Featured

ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’ – vishwanews24

ಸೆ.29 ಕ್ಕೆ ಪಡುಬಿದ್ರಿ ಬಂಟರ ಸಂಘದಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ ಪ್ರಶಸ್ತಿ ಪ್ರದಾನ’

ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಹಾಗೂ ವಿದ್ಯಾರ್ಥಿವೇತನ ವಿತರಣಾ ಸಮಾರಂಭ

ಬಂಟರ ಸಂಘ ಪಡುಬಿದ್ರಿ, ಬಂಟ್ಸ್ ವೆಲ್ ಫೇರ್ ಟ್ರಸ್ಟ್ ಪಡುಬಿದ್ರಿ ಇವರ ಸಹಭಾಗಿತ್ವದಲ್ಲಿ ಸಾಮಾಜಿಕ ಕಲ್ಯಾಣ ಕಾರ್ಯಕ್ರಮ ಮತ್ತು ವಿದ್ಯಾರ್ಥಿವೇತನ ವಿತರಣೆ ಹಾಗೂ ‘ಸಿರಿಮುಡಿ ದತ್ತಿನಿಧಿ ಟ್ರಸ್ಟ್’ ಬಂಟರ ಸಂಘ ಪಡುಬಿದ್ರಿ ಪ್ರಾಯೋಜಕತ್ವದಲ್ಲಿ ಸಮಸ್ತ ಬಂಟ ಸಮಾಜದ ಪರವಾಗಿ ಇತ್ತೀಚೆಗೆ ಪ್ರತಿಷ್ಠಿತ ಮಂಗಳೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪ್ರಶಸ್ತಿಗೆ ಭಾಜನರಾದ ಬಂಟ ಸಮಾಜದ ಹೆಮ್ಮೆಯ ನಾಯಕ ಕೊಡುಗೈ ದಾನಿ, ಉದ್ಯಮಿ ಡಾ| ಕೆ. ಪ್ರಕಾಶ್ ಶೆಟ್ಟಿಯವರಿಗೆ ‘ಶ್ರೀ ಗುರು ನಿತ್ಯಾನಂದಾನುಗ್ರಹ’ ಪ್ರಶಸ್ತಿಯನ್ನು ನೀಡಿ ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಸದ್ರಿ ಕಾರ್ಯಕ್ರಮಕ್ಕೆ ಪೂರ್ವಭಾವಿಯಾಗಿ ಬೆಳಗ್ಗೆ 9:00 ಗಂಟೆಗೆ ಪಡುಬಿದ್ರಿ ಪೇಟೆಯಿಂದ ಬಂಟರ ಭವನದವರೆಗೆ ಅದ್ದೂರಿಯಾದ ಮೆರವಣಿಗೆ ನಡೆಯಲಿದೆ. ಸದ್ರಿ ಮೆರವಣಿಗೆಯಲ್ಲಿ ಡಾ| ಕೆ. ಪ್ರಕಾಶ್ ಶೆಟ್ಟಿ ದಂಪತಿ ಹಾಗೂ ಇತರ ಅತಿಥಿಗಣ್ಯರನ್ನು ಸಂಭ್ರಮದಿಂದ ಬರಮಾಡಿಕೊಳ್ಳಲಾಗುವುದು.

ಬೆಳಿಗ್ಗೆ 10:00 ರಿಂದ ಪಡುಬಿದ್ರಿ ಬಂಟರ ಸಂಘದ ಸದಸ್ಯರಿಂದ ವೈವಿಧ್ಯಮಯ ನೃತ್ಯ ಕಾರ್ಯಕ್ರಮ ಜರಗಲಿದೆ. ಆ ಬಳಿಕ 10.30ರಿಂದ ಸಭಾ ಕಾರ್ಯಕ್ರಮ ಪ್ರಾರಂಭವಾಗಲಿದೆ. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಬಂಟ್ಸ್ ಸಂಘ ಬೆಂಗಳೂರು ಇದರ ಅಧ್ಯಕ್ಷರಾದ ಸಿ.ಎ. ಅಶೋಕ ಶೆಟ್ಟಿ ಇವರು ನೆರವೇರಿಸಲಿದ್ದಾರೆ. ಸದ್ರಿ ಕಾರ್ಯಕ್ರಮಕ್ಕೆ ಇತರ ಎಲ್ಲಾ ಸಮಾಜ ಬಾಂಧವರಿಗೂ ಕೂಡ ಆಹ್ವಾನ ನೀಡಲಾಗಿದೆ.

ಸಿರಿಮುಡಿ ದತ್ತಿನಿಧಿ ಬಂಟರ ಸಂಘ ಪಡುಬಿದ್ರಿ ವತಿಯಿಂದ ಬಂಟ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಜನೆಗೆ ನೆರವಾಗಲು ವಿದ್ಯಾರ್ಥಿವೇತನ, ಸಮಾಜದ ಅಶಕ್ತರಿಗೆ, ವಿಧವೆಯರಿಗೆ, ಅಂಗವಿಕಲರಿಗೆ ನೆರವು ಸೇರಿದಂತೆ ಹಲವು ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 15 ಲಕ್ಷ ರೂಪಾಯಿಗಳನ್ನು ವಿತರಿಸಲಾಗುವುದು. ಸಿರಿಮುಡಿ ದತ್ತಿನಿಧಿ ಪಡುಬಿದ್ರಿ ಇದರ ಸ್ಥಾಪಕರಾದ ಸಾಂತೂರು ಭಾಸ್ಕರ ಶೆಟ್ಟಿಯವರ ನೇತೃತ್ವದಲ್ಲಿ ಸಮಾಜದ ದಾನಿಗಳಿಂದ ಸಂಗ್ರಹಿಸಿದ ಸುಮಾರು 1.31 ಕೋಟಿ ರೂಪಾಯಿಗಳನ್ನು ಶಾಶ್ವತ ಠೇವಣಿಯಾಗಿರಿಸಿ ಅದರಲ್ಲಿ ಬರುವ ಬಡ್ಡಿಯಿಂದ ಸಾಮಾಜಿಕ ಕಲ್ಯಾಣ ಕಾರ್ಯಕ್ರಮಗಳನ್ನು ಆಯೋಜಿಸಿಕೊಂಡು ಬರಲಾಗುತ್ತಿದೆ.

ಸದ್ರಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕರುಣಾಕರ ಆರ್. ಶೆಟ್ಟಿ, ಸಿ.ಎಂ.ಡಿ. ಪೆನಿನ್ಸುಲಾ ಗ್ರೂಪ್ ಆಫ್ ಹೊಟೇಲ್ಸ್, ಮುಂಬಯಿ ಮತ್ತು ಎರ್ಮಾಳು ಸೀತಾರಾಮ ಶೆಟ್ಟಿ, ಮಾಜಿ ಅಧ್ಯಕ್ಷರು ಬಂಟ್ಸ್ ಸಂಘ ಪಿಂಪ್ರಿ ಚಿಂಚಿವಾಡ ಪುಣೆ ಇವರು ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಬರುವ ಡಿಸೆಂಬರ್ ತಿಂಗಳ ಅಂತ್ಯದಲ್ಲಿ ಪಡುಬಿದ್ರಿ ಬಂಟರ ಸಂಘದ ವತಿಯಿಂದ ಆಯೋಜಿಸಲು ಉದ್ದೇಶಿಸಿರುವ ಅಂತರ್ ರಾಜ್ಯ ಬಂಟರ ಕ್ರೀಡಾಕೂಟ ಇದರ ಮಾಹಿತಿ ಕೈಪಿಡಿಯನ್ನು ಬಿಡುಗಡೆ ಮಾಡಲಾಗುವುದು.

ಪಡುಬಿದ್ರಿ ಬಂಟರ ಸಂಘದ ವತಿಯಿಂದ ಸಮಾಜದ ಎಲ್ಲಾ ವರ್ಗದವರಿಗೂ ಅನುಕೂಲವಾಗುವ ಉದ್ದೇಶದಿಂದ ಸಿರಿಮುಡಿ ಕ್ರಿಡಿಟ್ ಕೋ-ಆಪರೇಟಿವ್ ಸೊಸೈಟಿ (ನಿ.) ಯನ್ನು ಪ್ರಾರಂಭಿಸಲಾಗಿದ್ದು ನೂತನ ಕಟ್ಟಡದ ನಿರ್ಮಾಣ ಭರದಿಂದ ಸಾಗುತ್ತಿದೆ. ಇದರ ಜೊತೆಗೆ ವಿಶ್ವ ಬಂಟರ ಸಂಘಗಳ ಇತಿಹಾಸದಲ್ಲಿಯೇ ಪ್ರಪ್ರಥಮ ಎನಿಸಲಿರುವ ‘ಬಂಟಾಶ್ರಯ’ (ಕುಟುಂಬ ಸೇವಾಶ್ರಮ – ವೃದ್ಧಾಶ್ರಮ) ಯೋಜನೆಗೆ ಚಾಲನೆ ನೀಡಲಾಗುವುದು

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

8 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

17 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

30 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

43 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

1 hour ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago