ಸೊರಕೆ ಹುಟ್ಟುಹಬ್ಬ-ಕೊರೋನಾ ವಾರಿಯರ್ಸ್ ಗೆ ಸನ್ಮಾನ.
ಕಾಪು: ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಕಾಪು ಕ್ಷೇತ್ರದ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆಯರ ಹುಟ್ಟುಹಬ್ಬದ ಪ್ರಯುಕ್ತ ಕಾಪು ರಾಜೀವ ಭವನದಲ್ಲಿ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಕಾಪುವಿನ ವೈದ್ಯಧಿಕಾರಿ ಡಾ.ಸುಬ್ರಾಯ ಕಾಮತ್” ದೇಶದಲ್ಲಿ ಕೊರೋನಾ ಮೀತಿ ಮೀರಿ ತನ್ನ ರಾಕ್ಷಸ ವರ್ತನೆ ತೋರಿದಾಗ ಅದರ ವಿರುದ್ಧ ಕೆಲಸ ಮಾಡಿ ಜನರ ಜೀವ ಉಳಿಸುವ ಪ್ರಯತ್ನ ಮಾಡಿದ ಕೊರೋನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತಾಡಿದ ಸೊರಕೆ “ಜೀವನದಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿರುವ ಇತಿಹಾಸ ಇಲ್ಲ ಆದರೇ ಕಾರ್ಯಕರ್ತರ ಭಾವನೆಗಳಿಗೆ ದಕ್ಕೆಯಾಗಬಾರದೆಂಬ ಹಿತದೃಷ್ಟಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಮುಖಾಂತರ ಆಚರಣೆ ಮಾಡುವುರಿಂದ ಸಂತಸ ನೀಡುತ್ತದೆ ,ಇವತ್ತು ಕೊರೋನಾ ವಾರಿಯರ್ಸ್ ಅಭಿನಂದನೆ ಮಾಡುತ್ತಿರುವುದು ಕೂಡ ನಿಜವಾಗಿಯೂ ಅತ್ಯಂತ ಸಂತಸ ತಂದಿದೆ.ಕೊರೋನಾವನ್ನು ನಿಯಂತ್ರಣಕ್ಕೆ ತರುವಲ್ಲಿ ವಿಶೇಷ ಪ್ರಯತ್ನ ಮಾಡಿದ ವೈದ್ಯರ ತಂಡ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಿಸುವುದು ನನ್ನ ಸೌಭಾಗ್ಯ ಎಂದರು.
ಕೆಪಿಸಿಸಿ ಸಂಯೋಜ ನವೀನ್ಚಂದ್ರ ಶೆಟ್ಟಿ ಮಾತಾಡಿ “ಕೊರೋನೊದಿಂದ ಜನ ಜೀವನ ಅಸ್ತವ್ಯಸ್ತತೆ ಕಂಡಾಗ ಅದರ ವಿರುದ್ಧ ಹೋರಾಡಿ ಜನ ಜೀವನವನ್ನು ಸುಗಮಗೊಳಿಸಲು ಹೋರಾಡಿದ ಕೊರೋನಾ ವಾರಿಯರ್ಸ್ ಗೆ ಅಭಿನಂದಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು.
ಈ ಸಂಧರ್ಭದಲ್ಲಿ ಕಾಪು ಕ್ಷೇತ್ರದ ಅಧ್ಯಕ್ಷ ನವೀನ್ಚಂದ್ರ ಸುವರ್ಣ,ಅಖೀಲೇಶ್,ಕುಮಾರಿ ಮಾಲಿನಿ,ಪ್ರಭಾ ಶೆಟ್ಟಿ,ಸಾದೀಕ್ ,ದೀಪಕ್ ಕುಮಾರ್ ಎರ್ಮಾಳು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಮೂಳೂರು
ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…
ನಾನು ಕಂಬಳ ವಿರೋಧಿಸುತ್ತಿಲ್ಲ, ಮೈಸೂರು ದಸರಾದಲ್ಲಿ ಇದನ್ನು ಬಲವಂತವಾಗಿ ಸೇರಿಸಬಾರದು : ಯದುವೀರ್ ಒಡೆಯರ್ ಸ್ಪಷ್ಟನೆ ಮೈಸೂರು: "ನಾನು ಕಂಬಳವನ್ನು…
ಉಡುಪಿ: ಧರ್ಮಸ್ಥಳ ಬುರುಡೆ ಗ್ಯಾಂಗ್ ರಕ್ಷಣೆಗೆ ಎಸ್ಎಎಫ್ ರಚನೆ : ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಗಂಭೀರ ಆರೋಪ ಉಡುಪಿ:…
ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್’ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ : ಸಚಿವ ಈಶ್ವರ್ ಖಂಡ್ರೆ ಬೆಂಗಳೂರು :ರಾಜ್ಯದಲ್ಲಿ ಬಹುನಿರೀಕ್ಷಿತ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು…
ಕೇಂದ್ರದಿಂದ ಗುಡ್ ನ್ಯೂಸ್ : ಮಧುಮೇಹ ಸೇರಿ 39 ಔಷಧಿಗಳ ಬೆಲೆಯಲ್ಲಿ ಭಾರಿ ಇಳಿಕೆ ನವದೆಹಲಿ: ಪ್ರತಿ ತಿಂಗಳು ಔಷಧಿಗಳಿಗೆ…
ಕಣ್ಣೂರು: ಅನಸ್ತೇಶಿಯಾ ನೀಡಿ ಶಸ್ತ್ರಚಿಕಿತ್ಸೆ : 18 ತಿಂಗಳ ಮಗು ನಿಧನ ; ವೈದ್ಯರ ವಿರುದ್ಧ ಪ್ರಕರಣ ದಾಖಲು ತಿರುವನಂತಪುರಂ:…