Featured

ಸೈನಿಕರಿಗೆ ಅವಕಾಶ ಕೊಟ್ಟ ಯಜಮಾನ – ಇಬ್ಬರು ಯೋಧರಿಗೆ ವಿಲನ್ ರೋಲ್!

ಬೆಂಗಳೂರು: ಏನ್ನನಾದರೂ ಸಾಧಿಸಬೇಕೆಂಬ ನಿಜವಾದ ಹಸಿವು ಹೊಂದಿರುವವರಿಗೆ ಸದಾ ಸ್ಫೂರ್ತಿಯಾಗುತ್ತಲೇ ಸಾಥ್ ನೀಡುವ ವ್ಯಕ್ತಿತ್ವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರದ್ದು. ಹೊಸಬರಿಗೆ, ಹೊಸಬರ ಚಿತ್ರಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿರೋ ಅವರು ಕಷ್ಟದಲ್ಲಿರುವ ಕಲಾವಿದರಿಗೆ ನೆರವಾಗುವ ಮೂಲಕವೂ ಎಲ್ಲರ ಪ್ರೀತಿ ಪಾತ್ರರಾಗಿದ್ದಾರೆ. ಇದೀಗ ದರ್ಶನ್ ಅವರು ಯಜಮಾನ ಚಿತ್ರದಲ್ಲಿ ಮಾಜಿ ಸೈನಿಕರಿಬ್ಬರಿಗೆ ಅವಕಾಶ ಕಲ್ಪಿಸೋ ಮೂಲಕ ಸುದ್ದಿಯಲ್ಲಿದ್ದಾರೆ.

ಯಜಮಾನ ಚಿತ್ರದ ಎರಡು ವಿಲನ್ ಕ್ಯಾರೆಕ್ಟರುಗಳನ್ನು ಮಾಜಿ ಯೋಧರಿಬ್ಬರು ನಿರ್ವಹಿಸಿದ್ದಾರಂತೆ. ಮಾಜಿ ಯೋಧರಾದ ಅರುಣ್ ಮತ್ತು ಕಾಮರಾಜ್ ದರ್ಶನ್ ಅವರ ಕಾಳಜಿಯಿಂದಲೇ ಯಜಮಾನ ಚಿತ್ರದ ಭಾಗವಾಗಿದ್ದಾರೆ. ಇದರಲ್ಲಿ ಕಾಮರಾಜ್ ತಮಿಳುನಾಡಿನವರು. ಶಂಕರ್ ನಿರ್ದೇಶನದ ಐ ಚಿತ್ರದಲ್ಲಿ ಚಿಯಾನ್ ವಿಕ್ರಮ್ ಎದುರು ಈತ ವಿಲನ್ ಆಗಿ ಅಬ್ಬರಿಸಿದ್ದರು. ನೆಗೆಟಿವ್ ರೋಲಿಗೆ ಬೇಕಾದ ಕಟ್ಟುಮಸ್ತಾದ ದೇಹಸಿರಿ ಹೊಂದಿರೋ ಕಾಮರಾಜ್ ಈಗ ತಮಿಳುನಾಡಿನಲ್ಲಿ ಒಂದಷ್ಟು ಅವಕಾಶಗಳನ್ನು ಹೊಂದಿದ್ದಾರೆ.

ಯಜಮಾನ ಚಿತ್ರದ ವಿಲನ್ ಪಾತ್ರವೊಂದಕ್ಕೆ ನಿರ್ದೇಶಕರು ಕಾಮರಾಜ್ ಅವರನ್ನು ಸಜೆಸ್ಟ್ ಮಾಡಿದಾಗ ಆತ ಮಾಜಿ ಸೈನಿಕನೆಂಬ ಕಾರಣದಿಂದಲೇ ದರ್ಶನ್ ಖುಷಿಯಿಂದ ಒಪ್ಪಿಕೊಂಡಿದ್ದರಂತೆ. ಇನ್ನೋರ್ವ ಅರುಣ್ ಕೂಡಾ ಭಾರತ ಸೇನೆಯ ಹೆಮ್ಮೆಯ ಯೋಧರಾಗಿದ್ದವರು. ಸೇನೆಯ ಪ್ರಮುಖ ಕಾರ್ಯಚರಣೆಗಳಲ್ಲಿ ಕೆಚ್ಚೆದೆಯಿಂದ ತೊಡಗಿಸಿಕೊಂಡಿದ್ದ ಅರುಣ್ ನಂತರ ದೇಹದಾರ್ಢ್ಯದತ್ತ ಗಮನಹರಿಸಿ ತಮಿಳು ಮತ್ತು ತೆಲುಗು ಚಿತ್ರರಂಗದಲ್ಲಿ ನಟನಾಗಿದ್ದಾರೆ. ಇವರೂ ಕೂಡಾ ಕನ್ನಡ ಚಿತ್ರದಲ್ಲಿ ನಟಿಸುವಂತಾದದ್ದು ದರ್ಶನ್ ಅವರ ಪ್ರೀತಿಯಿಂದಲೇ.

ಈ ಇಬ್ಬರೂ ಯೋಧರ ಪಾತ್ರಗಳು ಯಜಮಾನ ಚಿತ್ರದ ಪ್ರಮುಖ ಆಕರ್ಷಣೆಯಂತೆ ಮೂಡಿ ಬಂದಿವೆಯಂತೆ. ಯಜಮಾನ ಚಿತ್ರದ ನಂತರ ಇವರಿಬ್ಬರೂ ಕನ್ನಡ ಚಿತ್ರರಂಗದಲ್ಲಿ ಖಳನಟರಾಗಿ ನೆಲೆ ನಿಲ್ಲುವ ಭರವಸೆ ಚಿತ್ರ ತಂಡದ್ದು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago