Featured

ಸೆ. 22 ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ – vishwanews24

ಸೆ. 22 ರಂದು ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನ ಕಾಪು ತಾಲೂಕು ಮಟ್ಟದ ದಸರಾ ಕ್ರೀಡಾಕೂಟವು ಹೆಜಮಾಡಿ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ಸೆಪ್ಟಂಬರ್ 22 ರಂದು ನಡೆಯಲಿದೆ.

ಸ್ಪರ್ಧೆಗಳ ವಿವಿರ:

ಪುರುಷರಿಗೆ: ಅಥ್ಲೆಟಿಕ್ಸ್( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 5000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 110 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ, ಫುಟ್‌ಬಾಲ್ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಮಹಿಳೆಯರಿಗೆ: ಅಥ್ಲೆಟಿಕ್ಸ್ ( 100ಮೀ, 200 ಮೀ, 400 ಮೀ, 800 ಮೀ, 1500 ಮೀ, 3000 ಮೀ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡೆಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, 100 ಮೀ ಹರ್ಡಲ್ಸ್, 4*100 ಮೀ ರಿಲೇ, 4*400 ಮೀ ರಿಲೇ.), ಗುಂಪು ಆಟಗಳಾದ ವಾಲಿಬಾಲ್, ಖೋ-ಖೋ, ಕಬಡ್ಡಿ ಹಾಗೂ ಥ್ರೋಬಾಲ್ ಸ್ಪರ್ಧೆಗಳು ನಡೆಯಲಿವೆ.

ಭಾಗವಹಿಸುವ ಸ್ಪರ್ಧಿಗಳು ಸ್ಪರ್ಧೆ ನಡೆಯುವ ದಿನದಂದು ಬೆಳಗ್ಗೆ 9 ಗಂಟೆಯ ಒಳಗಾಗಿ ಸಂಘಟಕರಲ್ಲಿ ವರದಿ ಮಾಡಿಕೊಳ್ಳಬೇಕು. ಹೆಸರು ಹಾಗೂ ತಂಡವನ್ನು ನೋಂದಾಯಿಸಲು ಸೆಪ್ಟಂಬರ್ 19 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಯುವಜನ ಸೇವಾ ಕ್ರೀಡಾಧಿಕಾರಿ, ರಾಜೀವ್ ಗಾಂಧಿ ಕ್ರೀಡಾಂಗಣ ಹೆಜಮಾಡಿ ಕಾಪು ಮೊ.ನಂ: 9448770165 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Vishwa News 24

Recent Posts

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ ; ಟೋಲ್ ಗೇಟನ್ನು ತಕ್ಷಣ ತೆರವುಗೊಳಿಸಬೇಕೆಂದು ಆಗ್ರಹ – vishwanews24

ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…

17 hours ago

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಲು ಅವಕಾಶ ಇಲ್ಲ : ಧಾರ್ಮಿಕ ಉಡುಪುಗಳ ಗೊಂದಲ ಬಗ್ಗೆ ಪ್ರಿಯಾಂಕ ಖರ್ಗೆ ಸ್ಪಷ್ಟನೆ – vishwanews24

ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…

19 hours ago

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ – vishwanews24

ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…

19 hours ago

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ – vishwanews24

ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್‌ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…

19 hours ago

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ – vishwanews24

ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…

19 hours ago

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ – vishwanews24

ಕುಂದಾಪುರ ರಿಚರ್ಡ್‌ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…

19 hours ago