ಬೆಂಗಳೂರು : ಉತ್ತರಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಹೆಸರಲ್ಲಿ ವಂಚನೆ ಆರಂಭವಾಗಿದೆ. ಒಬ್ಬ ಯುವಕ 64 ಸಾವಿರ ರೂ. ಕಳೆದುಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನ ಜ್ಞಾನಭಾರತಿ ಪ್ರದೇಶದಲ್ಲಿ ನಡೆದಿದೆ.
ಕುಂಭಮೇಳದ ಪ್ರಯಾಣದ ವೆಚ್ಚ ಕಡಿಮೆ ಮಾಡುವ ಲಾಭದಾಯಕ ಪ್ಯಾಕೇಜ್ಗಳನ್ನು ನೀಡುವಂತೆ ಹೇಳಿ ಜನರನ್ನು ವಂಚಿಸುತ್ತಿದ್ದಾರೆ. ಜ್ಞಾನಭಾರತಿ ನಿವಾಸಿಯೊಬ್ಬರು ತನ್ನ ಪ್ರಯಾಗ್ರಾಜ್ ಪ್ರಯಾಣದ ಬಗ್ಗೆ ಗೂಗಲ್ನಲ್ಲಿ ಹುಡುಕಿದ ನಂತರ, ಇತ್ತೀಚೆಗೆ ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, “ನಾನು ರಾಕೇಶ್ ಟೂರ್ಸ್ & ಟ್ರಾವೆಲ್ನಿಂದ ಮಾತನಾಡುತ್ತಿದ್ದೇನೆ” ಎಂದು ಪರಿಚಯಿಸಿದ್ದ. ಈ ಸಮಯದಲ್ಲಿ, ಆ ವ್ಯಕ್ತಿ ಕಡಿಮೆ ಬೆಲೆಯ ಪ್ಯಾಕೇಜ್ಗಾಗಿ ಹೇಳಿದ ಅಕೌಂಟ್ಗೆ ಹಂತ ಹಂತವಾಗಿ 64 ಸಾವಿರ ರೂ. ಠೇವಣಿ ಹಾಕುವಂತೆ ಮಾಡಿ ಹಣ ಪಡೆದುಕೊಂಡಿದ್ದ. ಹಣವನ್ನು ಪಡೆದ ನಂತರ, ಮುಂದಿನ ಬಾರಿ ಆ ವ್ಯಕ್ತಿಗೆ ಕರೆ ಮಾಡಿದಾಗ, ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಮೋಸ ಹೋಗಿರುವುದನ್ನು ಅರಿತ ತಕ್ಷಣ ಮೋಸ ಹೋದ ವ್ಯಕ್ತಿ 1930 ಗೆ ಕರೆ ಮಾಡಿ ದೂರು ನೀಡಿದ್ದಾರೆ.
ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ, ಸೈಬರ್ ವಂಚಕರು ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೂಡ ಇದೇ ರೀತಿಯ ವಂಚನೆ ಪ್ರಕರಣಗಳು ವರದಿಯಾಗಿವೆ.
ಸುಳ್ಯ : ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಲೈಂಗಿಕ ದೌರ್ಜನ್ಯ: ಯುವಕನ ಬಂಧನ ಸುಳ್ಯ: ಮನೆ ಬಿಟ್ಟು ತೆರಳಿದ್ದ ಅಪ್ರಾಪ್ತ ಬಾಲಕಿಯನ್ನು…
ಅತಿಥಿ ಶಿಕ್ಷಕರ ಮಾಸಿಕ ವೇತನ ₹25,000ಕ್ಕೆ ಹೆಚ್ಚಿಸಿ, ಸೇವಾ ಭದ್ರತೆ ಕಲ್ಪಿಸಿ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ…
ಶಿರ್ವ : ಮಸೀದಿ ಬಳಿಯ ಗುಂಡಿಯನ್ನು ಸ್ವಯಂಪ್ರೇರಿತರಾಗಿ ಮುಚ್ಚಿ ಯುವಕರಿಂದ ಸಮಾಜಸೇವೆ ಶಿರ್ವ ಗ್ರಾಮ ಪಂಚಾಯತ್ ವ್ಯಾಪ್ತಿಯ ಡಾನ್ ಬಾಸ್ಕೋ–…
ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳಂತೆ ನೋಡುತ್ತಿದೆ ಮೋದಿ ಸರ್ಕಾರ: ಸೋನಿಯಾ ತೀವ್ರ ವಾಗ್ದಾಳಿ ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ…
ಉಡುಪಿ : ಕೃಷಿ ಪ್ರಶಸ್ತಿ ; ಅರ್ಜಿ ಆಹ್ವಾನ ಉಡುಪಿ : ಕೃಷಿ ವಲಯದ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ…
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…