Featured

ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಮಹಿಳೆಯರಿಗೆ ಅವಕಾಶ : ರಕ್ಷಣಾ ಸಚಿವೆಯಿಂದ ಮಹತ್ವದ ನಿರ್ಣಾಯ – Vishwanews24

ನವದೆಹಲಿ,: ಸೈನ್ಯದ ಮಿಲಿಟರಿ ಪೊಲೀಸ್‌ ಗೆ ಮಹಿಳೆಯರನ್ನು ಸೈನಿಕರನ್ನಾಗಿ ನೇಮಿಸಲು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಒಪ್ಪಿಗೆ ಸೂಚಿಸಿದ್ದಾರೆ.

ಇನ್ನು ಮುಂದೆ ಮಹಿಳೆಯರು ಮಿಲಿಟರಿ ಪೊಲೀಸ್‌ನಲ್ಲಿ ಸೈನಿಕರಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ. ಒಟ್ಟು ಮಿಲಿಟರಿ ಪೊಲೀಸ್‌ ಸಿಬ್ಬಂದಿಯ 20% ನಷ್ಟು ಮಹಿಳೆಯರನ್ನು ಕಡ್ಡಾಯವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಶುಕ್ರವಾರದಂದು ರಕ್ಷಣಾ ಸಚಿವೆ ನಿರ್ಮಲಾ ಸೀತರಾಮನ್ ಈ ಐತಿಹಾಸಿಕ ನಿರ್ಧಾರವನ್ನು ಜಾರಿಗೆ ತಂದಿದ್ದಾರೆ. ಈ ಹಿಂದೆ ಮಹಿಳೆಯರನ್ನು ಕೇವಲ ಸೇನಾ ಅಧಿಕಾರಿಗಳಾಗಿ ಆಯ್ದ ಶಾಖೆಗಳಿಗೆ ಮಾತ್ರ ನೇಮಿಸಿಕೊಳ್ಳಲಾಗುತ್ತಿತ್ತು. ಆದ್ರೆ ಇನ್ಮುಂದೆ ಮಹಿಳೆಯರು ಕೂಡ ಭಾರತೀಯ ಸೇನೆಯ ಮಿಲಿಟರಿ ಪೊಲೀಸ್ ಪಡೆಯಲ್ಲಿ ಸೇವೆ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

ಮಿಲಿಟರಿ ಪೊಲೀಸ್ ಸಿಬ್ಬಂದಿ ಭಾರತೀಯ ಸೇನೆಯ ಭಾಗವೇ ಆಗಿದ್ದು, ಇವರು ಯುದ್ಧ ಖೈದಿಗಳ ನಿರ್ವಹಣೆ, ವಿಚಾರಣೆ, ಸಂಚಾರ ವ್ಯವಸ್ಥೆ, ಮಿಲಿಟರಿ ಸಂಪರ್ಕ ವ್ಯವಸ್ಥೆ, ಸೇನೆಯ ಒಳಗೆ ವಿಐಪಿ ಭದ್ರತೆಗಳನ್ನು ನಿಭಾಯಿಸುತ್ತಾರೆ.

ಕಳೆದ ವರ್ಷ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರು, ಮಹಿಳೆಯರಿಗೆ ಯುದ್ಧ ಭೂಮಿಯಲ್ಲಿ ಅವಕಾಶ ನೀಡಲು ಇನ್ನೂ ಕೆಲವು ವರ್ಷಗಳು ಸರಿಯಬೇಕು ಎಂದಿದ್ದರು. ಆದರೆ, ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರೇ ಒಪ್ಪಿಗೆ ಸೂಚಿಸಿರುವುದರಿಂದ ಮಹಿಳೆಯರು ಯುದ್ಧ ಭೂಮಿಗೆ ಪ್ರವೇಶ ಪಡೆಯಲು ಈಗ ಮೊದಲ ಹೆಜ್ಜೆಯನ್ನು ಇರಿಸಿದಂತಾಗಿದೆ.

ಮಹಿಳೆಯರಿಗೆ ಮಿಲಿಟರಿ ಪೊಲೀಸ್ ಪಡೆಯಲ್ಲಿ ಅವಕಾಶ ನೀಡಬೇಕೆಂದು ಭಾರತೀಯ ಸೇನೆಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಕೇಂದ್ರ ಸರ್ಕಾರದ ಮುಂದೆ ಪ್ರಸ್ತಾಪ ಇಟಿದ್ದರು. ಈ ಪ್ರಸ್ತಾಪದ ಗಂಭೀರತೆಯನ್ನು ಅರಿತ ಪ್ರಧಾನಿ ಮೋದಿ ಹಾಗೂ ರಕ್ಷಣಾ ಸಚಿವಾಲಯವು ಮಹಿಳೆಯರಿಗೆ ಸೇನಾ ಮಿಲಿಟರಿ ಪೊಲೀಸ್ ಪಡೆಯಲ್ಲಿ ಅವಕಾಶ ಕಲ್ಪಿಸಿಕೊಟ್ಟಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

24 minutes ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago