Featured

ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ – vishwanews24

ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ

ಬೆಂಗಳೂರು : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಹೆಸರಲ್ಲಿ ವಂಚನೆ ಆರಂಭವಾಗಿದೆ. ಒಬ್ಬ ಯುವಕ 64 ಸಾವಿರ ರೂ. ಕಳೆದುಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನ ಜ್ಞಾನಭಾರತಿ ಪ್ರದೇಶದಲ್ಲಿ ನಡೆದಿದೆ.

ಕುಂಭಮೇಳದ ಪ್ರಯಾಣದ ವೆಚ್ಚ ಕಡಿಮೆ ಮಾಡುವ ಲಾಭದಾಯಕ ಪ್ಯಾಕೇಜ್‌ಗಳನ್ನು ನೀಡುವಂತೆ ಹೇಳಿ ಜನರನ್ನು ವಂಚಿಸುತ್ತಿದ್ದಾರೆ. ಜ್ಞಾನಭಾರತಿ ನಿವಾಸಿಯೊಬ್ಬರು ತನ್ನ ಪ್ರಯಾಗ್‌ರಾಜ್ ಪ್ರಯಾಣದ ಬಗ್ಗೆ ಗೂಗಲ್‌ನಲ್ಲಿ ಹುಡುಕಿದ ನಂತರ, ಇತ್ತೀಚೆಗೆ ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, “ನಾನು ರಾಕೇಶ್ ಟೂರ್ಸ್ & ಟ್ರಾವೆಲ್‌ನಿಂದ ಮಾತನಾಡುತ್ತಿದ್ದೇನೆ” ಎಂದು ಪರಿಚಯಿಸಿದ್ದ. ಈ ಸಮಯದಲ್ಲಿ, ಆ ವ್ಯಕ್ತಿ ಕಡಿಮೆ ಬೆಲೆಯ ಪ್ಯಾಕೇಜ್‌ಗಾಗಿ ಹೇಳಿದ ಅಕೌಂಟ್‌ಗೆ ಹಂತ ಹಂತವಾಗಿ 64 ಸಾವಿರ ರೂ. ಠೇವಣಿ ಹಾಕುವಂತೆ ಮಾಡಿ ಹಣ ಪಡೆದುಕೊಂಡಿದ್ದ. ಹಣವನ್ನು ಪಡೆದ ನಂತರ, ಮುಂದಿನ ಬಾರಿ ಆ ವ್ಯಕ್ತಿಗೆ ಕರೆ ಮಾಡಿದಾಗ, ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಮೋಸ ಹೋಗಿರುವುದನ್ನು ಅರಿತ ತಕ್ಷಣ ಮೋಸ ಹೋದ ವ್ಯಕ್ತಿ 1930 ಗೆ ಕರೆ ಮಾಡಿ ದೂರು ನೀಡಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ, ಸೈಬರ್ ವಂಚಕರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೂಡ ಇದೇ ರೀತಿಯ ವಂಚನೆ ಪ್ರಕರಣಗಳು ವರದಿಯಾಗಿವೆ.

Vishwa News 24

Recent Posts

ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿ ಪತ್ತೆ; ಯುವಕನ ವಿರುದ್ದ ಪೋಕ್ಸೋ ಪ್ರಕರಣ ದಾಖಲು – vishwanews24

ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…

16 minutes ago

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ – vishwanews24

ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…

26 minutes ago

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಮುಚ್ಚಿ ಯುವಕರಿಂದ ಸಮಾಜಸೇವೆ – vishwanews24

ಶಿರ್ವ  : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…

35 minutes ago

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ಗಾಂಧಿ ತೀವ್ರ ವಾಗ್ದಾಳಿ – vishwanews24

ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ…

55 minutes ago

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ – vishwanews24

ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ      ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…

1 hour ago

ಇನ್ನು ಮುಂದೆ ಭಕ್ತರು ಗೋಕರ್ಣದ ಮಹಾಗಣಪತಿ ವಿಗ್ರಹವನ್ನು ಸ್ಪರ್ಶಿಸಿ ಪೂಜಿಸುವಂತಿಲ್ಲ – vishwanews24

ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…

19 hours ago