Featured

ವಿನಯಕುಮಾರ್ ಸೊರಕೆ ವಿರುದ್ದ ಅಪಪ್ರಚಾರ, ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುವ ಯತ್ನ : ಗುಲಾಂ ಮುಹಮ್ಮದ್ – Vishwanews24

ಕಾಪು :ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರು ಅಲ್ಪಸಂಖ್ಯಾತ ವಿರೋಧಿ ಎಂಬ ಮಂಗಳೂರಿನ ಮಾಜಿಮೇಯರ್ ರವರ, ಹೇಳಿಕೆ ಸತ್ಯಕ್ಕೆ ದೂರವಾದ ಹೇಳಿಕೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರೂ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರೂ ಆದ ಗುಲಾಂ ಮುಹಮ್ಮದ್ ಹೇಳಿದರು.

ಸರ್ವಧರ್ಮ ಪ್ರೇಮಿ ಶುದ್ಧಹಸ್ತ ರಾಜಕಾರಣಿ, ಹಸನ್ಮುಖಿ, ಎಲ್ಲರ ನೆಚ್ಚಿನ ಸೊರಕೆಯವರ ಬಗ್ಗೆ ಅಪಪ್ರಚಾರ ಮಾಡುವವರು ಕಾಪು ಉಡುಪಿ ಬಾಗದ ಮುಸ್ಲಿಂ ರಲ್ಲಿ ಬಂದು ಕೇಳಿದರೆ,ಅವರ ಜನಪ್ರಿಯತೆ , ಅಲ್ಪಸಂಖ್ಯಾತ ರ ಬಗ್ಗೆ ಎಷ್ಟು ಕಾಳಜಿ ವಹಸಿದ್ದಾರೆ ಎಂದು ತಿಳಿಯುತ್ತೆ.ಪುತ್ತೂರು ಶಾಸಕರಾಗಿದ್ದಾಲೂ, ಉಡುಪಿಯ ಸಂಸದರಾಗಿದ್ದಾಗಲೂ, ಕಾಪುವಿನ ಶಾಸಕರಾಗಿದ್ದ ವೇಳೆಯಲ್ಲೂ ಎಲ್ಲಾ ಧರ್ಮದ ಜನರಿಗೂ ಸಮಾನವಾಗಿ ನೋಡಿದ ಹೆಗ್ಗಳಿಕೆ ಅವರದು, ಅದೇ ರೀತಿ ಯಾವ ಕೋಮುವಾದಿ ಶಕ್ತಿಗಳಿಗೂ ತಲೆ ಎತ್ತದ ರೀತಿ ಅಭಿವೃದಿ ಎಂಬ ಮಂತ್ರದಲ್ಲಿಯೇ ಜನಮನ ಸೆಳೆದ ಅಪರೂಪದ ನಾಯಕ ಸೊರಕೆಯವರು ಎಂದು  ಹೇಳಿದರು.

ಅವರು ಕಾಪುವಿನ ಶಾಸಕರಾಗಿದ್ದ ಅವಧಿಯಲ್ಲಿಯೇ ಕಾಪು ಪುರಸಭೆಯಾಗಿ, ತಾಲೂಕಾಗಿ ರೂಪಿತವಾಗಿತ್ತು.ಕಾಪು ಪುರಸಭೆಯ ಸದಸ್ಯರಲ್ಲಿ, 5 ಮಂದಿ ಮುಸ್ಲಿಮರು ಎನ್ನುವುದು ಗಮನಾರ್ಹ.ಅದೇ ರೀತಿ ತಾಲೂಕು ಪಂಚಾಯತು ಚುನಾವಣೆಯಲ್ಲಿ ಎರಡು ಅಲ್ಪಸಂಖ್ಯಾತ ಅಭ್ಯರ್ಥಿಗಳು ಕಣಕ್ಕಿಳಿಸಿದ್ದರು.
ಅವರ ಅವಧಿಯಲ್ಲಿ ಅತೀ ಹೆಚ್ಚು ಮೊತ್ತದ ಅನುಧಾನ ಅಲ್ಪಸಂಖ್ಯಾತ ವಿಭಾಗಕ್ಕೆ ಸರ್ಕಾರದ ಮೂಲಕ ಹರಿದುಬಂದಿತ್ತು. ಮಂದಿರ ಮಸೀದಿ ಚರ್ಚುಗಳಿಗೆ ಅತೀ ಹೆಚ್ಚು ಅನುಧಾನ ಒದಗಿಸಿದ್ದು ಇಲ್ಲಿನ ಮುಸ್ಲಿಮರು ಮತ್ತು ಎಲ್ಲಾ ಧರ್ಮೀಯರು ಮರೆಯಲು ಸಾಧ್ಯವೇ ಇಲ್ಲ ಎಂದು ಗುಲಾಂ ಮುಹಮ್ಮದ್ ತಿಳಿಸಿದರು.

ಎಲ್ಲಾ ರೀತಿಯಲ್ಲೂ ಸರ್ವಧರ್ಮ ಪ್ರೇಮಿಯಾದ ವಿನಯಕುಮಾರ್ ಸೊರಕೆಯವರನ್ನು ತೇಜೋವಧೆ ಮಾಡಲು ತೆರೆಮರೆಯ ಮೂಲಕ ಷಡ್ಯಂತ್ರ ನಡೆಸುವ ಕೆಲವೊಂದು ಕೋಮುವಾದಿ ಶಕ್ತಿಗಳು, ಮುಸ್ಲಿಮರು ಸೊರಕೆಯ ವಿರುದ್ಧ ಎಂದು ಬಿಂಬಿಸಹೊರಟಿರುವುದು ಹಾಸ್ಯಾಸ್ಪದ. ಮಾಜಿ ಮೇಯರ್ ರವರು, ಯಾರದೋ ಆಮಿಷಕ್ಕೆ ಒಳಗಾಗಿ ಪ್ರಾಮಾಣಿಕ ರಾಜಕಾರಣಿ ಸೊರಕೆಯನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಬಿಂಬಿಸಹೊರಟು, ಅವರ ಅಲ್ಪಜ್ಞಾನ ಏನೆಂದು ಜಗಜ್ಜಾಹೀರುಗೊಳಿಸಿದ್ದಾರೆ ಎಂದು  ಹೇಳಿದರು.

ಒಂದು ವೇಳೆ ಲೋಕಸಭಾ ಚುನಾವಣೆಗೆ ಸೊರಕೆಯವರು ಸ್ಪರ್ದಿಸುವುದಾದರೆ, ಸರ್ವ ಮುಸ್ಲಿಮರೂ, ಅಲ್ಪಸಂಖ್ಯಾತರೂ ಸೊರಕೆಯವರಿಗೆ ಬೆಂಬಲ ಸೂಚಿಸಲಿದ್ದಾರೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರೂ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರೂ ಆದ ಗುಲಾಂ ಮುಹಮ್ಮದ್ ಹೆಜಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ; ಪತ್ತೆಗೆ ಮನವಿ ಪಡುಬಿದ್ರಿ : ಕಂಚಿನಡ್ಕದ ನಿವಾಸಿ ರವೀಂದ್ರ (35) ಪಡುಬಿದ್ರಿ ಪೇಟೆಗೆ…

1 day ago

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ -vishwanews24

ಪಡುಬಿದ್ರಿ ಪೊಲೀಸರ ವಿಶೇಷ ಕಾರ್ಯಾಚರಣೆ :ರಸ್ತೆ ಅಪಘಾತ ಪ್ರಕರಣದಲ್ಲಿ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಅರೆಸ್ಟ್ ಉಡುಪಿ: 2002ರಲ್ಲಿ…

2 days ago

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

2 days ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

2 days ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

2 days ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 days ago