ನವದೆಹಲಿ,: ಸೇನಾ ಪಡೆಗಳ ನೂತನ ಮುಖ್ಯಸ್ಥರಾಗಿ (ಸಿಡಿಎಸ್) ಲೆಫ್ಟಿನೆಂಟ್ ಜನರಲ್ (ನಿವೃತ್ತ) ಅನಿಲ್ ಚೌಹಾಣ್ ಅವರು ಇಂದು (ಶುಕ್ರವಾರ) ಅಧಿಕಾರ ಸ್ವೀಕರಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅತ್ಯುನ್ನತ ಹುದ್ದೆಯ ಜವಾಬ್ದಾರಿ ನನಗೆ ದೊರಕಿರುವುದಕ್ಕೆ ಹೆಮ್ಮೆಯಾಗುತ್ತಿದೆ. ರಕ್ಷಣಾ ಪಡೆಗಳ ನಿರೀಕ್ಷೆಗಳನ್ನು ಈಡೇರಿಸಲು ನಾನು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸವಾಲುಗಳನ್ನು ನಿಭಾಯಿಸುವ ಮೂಲಕ ದೇಶಕ್ಕೆ ಹೆಮ್ಮೆ ತರುವ ಕೆಲಸ ಮಾಡುತ್ತೇನೆ ಎಂದರು.
ಇದನ್ನೂ ಓದಿ: ಎಚ್ಚರಿಕೆಯ ನಡೆ ಅಗತ್ಯ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564
ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ, ವಾಯುಪಡೆ ಮುಖ್ಯಸ್ಥ ಏರ್ಚೀಫ್ ಮಾರ್ಷಲ್ ವಿ.ಆರ್. ಚೌಧರಿ, ನೌಕಾಪಡೆಯ ಉಪ ಅಡ್ಮಿರಲ್ ಎಸ್.ಎನ್. ಘೋರ್ಮಾಡೆ, ಏರ್ ಮಾರ್ಷಲ್ ಬಿ.ಆರ್. ಕೃಷ್ಣ ಉಪಸ್ಥಿತರಿದ್ದರು.
ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಅವರು ಒಂಬತ್ತು ತಿಂಗಳ ಹಿಂದೆ ತಮಿಳುನಾಡಿನಲ್ಲಿ ನಡೆದ ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ್ದರು. ಬಳಿಕ ತೆರವಾಗಿದ್ದ ಹುದ್ದೆಗೆ ಇದೀಗ ಅನಿಲ್ ಚೌಹಾಣ್ ನೇಮಕಗೊಂಡಿದ್ದಾರೆ.
61 ವರ್ಷದ ಚೌಹಾಣ್ ಅವರು ಅನುಭವಿ ಅಧಿಕಾರಿಯಾಗಿದ್ದು, ಮಿಲಿಟರಿ ವ್ಯವಹಾರಗಳ ಇಲಾಖೆಯಲ್ಲಿ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಹೊಂದಿದ್ದಾರೆ. ಪೂರ್ವ ಸೇನಾ ಕಮಾಂಡರ್ ಆಗಿದ್ದ ಅವರು ಕಳೆದ ವರ್ಷ ಮೇ 31ರಂದು ಸೇವಾ ನಿವೃತ್ತಿಗೊಂಡಿದ್ದರು. ನಿವೃತ್ತಿಯ ಬಳಿಕ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ನೇತೃತ್ವದ ರಾಷ್ಟ್ರೀಯ ಭದ್ರತಾ ಸಮಿತಿಯ ಮಿಲಿಟರಿ ಸಲಹೆಗಾರರಾಗಿ ಕರ್ತವ್ಯ ನಿಭಾಯಿಸಿದ್ದರು.
ಇದನ್ನೂ ಓದಿ: ನಾನು ಉಡುಪಿಗೆ ಬಂದಿದ್ದೇನೆ ಬನ್ನಿ ಎಲ್ಲರೂ ಸೆಲ್ಫಿ ತೆಗೆಯಿರಿ : ಶೋಭಾ ಕರಂದ್ಲಾಜೆ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…