ಸೊರಕೆ ಹುಟ್ಟುಹಬ್ಬ-ಕೊರೋನಾ ವಾರಿಯರ್ಸ್ ಗೆ ಸನ್ಮಾನ.
ಕಾಪು: ಕರ್ನಾಟಕ ಸರ್ಕಾರದ ಮಾಜಿ ಸಚಿವ ಹಾಗೂ ಕಾಪು ಕ್ಷೇತ್ರದ ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆಯರ ಹುಟ್ಟುಹಬ್ಬದ ಪ್ರಯುಕ್ತ ಕಾಪು ರಾಜೀವ ಭವನದಲ್ಲಿ ಕೊರೋನಾ ವಾರಿಯರ್ಸ್ ಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತಾಡಿದ ಕಾಪುವಿನ ವೈದ್ಯಧಿಕಾರಿ ಡಾ.ಸುಬ್ರಾಯ ಕಾಮತ್” ದೇಶದಲ್ಲಿ ಕೊರೋನಾ ಮೀತಿ ಮೀರಿ ತನ್ನ ರಾಕ್ಷಸ ವರ್ತನೆ ತೋರಿದಾಗ ಅದರ ವಿರುದ್ಧ ಕೆಲಸ ಮಾಡಿ ಜನರ ಜೀವ ಉಳಿಸುವ ಪ್ರಯತ್ನ ಮಾಡಿದ ಕೊರೋನಾ ವಾರಿಯರ್ಸ್ ಗೆ ಅಭಿನಂದನೆ ಸಲ್ಲಿಸುತ್ತಿರುವುದು ಶ್ಲಾಘನೀಯ ಎಂದರು.
ಕಾರ್ಯಕರ್ತರ ಅಭಿನಂದನೆ ಸ್ವೀಕರಿಸಿ ಮಾತಾಡಿದ ಸೊರಕೆ “ಜೀವನದಲ್ಲಿ ಹುಟ್ಟು ಹಬ್ಬ ಆಚರಣೆ ಮಾಡಿರುವ ಇತಿಹಾಸ ಇಲ್ಲ ಆದರೇ ಕಾರ್ಯಕರ್ತರ ಭಾವನೆಗಳಿಗೆ ದಕ್ಕೆಯಾಗಬಾರದೆಂಬ ಹಿತದೃಷ್ಟಿಯಿಂದ ಸಮಾಜಮುಖಿ ಕಾರ್ಯಕ್ರಮಗಳ ಮುಖಾಂತರ ಆಚರಣೆ ಮಾಡುವುರಿಂದ ಸಂತಸ ನೀಡುತ್ತದೆ ,ಇವತ್ತು ಕೊರೋನಾ ವಾರಿಯರ್ಸ್ ಅಭಿನಂದನೆ ಮಾಡುತ್ತಿರುವುದು ಕೂಡ ನಿಜವಾಗಿಯೂ ಅತ್ಯಂತ ಸಂತಸ ತಂದಿದೆ.ಕೊರೋನಾವನ್ನು ನಿಯಂತ್ರಣಕ್ಕೆ ತರುವಲ್ಲಿ ವಿಶೇಷ ಪ್ರಯತ್ನ ಮಾಡಿದ ವೈದ್ಯರ ತಂಡ ಹಾಗೂ ಆಶಾ ಕಾರ್ಯಕರ್ತೆಯರಿಗೆ ಗೌರವಿಸುವುದು ನನ್ನ ಸೌಭಾಗ್ಯ ಎಂದರು.
ಕೆಪಿಸಿಸಿ ಸಂಯೋಜ ನವೀನ್ಚಂದ್ರ ಶೆಟ್ಟಿ ಮಾತಾಡಿ “ಕೊರೋನೊದಿಂದ ಜನ ಜೀವನ ಅಸ್ತವ್ಯಸ್ತತೆ ಕಂಡಾಗ ಅದರ ವಿರುದ್ಧ ಹೋರಾಡಿ ಜನ ಜೀವನವನ್ನು ಸುಗಮಗೊಳಿಸಲು ಹೋರಾಡಿದ ಕೊರೋನಾ ವಾರಿಯರ್ಸ್ ಗೆ ಅಭಿನಂದಿಸುತ್ತಿರುವ ಕಾರ್ಯಕ್ರಮ ಅರ್ಥಪೂರ್ಣವಾಗಿದೆ ಎಂದರು.
ಈ ಸಂಧರ್ಭದಲ್ಲಿ ಕಾಪು ಕ್ಷೇತ್ರದ ಅಧ್ಯಕ್ಷ ನವೀನ್ಚಂದ್ರ ಸುವರ್ಣ,ಅಖೀಲೇಶ್,ಕುಮಾರಿ ಮಾಲಿನಿ,ಪ್ರಭಾ ಶೆಟ್ಟಿ,ಸಾದೀಕ್ ,ದೀಪಕ್ ಕುಮಾರ್ ಎರ್ಮಾಳು ಮೊದಲಾದವರು ಉಪಸ್ಥಿತರಿದ್ದರು.
ವರದಿ: ಪುರುಷೋತ್ತಮ ಮೂಳೂರು
ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…
ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…
ಟ್ರ್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…
ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್ಗೆ ಬಿಟ್ಟ ವಿಚಾರ.…
ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…
ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…