ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಹಾಗೂ ಗೌರವ ಲೆಫ್ಟಿನೆಂಟ್ ಕರ್ನಲ್ ಮಹೇಂದ್ರ ಸಿಂಗ್ ಧೋನಿ ಅವರಿಗೆ ಭಾರತೀಯ ಸೇನಾಪಡೆಯಲ್ಲಿ ಸೇನಾ ತರಬೇತಿ ಪಡೆಯಲು ಸೇನಾಪಡೆ ಮುಖ್ಯಸ್ಥ ಬಿಪಿನ್ ರಾವತ್ ಅನುಮತಿ ನೀಡಿದ್ದಾರೆ. ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ನಲ್ಲಿ ಧೋನಿ ತರಬೇತಿ ಪಡೆಯಲಿದ್ದಾರೆ.
ಮಹೇಂದ್ರ ಸಿಂಗ್ ಧೋನಿ ಕಾಶ್ಮೀರದಲ್ಲಿ ಸೇನಾ ತರಬೇತಿಗೆ ಹೋಗುತ್ತಿದ್ದಾರೆ. ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಸೇನಾ ತಂಡವನ್ನು ಸೇರಿ ಕರ್ತವ್ಯ ನಿರ್ವಹಿಸಲು ಇಚ್ಛಿಸಿದ್ದರು. ಅದರಂತೆಯೇ ಧೋನಿ ಅವರು ಪ್ಯಾರಾಚೂಟ್ ರೆಜಿಮೆಂಟ್ ಬೆಟಾಲಿಯನ್ ಅನ್ನು ಸೇರಿಕೊಂಡು ತರಬೇತಿಯಲ್ಲಿ ಭಾಗವಹಿಸಲು ಅನುಮತಿ ಕೇಳಿದ್ದರು. ಇದೀಗ ಧೋನಿ ಅವರ ಮನವಿಯನ್ನು ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಪುರಸ್ಕರಿಸಿ ಆರ್ಮಿ ಬೆಟಾಲಿಯನ್ ತರಬೇತಿ ಪಡೆಯಲು ಧೋನಿಗೆ ಅವಕಾಶ ಮಾಡಿಕೊಟ್ಟಿದ್ದಾರೆ.
ಈಗಾಗಲೇ ಮುಖ್ಯಸ್ಥರು ಅವರ ಮನವಿಯನ್ನುಅಂಗೀಕರಿಸಿದ್ದಾರೆ. ಆದರೆ ಅವರಿಗೆ ಕೇವಲ ತರಬೇತಿ ಪಡೆಯಲು ಮಾತ್ರ ಅವಕಾಶವಿದೆ. ಬೇರೆ ಯಾವುದೇ ಮಿಲಿಟರಿ ಕಾರ್ಯಚಣೆಯಲ್ಲಿ ಭಾಗವಹಿಸುವ ಅವಕಾಶವಿಲ್ಲ ಎಂದು ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.
ದರ್ಶನ್ ಪುತ್ರನಿದ್ದ ಕಾರು ಅಪಘಾತ : ವಿನೀಶ್ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…
ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…
ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ ಉಡುಪಿ : ರಾಷ್ಟ್ರೀಯ ಹೆದ್ದಾರಿ 169ಎ ರ ತೀರ್ಥಹಳ್ಳಿ –…
ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…