ಪಡುಬಿದ್ರಿ : “ಹೆಜಮಾಡಿ ಸಮುದ್ರ ತೀರದ ಮುಟ್ಟಾಲುವೆ ಬಳಿ ಹೆಜಮಾಡಿ ಹಾಗೂ ಪಡುಬಿದ್ರಿ ಸಂಪರ್ಕ ರಸ್ತೆ ನಡೆಸುವ ನಿಟ್ಟಿನಲ್ಲಿ ಮಾಜಿ ಶಾಸಕರ ಉಸ್ತುವಾರಿಯಲ್ಲಿ ನಡೆದ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದು ಅಂದಿನ ಶಾಸಕರ ಅಧಿಕಾರ ದುರುಪಯೋಗದ ಫಲ” ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಹಾಲಿ ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕಾರ್ಯಕರ್ತರೊಂದಿಗೆ ಹೆಜಮಾಡಿ ಸೇತುವೆಯ ಬಳಿಗೆ ಆಗಮಿಸಿ ಪರಿಶೀಲಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, “ಮೇಲ್ನೋಟಕ್ಕೆ ಈ ಒಟ್ಟು ಕಾಮಗಾರಿಯೇ ಅವೈಜ್ಞಾನಿಕವಾಗಿ ಕಾಣುತ್ತಿದ್ದು, ಮಾಜಿ ಶಾಸಕ ವಿನಯಕುಮಾರ್ ಸೊರಕೆ ಒತ್ತಡ ಹೇರಿದ್ದರಿಂದ ಅಧಿಕಾರಿಗಳು ತಪ್ಪು ಕೆಲಸ ಮಾಡಿದ್ದಾರೆ. ಇಲ್ಲಿ ಸಮುದ್ರಕ್ಕೆ ನೀರು ಹರಿದು ಹೋಗುವ ಬದಲು ಸಮುದ್ರದಿಂದ ಹೊರಗಡೆ ನೀರು ಹರಿಯುವಂತಾಗಿದೆ. ಕೃಷಿ ಚಟುವಟಿಕೆ ನಡೆಸಲಾಗದೆ ಈ ಭಾಗದ ಕೃಷಿಕರು ಈ ಕಾಮಗಾರಿಯಿಂದ ಕಂಗಾಲಾದ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಅಧಿಕಾರಿಗಳಲ್ಲಿ ಚರ್ಚಿಸಿ ಈ ಕಾಮಗಾರಿಯನ್ನು ಉಳಿಸಬೇಕೋ, ಅಳಿಸಬೇಕೋ ನಿರ್ಧರಿಸಲಾಗುವುದು” ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…