ಪಡುಬಿದ್ರಿ : “ಹೆಜಮಾಡಿ ಸಮುದ್ರ ತೀರದ ಮುಟ್ಟಾಲುವೆ ಬಳಿ ಹೆಜಮಾಡಿ ಹಾಗೂ ಪಡುಬಿದ್ರಿ ಸಂಪರ್ಕ ರಸ್ತೆ ನಡೆಸುವ ನಿಟ್ಟಿನಲ್ಲಿ ಮಾಜಿ ಶಾಸಕರ ಉಸ್ತುವಾರಿಯಲ್ಲಿ ನಡೆದ ಸೇತುವೆ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದು ಅಂದಿನ ಶಾಸಕರ ಅಧಿಕಾರ ದುರುಪಯೋಗದ ಫಲ” ಎಂದು ಸಂಸದೆ ಶೋಭಾ ಕರಂದ್ಲಾಜೆ ಟೀಕಿಸಿದರು.
ಹಾಲಿ ಶಾಸಕ ಲಾಲಾಜಿ ಆರ್ ಮೆಂಡನ್ ಹಾಗೂ ಕಾರ್ಯಕರ್ತರೊಂದಿಗೆ ಹೆಜಮಾಡಿ ಸೇತುವೆಯ ಬಳಿಗೆ ಆಗಮಿಸಿ ಪರಿಶೀಲಿಸಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, “ಮೇಲ್ನೋಟಕ್ಕೆ ಈ ಒಟ್ಟು ಕಾಮಗಾರಿಯೇ ಅವೈಜ್ಞಾನಿಕವಾಗಿ ಕಾಣುತ್ತಿದ್ದು, ಮಾಜಿ ಶಾಸಕ ವಿನಯಕುಮಾರ್ ಸೊರಕೆ ಒತ್ತಡ ಹೇರಿದ್ದರಿಂದ ಅಧಿಕಾರಿಗಳು ತಪ್ಪು ಕೆಲಸ ಮಾಡಿದ್ದಾರೆ. ಇಲ್ಲಿ ಸಮುದ್ರಕ್ಕೆ ನೀರು ಹರಿದು ಹೋಗುವ ಬದಲು ಸಮುದ್ರದಿಂದ ಹೊರಗಡೆ ನೀರು ಹರಿಯುವಂತಾಗಿದೆ. ಕೃಷಿ ಚಟುವಟಿಕೆ ನಡೆಸಲಾಗದೆ ಈ ಭಾಗದ ಕೃಷಿಕರು ಈ ಕಾಮಗಾರಿಯಿಂದ ಕಂಗಾಲಾದ ಬಗ್ಗೆ ಮಾಹಿತಿ ಇದ್ದು, ಈ ಬಗ್ಗೆ ಅಧಿಕಾರಿಗಳಲ್ಲಿ ಚರ್ಚಿಸಿ ಈ ಕಾಮಗಾರಿಯನ್ನು ಉಳಿಸಬೇಕೋ, ಅಳಿಸಬೇಕೋ ನಿರ್ಧರಿಸಲಾಗುವುದು” ಎಂದರು. ಈ ಸಂದರ್ಭ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಜೊತೆಗಿದ್ದರು.
ಉಡುಪಿ : ನೇರ ಸಂದರ್ಶನ ಉಡುಪಿ : ನಗರದ ಮಣಿಪಾಲದ ಮನೋಹರ್ ಭವನ್ ಹೋಟೆಲ್ ಮುಂಭಾಗದ ಮಣಿಪಾಲ್ ಪೇಮೆಂಟ್ ಐಡೆಂಟಿಟಿ…
ಚಾ.ನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ – ನಾಲ್ಕು ವರ್ಷದ ಬಾಲಕಿ ದುರ್ಮರಣ ಚಾಮರಾಜನಗರ: ಗ್ರೈಂಡರ್ನಿಂದ ವಿದ್ಯುತ್ ಶಾಕ್ ಹೊಡೆದು ನಾಲ್ಕು…
ಉಡುಪಿ : ಮತದಾರ ಪಟ್ಟಿಯ ವಿಶೇಷ ಪರಿಷ್ಕರಣೆ: ಜೂ. 23ರಿಂದ ಜಿಲ್ಲೆಯ ಮನೆಮನೆಗೆ ತೆರಳಿ ಜನಜಾಗೃತಿ: ಕೆ.ಜಯಪ್ರಕಾಶ್ ಹೆಗ್ಡೆ ಉಡುಪಿ:…
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…