Featured

ವಿನಯಕುಮಾರ್ ಸೊರಕೆ ವಿರುದ್ದ ಅಪಪ್ರಚಾರ, ಅಲ್ಪಸಂಖ್ಯಾತರ ದಿಕ್ಕು ತಪ್ಪಿಸುವ ಯತ್ನ : ಗುಲಾಂ ಮುಹಮ್ಮದ್ – Vishwanews24

ಕಾಪು :ಮಾಜಿ ಸಚಿವರಾದ ವಿನಯಕುಮಾರ್ ಸೊರಕೆಯವರು ಅಲ್ಪಸಂಖ್ಯಾತ ವಿರೋಧಿ ಎಂಬ ಮಂಗಳೂರಿನ ಮಾಜಿಮೇಯರ್ ರವರ, ಹೇಳಿಕೆ ಸತ್ಯಕ್ಕೆ ದೂರವಾದ ಹೇಳಿಕೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರೂ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರೂ ಆದ ಗುಲಾಂ ಮುಹಮ್ಮದ್ ಹೇಳಿದರು.

ಸರ್ವಧರ್ಮ ಪ್ರೇಮಿ ಶುದ್ಧಹಸ್ತ ರಾಜಕಾರಣಿ, ಹಸನ್ಮುಖಿ, ಎಲ್ಲರ ನೆಚ್ಚಿನ ಸೊರಕೆಯವರ ಬಗ್ಗೆ ಅಪಪ್ರಚಾರ ಮಾಡುವವರು ಕಾಪು ಉಡುಪಿ ಬಾಗದ ಮುಸ್ಲಿಂ ರಲ್ಲಿ ಬಂದು ಕೇಳಿದರೆ,ಅವರ ಜನಪ್ರಿಯತೆ , ಅಲ್ಪಸಂಖ್ಯಾತ ರ ಬಗ್ಗೆ ಎಷ್ಟು ಕಾಳಜಿ ವಹಸಿದ್ದಾರೆ ಎಂದು ತಿಳಿಯುತ್ತೆ.ಪುತ್ತೂರು ಶಾಸಕರಾಗಿದ್ದಾಲೂ, ಉಡುಪಿಯ ಸಂಸದರಾಗಿದ್ದಾಗಲೂ, ಕಾಪುವಿನ ಶಾಸಕರಾಗಿದ್ದ ವೇಳೆಯಲ್ಲೂ ಎಲ್ಲಾ ಧರ್ಮದ ಜನರಿಗೂ ಸಮಾನವಾಗಿ ನೋಡಿದ ಹೆಗ್ಗಳಿಕೆ ಅವರದು, ಅದೇ ರೀತಿ ಯಾವ ಕೋಮುವಾದಿ ಶಕ್ತಿಗಳಿಗೂ ತಲೆ ಎತ್ತದ ರೀತಿ ಅಭಿವೃದಿ ಎಂಬ ಮಂತ್ರದಲ್ಲಿಯೇ ಜನಮನ ಸೆಳೆದ ಅಪರೂಪದ ನಾಯಕ ಸೊರಕೆಯವರು ಎಂದು  ಹೇಳಿದರು.

ಅವರು ಕಾಪುವಿನ ಶಾಸಕರಾಗಿದ್ದ ಅವಧಿಯಲ್ಲಿಯೇ ಕಾಪು ಪುರಸಭೆಯಾಗಿ, ತಾಲೂಕಾಗಿ ರೂಪಿತವಾಗಿತ್ತು.ಕಾಪು ಪುರಸಭೆಯ ಸದಸ್ಯರಲ್ಲಿ, 5 ಮಂದಿ ಮುಸ್ಲಿಮರು ಎನ್ನುವುದು ಗಮನಾರ್ಹ.ಅದೇ ರೀತಿ ತಾಲೂಕು ಪಂಚಾಯತು ಚುನಾವಣೆಯಲ್ಲಿ ಎರಡು ಅಲ್ಪಸಂಖ್ಯಾತ ಅಭ್ಯರ್ಥಿಗಳು ಕಣಕ್ಕಿಳಿಸಿದ್ದರು.
ಅವರ ಅವಧಿಯಲ್ಲಿ ಅತೀ ಹೆಚ್ಚು ಮೊತ್ತದ ಅನುಧಾನ ಅಲ್ಪಸಂಖ್ಯಾತ ವಿಭಾಗಕ್ಕೆ ಸರ್ಕಾರದ ಮೂಲಕ ಹರಿದುಬಂದಿತ್ತು. ಮಂದಿರ ಮಸೀದಿ ಚರ್ಚುಗಳಿಗೆ ಅತೀ ಹೆಚ್ಚು ಅನುಧಾನ ಒದಗಿಸಿದ್ದು ಇಲ್ಲಿನ ಮುಸ್ಲಿಮರು ಮತ್ತು ಎಲ್ಲಾ ಧರ್ಮೀಯರು ಮರೆಯಲು ಸಾಧ್ಯವೇ ಇಲ್ಲ ಎಂದು ಗುಲಾಂ ಮುಹಮ್ಮದ್ ತಿಳಿಸಿದರು.

ಎಲ್ಲಾ ರೀತಿಯಲ್ಲೂ ಸರ್ವಧರ್ಮ ಪ್ರೇಮಿಯಾದ ವಿನಯಕುಮಾರ್ ಸೊರಕೆಯವರನ್ನು ತೇಜೋವಧೆ ಮಾಡಲು ತೆರೆಮರೆಯ ಮೂಲಕ ಷಡ್ಯಂತ್ರ ನಡೆಸುವ ಕೆಲವೊಂದು ಕೋಮುವಾದಿ ಶಕ್ತಿಗಳು, ಮುಸ್ಲಿಮರು ಸೊರಕೆಯ ವಿರುದ್ಧ ಎಂದು ಬಿಂಬಿಸಹೊರಟಿರುವುದು ಹಾಸ್ಯಾಸ್ಪದ. ಮಾಜಿ ಮೇಯರ್ ರವರು, ಯಾರದೋ ಆಮಿಷಕ್ಕೆ ಒಳಗಾಗಿ ಪ್ರಾಮಾಣಿಕ ರಾಜಕಾರಣಿ ಸೊರಕೆಯನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಬಿಂಬಿಸಹೊರಟು, ಅವರ ಅಲ್ಪಜ್ಞಾನ ಏನೆಂದು ಜಗಜ್ಜಾಹೀರುಗೊಳಿಸಿದ್ದಾರೆ ಎಂದು  ಹೇಳಿದರು.

ಒಂದು ವೇಳೆ ಲೋಕಸಭಾ ಚುನಾವಣೆಗೆ ಸೊರಕೆಯವರು ಸ್ಪರ್ದಿಸುವುದಾದರೆ, ಸರ್ವ ಮುಸ್ಲಿಮರೂ, ಅಲ್ಪಸಂಖ್ಯಾತರೂ ಸೊರಕೆಯವರಿಗೆ ಬೆಂಬಲ ಸೂಚಿಸಲಿದ್ದಾರೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಉಪಾಧ್ಯಕ್ಷರೂ ಉಡುಪಿ ಜಿಲ್ಲಾ ವಕ್ಫ್ ಮಂಡಳಿ ಉಪಾಧ್ಯಕ್ಷರೂ ಆದ ಗುಲಾಂ ಮುಹಮ್ಮದ್ ಹೆಜಮಾಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

19 hours ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

21 hours ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

21 hours ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

21 hours ago

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ – vishwanews24

ಸಕ್ಕರೆ ರಫ್ತಿಗೆ ಸೆ.30 ರವರೆಗೆ ಸಂಪೂರ್ಣ ನಿಷೇಧ ಹೇರಿದ ಸರ್ಕಾರ ನವದೆಹಲಿ: ದೇಶೀಯ ಮಾರುಕಟ್ಟೆಯಲ್ಲಿ ಸಕ್ಕರೆ ಬೆಲೆಯನ್ನು ನಿಯಂತ್ರಿಸಲು ಮತ್ತು…

21 hours ago

ಹಿಜಬ್‌ಗೆ ಅವಕಾಶ :ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ , ಯಾವುದೇ ಕಾರಣಕ್ಕೂ ಆದೇಶ ವಾಪಸ್ ಪಡೆಯಲ್ಲ : ಮಧು ಬಂಗಾರಪ್ಪ – vishwanews24

ಹಿಜಬ್ ಬಗ್ಗೆ ಮಾತಾಡುವ ಬಿಜೆಪಿಯವರು  ನೀಟ್ ಬಗ್ಗೆ ಮಾತಾಡಲಿ : ಮಧು ಬಂಗಾರಪ್ಪ ಆಕ್ರೋಶ ಬೆಂಗಳೂರು: ಹಿಜಬ್ ಬಗ್ಗೆ ಮಾತಾಡುವ…

21 hours ago