ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಗೌರವ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಭಾರತೀಯ ಸೇನಾಪಡೆಯಲ್ಲಿ ಸೇನಾ ತರಬೇತಿ ಪಡೆಯಲು ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ ಅನುಮತಿ ನೀಡಿದ್ದಾರೆ. ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ನಲ್ಲಿ ಧೋನಿ ತರಬೇತಿ ಪಡೆಯಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದ್ದರು. ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಅನುಮತಿ ಕೇಳಿದ್ದರು. ಇದೀಗ ಧೋನಿ ಅವರ ಮನವಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪುರಸ್ಕರಿಸಿ ಆರ್ಮಿ ಬೆಟಾಲಿಯನ್ ತರಬೇತಿ ಪಡೆಯಲು ಧೋನಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಈಗಾಗಲೇ ಮುಖ್ಯಸ್ಥರು ಅವರ ಮನವಿಯನ್ನುಅಂಗೀಕರಿಸಿದ್ದಾರೆ. ಆದರೆ ಅವರಿಗೆ ಕೇವಲ ತರಬೇತಿ ಪಡೆಯಲು ಮಾತ್ರ ಅವಕಾಶವಿದೆ. ಬೇರೆ ಯಾವುದೇ ಮಿಲಿಟರಿ ಕಾರ್ಯಚಣೆಯಲ್ಲಿ ಭಾಗವಹಿಸುವ ಅವಕಾಶವಿಲ್ಲ ಎಂದು ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…