Featured

ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ – vishwanews24

ಸೈಬರ್ ವಂಚನೆ :ಮಹಾ ಕುಂಭಮೇಳದ ಹೆಸರಲ್ಲಿ 64 ಸಾವಿರ ರೂ. ಕಳೆದುಕೊಂಡ ಯುವಕ

ಬೆಂಗಳೂರು : ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದ ಹೆಸರಲ್ಲಿ ವಂಚನೆ ಆರಂಭವಾಗಿದೆ. ಒಬ್ಬ ಯುವಕ 64 ಸಾವಿರ ರೂ. ಕಳೆದುಕೊಂಡಿರುವ ದುರದೃಷ್ಟಕರ ಘಟನೆ ಬೆಂಗಳೂರಿನ ಜ್ಞಾನಭಾರತಿ ಪ್ರದೇಶದಲ್ಲಿ ನಡೆದಿದೆ.

ಕುಂಭಮೇಳದ ಪ್ರಯಾಣದ ವೆಚ್ಚ ಕಡಿಮೆ ಮಾಡುವ ಲಾಭದಾಯಕ ಪ್ಯಾಕೇಜ್‌ಗಳನ್ನು ನೀಡುವಂತೆ ಹೇಳಿ ಜನರನ್ನು ವಂಚಿಸುತ್ತಿದ್ದಾರೆ. ಜ್ಞಾನಭಾರತಿ ನಿವಾಸಿಯೊಬ್ಬರು ತನ್ನ ಪ್ರಯಾಗ್‌ರಾಜ್ ಪ್ರಯಾಣದ ಬಗ್ಗೆ ಗೂಗಲ್‌ನಲ್ಲಿ ಹುಡುಕಿದ ನಂತರ, ಇತ್ತೀಚೆಗೆ ವ್ಯಕ್ತಿಯೊಬ್ಬನಿಂದ ಕರೆ ಬಂದಿದ್ದು, “ನಾನು ರಾಕೇಶ್ ಟೂರ್ಸ್ & ಟ್ರಾವೆಲ್‌ನಿಂದ ಮಾತನಾಡುತ್ತಿದ್ದೇನೆ” ಎಂದು ಪರಿಚಯಿಸಿದ್ದ. ಈ ಸಮಯದಲ್ಲಿ, ಆ ವ್ಯಕ್ತಿ ಕಡಿಮೆ ಬೆಲೆಯ ಪ್ಯಾಕೇಜ್‌ಗಾಗಿ ಹೇಳಿದ ಅಕೌಂಟ್‌ಗೆ ಹಂತ ಹಂತವಾಗಿ 64 ಸಾವಿರ ರೂ. ಠೇವಣಿ ಹಾಕುವಂತೆ ಮಾಡಿ ಹಣ ಪಡೆದುಕೊಂಡಿದ್ದ. ಹಣವನ್ನು ಪಡೆದ ನಂತರ, ಮುಂದಿನ ಬಾರಿ ಆ ವ್ಯಕ್ತಿಗೆ ಕರೆ ಮಾಡಿದಾಗ, ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಮೋಸ ಹೋಗಿರುವುದನ್ನು ಅರಿತ ತಕ್ಷಣ ಮೋಸ ಹೋದ ವ್ಯಕ್ತಿ 1930 ಗೆ ಕರೆ ಮಾಡಿ ದೂರು ನೀಡಿದ್ದಾರೆ.

ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದ್ದು, ಪೊಲೀಸರು ತನಿಖೆ ನಡೆಸಿದಾಗ, ಸೈಬರ್ ವಂಚಕರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಟಿಕೆಟ್ ಕೊಡಿಸುವುದಾಗಿ ಹೇಳಿ ವಂಚನೆಗಳನ್ನು ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಇತರ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಕೂಡ ಇದೇ ರೀತಿಯ ವಂಚನೆ ಪ್ರಕರಣಗಳು ವರದಿಯಾಗಿವೆ.

Vishwa News 24

Recent Posts

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ – vishwanews24

ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ : ಸಿದ್ದರಾಮಯ್ಯ ಬೆಂಗಳೂರು: ನನಗೆ ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ…

18 seconds ago

ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ ಗೊತ್ತಿಲ್ಲ : ಶೋಭಾ ಕರಂದ್ಲಾಜೆ – vishwanews24

ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ  ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…

20 hours ago

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ – vishwanews24

ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…

21 hours ago

ಕಾಪು ಶ್ರೀ ಹಳೇ ಮಾರಿಯಮ್ಮ ದೇವಿಗೆ ವಿಶೇಷ ಲಕ್ಷಪುಷ್ಪಾರ್ಚನೆ – vishwanews24

ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…

21 hours ago

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ – vishwanews24

ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…

22 hours ago

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು – vishwanews24

ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…

23 hours ago