ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಗೌರವ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಭಾರತೀಯ ಸೇನಾಪಡೆಯಲ್ಲಿ ಸೇನಾ ತರಬೇತಿ ಪಡೆಯಲು ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ ಅನುಮತಿ ನೀಡಿದ್ದಾರೆ. ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ನಲ್ಲಿ ಧೋನಿ ತರಬೇತಿ ಪಡೆಯಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದ್ದರು. ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಅನುಮತಿ ಕೇಳಿದ್ದರು. ಇದೀಗ ಧೋನಿ ಅವರ ಮನವಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪುರಸ್ಕರಿಸಿ ಆರ್ಮಿ ಬೆಟಾಲಿಯನ್ ತರಬೇತಿ ಪಡೆಯಲು ಧೋನಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಈಗಾಗಲೇ ಮುಖ್ಯಸ್ಥರು ಅವರ ಮನವಿಯನ್ನುಅಂಗೀಕರಿಸಿದ್ದಾರೆ. ಆದರೆ ಅವರಿಗೆ ಕೇವಲ ತರಬೇತಿ ಪಡೆಯಲು ಮಾತ್ರ ಅವಕಾಶವಿದೆ. ಬೇರೆ ಯಾವುದೇ ಮಿಲಿಟರಿ ಕಾರ್ಯಚಣೆಯಲ್ಲಿ ಭಾಗವಹಿಸುವ ಅವಕಾಶವಿಲ್ಲ ಎಂದು ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.
ಹೈದರಾಬಾದ್ : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…
ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…
ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…
ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…
ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ : ಮೋದಿ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…
ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…