Featured

ಸೈನಿಕರಿಗೆ ಅವಕಾಶ ಕೊಟ್ಟ ಯಜಮಾನ – ಇಬ್ಬರು ಯೋಧರಿಗೆ ವಿಲನ್ ರೋಲ್!

ಬೆಂಗಳೂರು: ಏನ್ನನಾದರೂ ಸಾಧಿಸಬೇಕೆಂಬ ನಿಜವಾದ ಹಸಿವು ಹೊಂದಿರುವವರಿಗೆ ಸದಾ ಸ್ಫೂರ್ತಿಯಾಗುತ್ತಲೇ ಸಾಥ್ ನೀಡುವ ವ್ಯಕ್ತಿತ್ವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರದ್ದು. ಹೊಸಬರಿಗೆ, ಹೊಸಬರ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರೋ ಅವರು ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ಮೂಲಕವೂ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದೀಗ ದರ್ಶನ್ ಅವರು ಯಜಮಾನ ಚಿತ್ರದಲ್ಲಿ ಮಾಜಿ ಸೈನಿಕರಿಬ್ಬರಿಗೆ ಅವಕಾಶ ಕಲ್ಪಿಸೋ ಮೂಲಕ ಸುದ್ದಿಯಲ್ಲಿದ್ದಾರೆ.

ಯಜಮಾನ ಚಿತ್ರದ ಎರಡು ವಿಲನ್ ಕ್ಯಾರೆಕ್ಟರುಗಳನ್ನು ಮಾಜಿ ಯೋಧರಿಬ್ಬರು ನಿರ್ವಹಿಸಿದ್ದಾರಂತೆ. ಮಾಜಿ ಯೋಧರಾದ ಅರುಣ್ ಮತ್ತು ಕಾಮರಾಜ್ ದರ್ಶನ್ ಅವರ ಕಾಳಜಿಯಿಂದಲೇ ಯಜಮಾನ ಚಿತ್ರದ ಭಾಗವಾಗಿದ್ದಾರೆ. ಇದರಲ್ಲಿ ಕಾಮರಾಜ್ ತಮಿಳುನಾಡಿನವರು. ಶಂಕರ್ ನಿರ್ದೇಶನದ ಐ ಚಿತ್ರದಲ್ಲಿ ಚಿಯಾನ್ ವಿಕ್ರಮ್ ಎದುರು ಈತ ವಿಲನ್ ಆಗಿ ಅಬ್ಬರಿಸಿದ್ದರು. ನೆಗೆಟಿವ್ ರೋಲಿಗೆ ಬೇಕಾದ ಕಟ್ಟುಮಸ್ತಾದ ದೇಹಸಿರಿ ಹೊಂದಿರೋ ಕಾಮರಾಜ್ ಈಗ ತಮಿಳುನಾಡಿನಲ್ಲಿ ಒಂದಷ್ಟು ಅವಕಾಶಗಳನ್ನು ಹೊಂದಿದ್ದಾರೆ.

ಯಜಮಾನ ಚಿತ್ರದ ವಿಲನ್ ಪಾತ್ರವೊಂದಕ್ಕೆ ನಿರ್ದೇಶಕರು ಕಾಮರಾಜ್ ಅವರನ್ನು ಸಜೆಸ್ಟ್ ಮಾಡಿದಾಗ ಆತ ಮಾಜಿ ಸೈನಿಕನೆಂಬ ಕಾರಣದಿಂದಲೇ ದರ್ಶನ್ ಖುಷಿಯಿಂದ ಒಪ್ಪಿಕೊಂಡಿದ್ದರಂತೆ. ಇನ್ನೋರ್ವ ಅರುಣ್ ಕೂಡಾ ಭಾರತ ಸೇನೆಯ ಹೆಮ್ಮೆಯ ಯೋಧರಾಗಿದ್ದವರು. ಸೇನೆಯ ಪ್ರಮುಖ ಕಾರ್ಯಚರಣೆಗಳಲ್ಲಿ ಕೆಚ್ಚೆದೆಯಿಂದ ತೊಡಗಿಸಿಕೊಂಡಿದ್ದ ಅರುಣ್ ನಂತರ ದೇಹದಾರ್ಢ್ಯದತ್ತ ಗಮನಹರಿಸಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ನಟನಾಗಿದ್ದಾರೆ. ಇವರೂ ಕೂಡಾ ಕನ್ನಡ ಚಿತ್ರದಲ್ಲಿ ನಟಿಸುವಂತಾದದ್ದು ದರ್ಶನ್ ಅವರ ಪ್ರೀತಿಯಿಂದಲೇ.

ಈ ಇಬ್ಬರೂ ಯೋಧರ ಪಾತ್ರಗಳು ಯಜಮಾನ ಚಿತ್ರದ ಪ್ರಮುಖ ಆಕರ್ಷಣೆಯಂತೆ ಮೂಡಿ ಬಂದಿವೆಯಂತೆ. ಯಜಮಾನ ಚಿತ್ರದ ನಂತರ ಇವರಿಬ್ಬರೂ ಕನ್ನಡ ಚಿತ್ರರಂಗದಲ್ಲಿ ಖಳನಟರಾಗಿ ನೆಲೆ ನಿಲ್ಲುವ ಭರವಸೆ ಚಿತ್ರ ತಂಡದ್ದು.

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

7 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

8 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

8 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

8 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

8 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

8 hours ago