Featured

ಸೇತುವೆಯಿಂದ ಚರಂಡಿಗೆ ಬಿದ್ದ ಬಸ್​ ; 29 ಸಾವು, 17 ಮಂದಿಗೆ ಗಾಯ -Vishwanews24

ಲಖನೌ, : ಇಲ್ಲಿನ ಯುಮುನಾ ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಚಲಿಸುತ್ತಿದ್ದ ಬಸ್​​ ಸ್ಕಿಡ್​​ ಆದ ಪರಿಣಾಮ ರಸ್ತೆ ನಡುವಿನ ಸೇತುವೆಯಿಂದ ಬಹುದೊಡ್ಡ ಚರಂಡಿಗೆ ಬಿದ್ದು ಸುಮಾರು 29 ಮಂದಿ ಸಾವಿಗೀಡಾಗಿ, 17 ಮಂದಿ ಗಂಭೀರವಾಗಿ ಗಾಯಗೊಂಡಿರುವ 17 ಮಂದಿ ಗಂಭೀರವಾಗಿ ಗಾಯಗೊಂಡಿರುವ ದುರಂತ ನಡೆದಿದೆ.

165 ಕಿ.ಮೀ. ಇರುವ ಯಮುನಾ ಎಕ್ಸ್​ಪ್ರೆಸ್‌ ವೇ ಗ್ರೇಟರ್​ ನೋಯ್ಡಾದಿಂದ ಉತ್ತರ ಪ್ರದೇಶದ ಆಗ್ರಾವನ್ನು ಸಂಪರ್ಕಿಸುತ್ತದೆ. ಸುಮಾರು 46 ಪ್ರಯಾಣಿಕರನ್ನು ಹೊತ್ತು ಉತ್ತರ ಪ್ರದೇಶದ ರಾಜಧಾನಿ ಲಖನೌದಿಂದ ದೆಹಲಿಗೆ ತೆರಳುತ್ತಿದ್ದ ಬಸ್​ ರಸ್ತೆಯ ನಡುವೆ ಸ್ಕಿಡ್​ ಆಗಿ ಸೇತುವೆಯಿಂದ ಸುಮಾರು 40 ಅಡಿ ಆಳವಿರುವ ಚರಂಡಿಗೆ ಬಿದ್ದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಯುಪಿ ಪೊಲೀಸರು ಈ ಕುರಿತು ಮಾಹಿತಿ ಖಚಿತಪಡಿಸಿದ್ದಾರೆ.

ಮೂಲಗಳ ಪ್ರಕಾರ ಒನ್​ ಸ್ಲೀಪರ್​ ಕೋಚ್​ ಬಸ್​ ಆಗಿದ್ದು, ದುರಂತ ಸಂಭವಿಸುವ ಮುನ್ನ ಚಾಲಕ ನಿದ್ರೆಗೆ ಜಾರಿದ್ದರಿಂದ ನಿಯಂತ್ರಣ ಕಳೆದುಕೊಂಡ ಬಸ್​ ಚರಂಡಿಗೆ ಬಿದ್ದಿದೆ ಎಂದು ಹೇಳಲಾಗಿದೆ. ಆಗ್ರಾ ಸಮೀಪದಲ್ಲೇ ಈ ದುರ್ಘಟನೆ ಸಂಭವಿಸಿದೆ.

ಚರಂಡಿಗೆ ಬಿದ್ದಿರುವುದರಿಂದ ಬಸ್​ನ ಅಡಿಯಲ್ಲಿ ಸಿಲುಕಿರುವವರನ್ನು ಹೊರತೆಗೆಯಲು ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಬಸ್​​ನ ಮೇಲ್ಭಾಗದ ಕಬ್ಬಿಣದ ಬಿಡಿ ಭಾಗಗಳನ್ನು ಸರಿಸಿ ಮೃತದೇಹಗಳನ್ನು ಹೊರತೆಗೆಯಲಾಗುತ್ತಿದೆ. ಚರಂಡಿಯಾಗಿರುವುದರಿಂದ ರಕ್ಷಣ ಕಾರ್ಯಾಚರಣೆಗೆ ತೊಡಕಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಮೃತರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಗೊಂಡವರಿಗೆ ಹಾಗೂ ಸಾವಿಗೀಡಾದ ಕುಟುಂಬದವರಿಗೆ ಸಹಾಯಾಸ್ತ ನೀಡಲು ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Vishwa News 24

Recent Posts

ಕುಂದಾಪುರ: ಕಾಲೇಜಿಗೆಂದು ತೆರಳಿದ್ದ ಯುವಕ ನಾಪತ್ತೆ – vishwanews24

ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ  ತರುತ್ತೇನೆ ಎಂದು…

6 hours ago

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ – vishwanews24

ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…

7 hours ago

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ – vishwanews24

ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…

7 hours ago

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ – vishwanews24

ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…

7 hours ago

ಬಿಡದಿ ಟೌನ್ ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ – vishwanews24

ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್‍ಶಿಪ್ ನಿರ್ಮಾಣಕ್ಕೆ ಯಾವುದೇ…

8 hours ago

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು – vishwanews24

ಮುಂಬೈ-ಮಂಗಳೂರು ಎಕ್ಸ್‌ಪ್ರೆಸ್‌ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…

8 hours ago