Featured

ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ – vishwanews24

ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’

ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ ಬಂಟ ಸಮಾಜದ ಪರವಾಗಿ ಇತ್ತೀಚೆಗೆ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಬಂಟ ಸಮಾಜದ ಹೆಮ್ಮೆಯ ನಾಯಕ ಕೊಡುಗೈ ದಾನಿ, ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿಯನ್ನು ನೀಡಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದ್ರಿ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಬೆಳಗ್ಗೆ 9:00 ಗಂಟೆಗೆ ಪಡುಬಿದ್ರಿ ಪೇಟೆಯಿಂದ ಬಂಟರ ಭವನದವರೆಗೆ ಅದ್ದೂರಿಯಾದ ಮೆರವಣಿಗೆ ನಡೆಯಲಿದೆ. ಸದ್ರಿ ಮೆರವಣಿಗೆಯಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿ ದಂಪತಿ ಹಾಗೂ ಇತರ ಅತಿಥಿಗಣ್ಯರನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಗುವುದು.

ಬೆಳಿಗ್ಗೆ 10:00 ರಿಂದ ಪಡುಬಿದ್ರಿ ಬಂಟರ ಸಂಘದ ಸದಸ್ಯರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಲಿದೆ. ಆ ಬಳಿಕ 10.30ರಿಂದ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ಸ್ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಸಿ.ಎ. ಅಶೋಕ ಶೆಟ್ಟಿ ಇವರು ನೆರವೇರಿಸಲಿದ್ದಾರೆ. ಸದ್ರಿ ಕಾರ್ಯಕ್ರಮಕ್ಕೆ ಇತರ ಎಲ್ಲಾ ಸಮಾಜ ಬಾಂಧವರಿಗೂ ಕೂಡ ಆಹ್ವಾನ ನೀಡಲಾಗಿದೆ.

ಸಿರಿಮುಡಿ ದತ್ತಿನಿಧಿ ಬಂಟರ ಸಂಘ ಪಡುಬಿದ್ರಿ ವತಿಯಿಂದ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ನೆರವಾಗಲು ವಿದ್ಯಾರ್ಥಿವೇತನ, ಸಮಾಜದ ಅಶಕ್ತರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ನೆರವು ಸೇರಿದಂತೆ ಹಲವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 15 ಲಕ್ಷ ರೂಪಾಯಿಗಳನ್ನು ವಿತರಿಸಲಾಗುವುದು. ಸಿರಿಮುಡಿ ದತ್ತಿನಿಧಿ ಪಡುಬಿದ್ರಿ ಇದರ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿಯವರ ನೇತೃತ್ವದಲ್ಲಿ ಸಮಾಜದ ದಾನಿಗಳಿಂದ ಸಂಗ್ರಹಿಸಿದ ಸುಮಾರು 1.31 ಕೋಟಿ ರೂಪಾಯಿಗಳನ್ನು ಶಾಶ್ವತ ಠೇವಣಿಯಾಗಿರಿಸಿ ಅದರಲ್ಲಿ ಬರುವ ಬಡ್ಡಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

ಸದ್ರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರುಣಾಕರ ಆರ್. ಶೆಟ್ಟಿ, ಸಿ.ಎಂ.ಡಿ. ಪೆನಿನ್ಸುಲಾ ಗ್ರೂಪ್ ಆಫ್ ಹೊಟೇಲ್ಸ್, ಮುಂಬಯಿ ಮತ್ತು ಎರ್ಮಾಳು ಸೀತಾರಾಮ ಶೆಟ್ಟಿ, ಮಾಜಿ ಅಧ್ಯಕ್ಷರು ಬಂಟ್ಸ್ ಸಂಘ ಪಿಂಪ್ರಿ ಚಿಂಚಿವಾಡ ಪುಣೆ ಇವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬರುವ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಆಯೋಜಿಸಲು ಉದ್ದೇಶಿಸಿರುವ ಅಂತರ್ ರಾಜ್ಯ ಬಂಟರ ಕ್ರೀಡಾಕೂಟ ಇದರ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಗುವುದು.

ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸಮಾಜದ ಎಲ್ಲಾ ವರ್ಗದವರಿಗೂ ಅನುಕೂಲವಾಗುವ ಉದ್ದೇಶದಿಂದ ಸಿರಿಮುಡಿ ಕ್ರಿಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಯನ್ನು ಪ್ರಾರಂಭಿಸಲಾಗಿದ್ದು ನೂತನ ಕಟ್ಟಡದ ನಿರ್ಮಾಣ ಭರದಿಂದ ಸಾಗುತ್ತಿದೆ. ಇದರ ಜೊತೆಗೆ ವಿಶ್ವ ಬಂಟರ ಸಂಘಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಎನಿಸಲಿರುವ ‘ಬಂಟಾಶ್ರಯ’ (ಕುಟುಂಬ ಸೇವಾಶ್ರಮ – ವೃದ್ಧಾಶ್ರಮ) ಯೋಜನೆಗೆ ಚಾಲನೆ ನೀಡಲಾಗುವುದು

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

8 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

9 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

9 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

9 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

10 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

10 hours ago