Featured

ಸೊರಕೆಯವರು ಅಗ್ಗದ ಪ್ರಚಾರ, ಕೋಟಿ ಲೆಕ್ಕಗಳನ್ನು ನೀಡುದನ್ನು ಬಿಟ್ಟು ವಾಸ್ತವಿಕ ಸತ್ಯಂಶವನ್ನು ತಿಳಿದುಕೊಳ್ಳುವುದು ಉತ್ತಮ : ಶಾಸಕ ಲಾಲಾಜಿ ಟಾಂಗ್

ಕಾಪು: ಕರ್ನಾಟಕದಲ್ಲಿ ಕಳೆದ ತಿಂಗಳವರೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ಸ್ಥಳೀಯ ಶಾಸಕರು ಶಿಫಾರಸ್ಸು ಮಾಡಿದಾಗಲೂ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಹಾಗೂ ಕೆಲವು ಅಸಮರ್ಥ ಅಧಿಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿ ತೆರೆಮರೆಯ ರಾಜಕಾರಣದಿಂದಾಗಿಯೇ, ಅಭಿವೃದ್ಧಿಯ ಕುಂಠಿತಕ್ಕೆ ಕೈ ಆಡಿಸಿದ್ದಾರೆ ಕೈ ಪಕ್ಷದ ಮಾಜಿ ಶಾಸಕರು.

ತರಾತುರಿಯಲ್ಲಿ ಸರಿಯಾದ ಜನಸಂಖ್ಯೆ ಆಧಾರದ ಅಂಶ ಕೊಡದೆ ಪುರಸಭೆ ಘೋಷಣೆ ಮಾಡಿ ವರ್ಷಕ್ಕೆ 150 ಕೋಟಿ ತರುತ್ತೇನೆಂದು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿ ಎಷ್ಟು ಅನುದಾನ ಸಿಕ್ಕಿದೆಯೆಂದು ನಮಗೂ ಗೊತ್ತಿದೆ. ಜನರು ನಂಬಿ ಕುಳಿತುಕೊಳ್ಳಲು ಮೂರ್ಖರಲ್ಲ! ಕಾಪು ಪುರಸಭೆಯ ವ್ಯಾಪ್ತಿಯಲ್ಲಿ ಜನರಿಗೆ ಮನೆ ಕಟ್ಟಲು ಈಗ ಇರುವ ಸಮಸ್ಯೆ, ಏಕಮುಖ ಬಡಾವಣೆ ಸಮಸ್ಯೆ, ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕದಿಂದ ವಂಚಿತ, ಸರಿಯಾದ ಯೋಜನಾ ಬದ್ಧವಲ್ಲದ ಒಳಚರಂಡಿ ಅವ್ಯವಸ್ಥೆಯಿಂದಾಗಿ ಕಾಮಗಾರಿ ಸ್ಥಗಿತ, ಕಸ ವಿಲೇವಾರಿ ಘಟಕ ಈಗ ಘನ ತ್ಯಾಜ ಶೇಖರಣಾ ಘಟಕವಾಗಿ ರೂಪುಗೊಂಡಿದೆ. ಇದರ ನೂರು ಮೀಟರ್ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜು ಇದ್ದು 1000 ಮಕ್ಕಳು ದಿನನಿತ್ಯ ದುರ್ವಾಸನೆಯಿಂದಾನೆ ಶಾಲೆಗೆ ಹೋಗಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ನನ್ನ ಶಾಸಕತ್ವ ಅವಧಿಯಲ್ಲಿ ಶಾಲಾ ಕಾಲೇಜು, ತಾಂತ್ರಿಕ ಶಿಕ್ಷಣ ವಿದ್ಯಾ ಸಂಸ್ಥೆಗಳು, ರಸ್ತೆಗಳ, ಬೃಹತ್ ಸೇತುವೆಗಳು, ಕಡಲ್ ಕೊರೆತಕ್ಕೆ ತಡೆಗೋಡೆ, ವಸತಿ ಯೋಜನೆ ಮುಂತಾದ ಯೋಜನೆಗಳ ಅಭಿವೃದ್ಧಿ ಬಗ್ಗೆ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಸರಿಯಾದ ಪೂರ್ವ ತಯಾರಿಯಿಲ್ಲದೆ ಕಾಪು ಹೊಸ ತಾಲೂಕು ಘೋಷಣೆ ಮಾಡಿದ್ದೂ ಕನಿಷ್ಠ 32 ಇಲಾಖೆಗಳು ಕಾರ್ಯನಿರ್ವಹಿಸಬೇಕಾದಲ್ಲಿ ಈ ತನಕ ಎರಡು ಮೂರು ಇಲಾಖೆಗಳು ಕಾರ್ಯ ನಿರ್ವಹಿಸುತ್ತಿದೆ. ನನ್ನ ಬೇಡಿಕೆ ಮೇರೆಗೆ ಈಗಾಗಲೇ ಮಿನಿ ವಿಧಾನಸೌಧಕ್ಕೆ ಪ್ರಾಥಮಿಕ ಹಂತದ ಸರ್ವೇ ಕೂಡ ಮಾಡಲಾಗಿದೆ, ಅನುದಾನ ಭರವಸೆ ಕೂಡ ಸಿಕ್ಕಿದೆ, ಮಾಜಿ ಶಾಸಕರ ಅಗ್ಗದ ಪ್ರಚಾರ, ಕೋಟಿ ಲೆಕ್ಕಗಳನ್ನು ನೀಡುದನ್ನು ಬಿಟ್ಟು ವಾಸ್ತವಿಕ ಸತ್ಯಂಶವನ್ನು ತಿಳಿದುಕೊಳ್ಳುವುದು ಉತ್ತಮ. ಮುಂದಿನ ದಿನಗಳಲ್ಲಿ ಸನ್ಮಾನ್ಯ ಯಡಿಯೂರಪ್ಪ ರವರ ನೇತೃತ್ವದ ಸರಕಾರ ಉತ್ತಮ ಆಡಳಿತ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಏoದು ಕಾಪು  ಶಾಸಕ ಲಾಲಾಜಿ ಆರ್ ಮೆಂಡನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.

 

Vishwa News 24

Recent Posts

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ -vishwanews24

ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…

23 hours ago

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  -vishwanews24

ಉಡುಪಿ : ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ  ಉಡುಪಿ : ಮಲಬಾರ್…

2 days ago

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ – vishwanews24

ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ  ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…

2 days ago

ಭಸ್ಮಾಸುರ ಆಗಿರುವ ನರೇಂದ್ರ ಮೋದಿ ಅವರು ಪ್ರಜಾಪ್ರಭುತ್ವ ಸಂವಿಧಾನದ ಮೇಲೆ ಕೈ ಇಡದಿದ್ದರೆ ಸಾಕು : ಬಿ.ಕೆ ಹರಿಪ್ರಸಾದ್ ವಾಗ್ದಾಳಿ – vishwanews24

ಪ್ರಧಾನಿ  ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ  .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…

2 days ago

ಮಂಗಳೂರು : ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ – vishwanews24

ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…

2 days ago

ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಿಸದಂತೆ ಅಧಿಕಾರಿಗಳಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನವಿ – vishwanews24

ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…

2 days ago