಎಂದು ಹೇಳಿದ್ದಾರೆ.
ಪೊಲೀಸರು ಜನಸ್ನೇಹಿ ಆಗಿರಬೇಕು. ಪ್ರವಾಸಿಗರೊಂದಿಗೆ ಪ್ರೀತಿಯಿಂದ ವರ್ತಿಸಬೇಕು. ದಸರಾ ಕೊನೆಯ ದಿನ ಅಕ್ಟೋಬರ್ 2 ಗಾಂಧಿ ಜಯಂತಿ, ಹೀಗಾಗಿ ಟ್ಯಾಬ್ಲೋದಲ್ಲಿ ಗಾಂಧಿ ಜಯಂತಿಗೆ ಆದ್ಯತೆ ನೀಡಲು ನಿರ್ಧರಿಸಲಾಗಿದೆ ಎಂದಿದ್ದಾರೆ.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…