Featured

ಸೈನಿಕರಿಗೆ ಅವಕಾಶ ಕೊಟ್ಟ ಯಜಮಾನ – ಇಬ್ಬರು ಯೋಧರಿಗೆ ವಿಲನ್ ರೋಲ್!

ಬೆಂಗಳೂರು: ಏನ್ನನಾದರೂ ಸಾಧಿಸಬೇಕೆಂಬ ನಿಜವಾದ ಹಸಿವು ಹೊಂದಿರುವವರಿಗೆ ಸದಾ ಸ್ಫೂರ್ತಿಯಾಗುತ್ತಲೇ ಸಾಥ್ ನೀಡುವ ವ್ಯಕ್ತಿತ್ವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರದ್ದು. ಹೊಸಬರಿಗೆ, ಹೊಸಬರ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರೋ ಅವರು ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ಮೂಲಕವೂ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದೀಗ ದರ್ಶನ್ ಅವರು ಯಜಮಾನ ಚಿತ್ರದಲ್ಲಿ ಮಾಜಿ ಸೈನಿಕರಿಬ್ಬರಿಗೆ ಅವಕಾಶ ಕಲ್ಪಿಸೋ ಮೂಲಕ ಸುದ್ದಿಯಲ್ಲಿದ್ದಾರೆ.

ಯಜಮಾನ ಚಿತ್ರದ ಎರಡು ವಿಲನ್ ಕ್ಯಾರೆಕ್ಟರುಗಳನ್ನು ಮಾಜಿ ಯೋಧರಿಬ್ಬರು ನಿರ್ವಹಿಸಿದ್ದಾರಂತೆ. ಮಾಜಿ ಯೋಧರಾದ ಅರುಣ್ ಮತ್ತು ಕಾಮರಾಜ್ ದರ್ಶನ್ ಅವರ ಕಾಳಜಿಯಿಂದಲೇ ಯಜಮಾನ ಚಿತ್ರದ ಭಾಗವಾಗಿದ್ದಾರೆ. ಇದರಲ್ಲಿ ಕಾಮರಾಜ್ ತಮಿಳುನಾಡಿನವರು. ಶಂಕರ್ ನಿರ್ದೇಶನದ ಐ ಚಿತ್ರದಲ್ಲಿ ಚಿಯಾನ್ ವಿಕ್ರಮ್ ಎದುರು ಈತ ವಿಲನ್ ಆಗಿ ಅಬ್ಬರಿಸಿದ್ದರು. ನೆಗೆಟಿವ್ ರೋಲಿಗೆ ಬೇಕಾದ ಕಟ್ಟುಮಸ್ತಾದ ದೇಹಸಿರಿ ಹೊಂದಿರೋ ಕಾಮರಾಜ್ ಈಗ ತಮಿಳುನಾಡಿನಲ್ಲಿ ಒಂದಷ್ಟು ಅವಕಾಶಗಳನ್ನು ಹೊಂದಿದ್ದಾರೆ.

ಯಜಮಾನ ಚಿತ್ರದ ವಿಲನ್ ಪಾತ್ರವೊಂದಕ್ಕೆ ನಿರ್ದೇಶಕರು ಕಾಮರಾಜ್ ಅವರನ್ನು ಸಜೆಸ್ಟ್ ಮಾಡಿದಾಗ ಆತ ಮಾಜಿ ಸೈನಿಕನೆಂಬ ಕಾರಣದಿಂದಲೇ ದರ್ಶನ್ ಖುಷಿಯಿಂದ ಒಪ್ಪಿಕೊಂಡಿದ್ದರಂತೆ. ಇನ್ನೋರ್ವ ಅರುಣ್ ಕೂಡಾ ಭಾರತ ಸೇನೆಯ ಹೆಮ್ಮೆಯ ಯೋಧರಾಗಿದ್ದವರು. ಸೇನೆಯ ಪ್ರಮುಖ ಕಾರ್ಯಚರಣೆಗಳಲ್ಲಿ ಕೆಚ್ಚೆದೆಯಿಂದ ತೊಡಗಿಸಿಕೊಂಡಿದ್ದ ಅರುಣ್ ನಂತರ ದೇಹದಾರ್ಢ್ಯದತ್ತ ಗಮನಹರಿಸಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ನಟನಾಗಿದ್ದಾರೆ. ಇವರೂ ಕೂಡಾ ಕನ್ನಡ ಚಿತ್ರದಲ್ಲಿ ನಟಿಸುವಂತಾದದ್ದು ದರ್ಶನ್ ಅವರ ಪ್ರೀತಿಯಿಂದಲೇ.

ಈ ಇಬ್ಬರೂ ಯೋಧರ ಪಾತ್ರಗಳು ಯಜಮಾನ ಚಿತ್ರದ ಪ್ರಮುಖ ಆಕರ್ಷಣೆಯಂತೆ ಮೂಡಿ ಬಂದಿವೆಯಂತೆ. ಯಜಮಾನ ಚಿತ್ರದ ನಂತರ ಇವರಿಬ್ಬರೂ ಕನ್ನಡ ಚಿತ್ರರಂಗದಲ್ಲಿ ಖಳನಟರಾಗಿ ನೆಲೆ ನಿಲ್ಲುವ ಭರವಸೆ ಚಿತ್ರ ತಂಡದ್ದು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago