ಪಡುಬಿದ್ರಿ : “ಹೆಜಮಾಡಿ ಸಮುದ್ರ ತೀರದ ಮುಟ್ಟಾಲುವೆ ಬಳಿ ಹೆಜಮಾಡಿ ಹಾಗೂ ಪಡುಬಿದ್ರಿ ಸಂಪರ್ಕ ರಸ್ತೆ ನಡೆಸುವ ನಿಟ್ಟಿನಲ್ಲಿ ಮಾಜಿ ಶಾಸಕರ ಉಸ್ತುವಾರಿಯಲ್ಲಿ ನಡೆದ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದು ಅಂದಿನ ಶಾಸಕರ ಅಧಿಕಾರ ದುರುಪಯೋಗದ ಫಲ” ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಹಾಲಿ ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕಾರ್ಯಕರ್ತರೊಂದಿಗೆ ಹೆಜಮಾಡಿ ಸೇತುವೆಯ ಬಳಿಗೆ ಆಗಮಿಸಿ ಪರಿಶೀಲಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, “ಮೇಲ್ನೋಟಕ್ಕೆ ಈ ಒಟ್ಟು ಕಾಮಗಾರಿಯೇ ಅವೈಜ್ಞಾನಿಕವಾಗಿ ಕಾಣುತ್ತಿದ್ದು, ಮಾಜಿ ಶಾಸಕ ವಿನಯಕುಮಾರ್ ಸೊರಕೆ ಒತ್ತಡ ಹೇರಿದ್ದರಿಂದ ಅಧಿಕಾರಿಗಳು ತಪ್ಪು ಕೆಲಸ ಮಾಡಿದ್ದಾರೆ. ಇಲ್ಲಿ ಸಮುದ್ರಕ್ಕೆ ನೀರು ಹರಿದು ಹೋಗುವ ಬದಲು ಸಮುದ್ರದಿಂದ ಹೊರಗಡೆ ನೀರು ಹರಿಯುವಂತಾಗಿದೆ. ಕೃಷಿ ಚಟುವಟಿಕೆ ನಡೆಸಲಾಗದೆ ಈ ಭಾಗದ ಕೃಷಿಕರು ಈ ಕಾಮಗಾರಿಯಿಂದ ಕಂಗಾಲಾದ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಅಧಿಕಾರಿಗಳಲ್ಲಿ ಚರ್ಚಿಸಿ ಈ ಕಾಮಗಾರಿಯನ್ನು ಉಳಿಸಬೇಕೋ, ಅಳಿಸಬೇಕೋ ನಿರ್ಧರಿಸಲಾಗುವುದು” ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…