ಕಾಪು: ಕರ್ನಾಟಕದಲ್ಲಿ ಕಳೆದ ತಿಂಗಳವರೆಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರಕಾರದ ಆಡಳಿತದಲ್ಲಿ ಸ್ಥಳೀಯ ಶಾಸಕರು ಶಿಫಾರಸ್ಸು ಮಾಡಿದಾಗಲೂ ಅಭಿವೃದ್ಧಿ ಕಾರ್ಯಗಳ ಸ್ಥಗಿತಕ್ಕೆ ಹಾಗೂ ಕೆಲವು ಅಸಮರ್ಥ ಅಧಿಕಾರಿಗಳ ವರ್ಗಾವಣೆಯಲ್ಲಿ ಹಸ್ತಕ್ಷೇಪ ಮಾಡಿ ತೆರೆಮರೆಯ ರಾಜಕಾರಣದಿಂದಾಗಿಯೇ, ಅಭಿವೃದ್ಧಿಯ ಕುಂಠಿತಕ್ಕೆ ಕೈ ಆಡಿಸಿದ್ದಾರೆ ಕೈ ಪಕ್ಷದ ಮಾಜಿ ಶಾಸಕರು.
ತರಾತುರಿಯಲ್ಲಿ ಸರಿಯಾದ ಜನಸಂಖ್ಯೆ ಆಧಾರದ ಅಂಶ ಕೊಡದೆ ಪುರಸಭೆ ಘೋಷಣೆ ಮಾಡಿ ವರ್ಷಕ್ಕೆ 150 ಕೋಟಿ ತರುತ್ತೇನೆಂದು ಚುನಾವಣೆ ಪೂರ್ವದಲ್ಲಿ ಘೋಷಣೆ ಮಾಡಿ ಎಷ್ಟು ಅನುದಾನ ಸಿಕ್ಕಿದೆಯೆಂದು ನಮಗೂ ಗೊತ್ತಿದೆ. ಜನರು ನಂಬಿ ಕುಳಿತುಕೊಳ್ಳಲು ಮೂರ್ಖರಲ್ಲ! ಕಾಪು ಪುರಸಭೆಯ ವ್ಯಾಪ್ತಿಯಲ್ಲಿ ಜನರಿಗೆ ಮನೆ ಕಟ್ಟಲು ಈಗ ಇರುವ ಸಮಸ್ಯೆ, ಏಕಮುಖ ಬಡಾವಣೆ ಸಮಸ್ಯೆ, ವಿದ್ಯಾರ್ಥಿಗಳಿಗೆ ಗ್ರಾಮೀಣ ಕೃಪಾಂಕದಿಂದ ವಂಚಿತ, ಸರಿಯಾದ ಯೋಜನಾ ಬದ್ಧವಲ್ಲದ ಒಳಚರಂಡಿ ಅವ್ಯವಸ್ಥೆಯಿಂದಾಗಿ ಕಾಮಗಾರಿ ಸ್ಥಗಿತ, ಕಸ ವಿಲೇವಾರಿ ಘಟಕ ಈಗ ಘನ ತ್ಯಾಜ ಶೇಖರಣಾ ಘಟಕವಾಗಿ ರೂಪುಗೊಂಡಿದೆ. ಇದರ ನೂರು ಮೀಟರ್ ವ್ಯಾಪ್ತಿಯಲ್ಲಿ ಶಾಲಾ, ಕಾಲೇಜು ಇದ್ದು 1000 ಮಕ್ಕಳು ದಿನನಿತ್ಯ ದುರ್ವಾಸನೆಯಿಂದಾನೆ ಶಾಲೆಗೆ ಹೋಗಿ ಬರುವ ಪರಿಸ್ಥಿತಿ ನಿರ್ಮಾಣವಾಗಿದೆ. ನನ್ನ ಶಾಸಕತ್ವ ಅವಧಿಯಲ್ಲಿ ಶಾಲಾ ಕಾಲೇಜು, ತಾಂತ್ರಿಕ ಶಿಕ್ಷಣ ವಿದ್ಯಾ ಸಂಸ್ಥೆಗಳು, ರಸ್ತೆಗಳ, ಬೃಹತ್ ಸೇತುವೆಗಳು, ಕಡಲ್ ಕೊರೆತಕ್ಕೆ ತಡೆಗೋಡೆ, ವಸತಿ ಯೋಜನೆ ಮುಂತಾದ ಯೋಜನೆಗಳ ಅಭಿವೃದ್ಧಿ ಬಗ್ಗೆ ನನ್ನ ಕರ್ತವ್ಯವನ್ನು ಪ್ರಾಮಾಣಿಕವಾಗಿ ನಿರ್ವಹಿಸಿದ್ದೇನೆ. ಸರಿಯಾದ ಪೂರ್ವ ತಯಾರಿಯಿಲ್ಲದೆ ಕಾಪು ಹೊಸ ತಾಲೂಕು ಘೋಷಣೆ ಮಾಡಿದ್ದೂ ಕನಿಷ್ಠ 32 ಇಲಾಖೆಗಳು ಕಾರ್ಯನಿರ್ವಹಿಸಬೇಕಾದಲ್ಲಿ ಈ ತನಕ ಎರಡು ಮೂರು ಇಲಾಖೆಗಳು ಕಾರ್ಯ ನಿರ್ವಹಿಸುತ್ತಿದೆ. ನನ್ನ ಬೇಡಿಕೆ ಮೇರೆಗೆ ಈಗಾಗಲೇ ಮಿನಿ ವಿಧಾನಸೌಧಕ್ಕೆ ಪ್ರಾಥಮಿಕ ಹಂತದ ಸರ್ವೇ ಕೂಡ ಮಾಡಲಾಗಿದೆ, ಅನುದಾನ ಭರವಸೆ ಕೂಡ ಸಿಕ್ಕಿದೆ, ಮಾಜಿ ಶಾಸಕರ ಅಗ್ಗದ ಪ್ರಚಾರ, ಕೋಟಿ ಲೆಕ್ಕಗಳನ್ನು ನೀಡುದನ್ನು ಬಿಟ್ಟು ವಾಸ್ತವಿಕ ಸತ್ಯಂಶವನ್ನು ತಿಳಿದುಕೊಳ್ಳುವುದು ಉತ್ತಮ. ಮುಂದಿನ ದಿನಗಳಲ್ಲಿ ಸನ್ಮಾನ್ಯ ಯಡಿಯೂರಪ್ಪ ರವರ ನೇತೃತ್ವದ ಸರಕಾರ ಉತ್ತಮ ಆಡಳಿತ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ವಿಶ್ವಾಸವಿದೆ ಏoದು ಕಾಪು ಶಾಸಕ ಲಾಲಾಜಿ ಆರ್ ಮೆಂಡನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…