Featured

ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ” – vishwanews24

ಸೆ.22ರಿಂದ ಅ.3ರವರೆಗೆ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ “ಉಡುಪಿ ದಸರಾ”

ಉಡುಪಿ: ಉಡುಪಿ ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿ ಹಾಗೂ ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠದ ಆಶ್ರಯದಲ್ಲಿ 10ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ ” ಉಡುಪಿ ದಸರಾ” ಇದೇ ಸೆ.22ರಿಂದ ಅ.3ರವರೆಗೆ ಉಡುಪಿ ಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಪರ್ಯಾಯ ಪುತ್ತಿಗೆ ಮಠದ ಸುಗುಣೇಂದ್ರತೀರ್ಥ ಶ್ರೀಪಾದರು ತಿಳಿಸಿದರು.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ. 22ರಂದು ಬೆಳಿಗ್ಗೆ 9ಗಂಟೆಗೆ ನವದುರ್ಗೆಯರು ಮತ್ತು ಶ್ರೀ ಶಾರದಾ ಮಾತೆಯ ವಿಗ್ರಹವನ್ನು ಪ್ರತಿಷ್ಠಾಪಿಸಲಾಗುವುದು. ಪ್ರತೀ ದಿನ ದುರ್ಗಾಹೋಮ, ಅಕ್ಟೋಬರ್ 1 ರಂದು ಚಂಡಿಕಾಹೋಮ, ಸೆ. 25 ರಂದು ಶ್ರೀ ದುರ್ಗಾ ನಮಸ್ಕಾರ, ಧಾರ್ಮಿಕ ಕಾರ್ಯಕ್ರಮಗಳು ಜರಗಲಿದೆ ಎಂದರು.

ಸಾಂಸ್ಕೃತಿಕ ಸಂಭ್ರಮ:
ನವರಾತ್ರಿ ಉತ್ಸವದಲ್ಲಿ ಭಜನಾ ಕಾರ್ಯಕ್ರಮ, ಸಂಗೀತ, ನೃತ್ಯ ಸಿಂಚನ, ಯಕ್ಷಗಾನ, ನಾಟಕ, ಜನಪದ ಕಲರವ, ದಾಂಡೀಯಾ, ಕುಣಿತ ಭಜನೆ, ವಿವಿಧ ಸ್ಪರ್ಧೆಗಳು ಸೇರಿದಂತೆ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಪ್ರಥಮ ಭಾರಿಗೆ ದ್ವಂದ್ವ ಭಜನಾ ಜುಗಲ್ ಬಂದಿ ನಡೆಯಲಿದೆ. ಸೆ.25ರಂದು ಸಂಜೆ 4ಗಂಟೆಗೆ ಮಾತೃ ಸಂಗಮ ಕಾರ್ಯಕ್ರಮ ನಡೆಯಲಿದೆ.

ಭವ್ಯ ಶೋಭಾಯಾತ್ರೆ:
ಅಕ್ಟೋಬರ್ 3ರಂದು ಉಡುಪಿ ಶ್ರೀ ಕೃಷ್ಣ ಮಠದಿಂದ ಭವ್ಯ ಶೋಭಾಯಾತ್ರೆ ಹೊರಡಲಿದ್ದು, ಉಡುಪಿ ನಗರದ ಮುಖ್ಯ ಮಾರ್ಗದಲ್ಲಿ ಸಾಗಿ ಮಲ್ಪೆಯ ಸಮುದ್ರ ತೀರದಲ್ಲಿ ಸಮಾಪನಗೊಂಡು ಜಲಸ್ತಂಭನಗೊಳಿಸಲಾಗುವುದು ಎಂದು ಸಾರ್ವಜನಿಕ‌ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷ ಬೈಕಾಡಿ ಸುಪ್ರಸಾದ್ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಗೌರವ ಸಲಹೆಗಾರರಾದ ಪ್ರಸನ್ನ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳಾದ ರಮೇಶ್ ಭಟ್, ರಾಧಾಕೃಷ್ಣ ಮೆಂಡನ್, ತಾರಾ ಆಚಾರ್ಯ, ವೀಣಾ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

17 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

17 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

18 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

19 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

19 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

19 hours ago