Featured

ಸೋತಾಗ ನನಗೆ ಹೆಚ್ಚಿನ ಶಕ್ತಿ ಬರುತ್ತದೆ : ಮಾಜಿ ಪ್ರಧಾನಿ ದೇವೇಗೌಡ -Vishwanews24

ಕಲಬುರಗಿ: ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ ಅನ್ನೋ ಶಕ್ತಿ ನಮ್ಮಲ್ಲಿಲ್ಲ. ಐದಾರು ಕ್ಷೇತ್ರಗಳಲ್ಲಿ ಹೆಚ್ಚಿನ ಪೈಪೋಟಿ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ಬೆಳಗಾವಿ ವಿಭಾಗ ಮತ್ತು ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಪರ್ಧೆ ನೀಡುತ್ತೇವೆ. ಎಲ್ಲ ಕಡೆ ನಮ್ಮ  ಅಭ್ಯರ್ಥಿಗಳನ್ನು ಹಾಕುತ್ತೇವೆ. ಗೆಲವು ಸೋಲು ನಮ್ಮ ಕೈಯಲ್ಲಿಲ್ಲ ಎಂದರು.

ಅನೇಕ ಅನರ್ಹ ಶಾಸಕರೇ ಸಿದ್ದರಾಮಯ್ಯರತ್ತ ಬೊಟ್ಟು ಮಾಡಿದ್ದಾರೆ. ನೀವೇ ನಮಗೆ ಹೋಗಿ ಅಂತ ಹೇಳಿ, ನೀವೇ ನಮಗೆ ಅನರ್ಹರು ಅಂತ ಹೇಳ್ತಿದ್ದೀರಿ ಎಂದು ಹೇಳಿದ್ದಾರೆ. ಸದ್ಯದ ಮಟ್ಟಿಗೆ ಯಡಿಯೂರಪ್ಪ ಸರ್ಕಾರಕ್ಕೆ ಅಪಾಯವಾಗಲಾರದು ಎಂದನಿಸುತ್ತದೆ. ನಾವು ಮತ್ತು ಕಾಂಗ್ರೆಸ್ ಒಂದಾಗದೇ ಇರೋದರಿಂದಾಗಿ ಅಪಾಯವಾಗಲಾರದು ಅಂತ ಅನ್ಸುತ್ತೆ ಎಂದ ದೇವೇಗೌಡರು ಹೇಳಿದರು.

ನಾವಂತೂ ಮಧ್ಯಂತರ ಚುನಾವಣೆಗೆ ಹೋಗೋ ವಿಚಾರದಲ್ಲಿಲ್ಲ. ಉಪ ಚುನಾವಣೆ ಫಲಿತಾಂಶದಿಂದ ಮಧ್ಯಂತರ ಚುನಾವಣೆ ಬರೋದಿಲ್ಲ. ಆದರೆ ಬಿಜೆಪಿಯ ಆಂತರಿಕ ಕಚ್ಚಾಟ ಹೆಚ್ಚಾಗಿ ಬಂದ್ರೆ ನನಗೆ ಗೊತ್ತಿಲ್ಲ ಎಂದರು.

ಜೆಡಿಎಸ್ ಬಿಜೆಪಿ ಬಿ-ಟೀಮ್ ಅಂತ ರಾಹುಲ್ ಗಾಂಧಿ ಬಾಯಿಯಿಂದ ಹೇಳಿಸಿದರು. ಅವರು ಹೇಳದಿದ್ದರು ಚೀಟಿ ಕೊಟ್ಟು ಹೇಳಿಸಿದರು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಪ್ರಾದೇಶಿಕ ಪಕ್ಷ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.

ನಾನು ಮಾಜಿ ಪ್ರಧಾನಿ ಆಗಿದ್ದೇನೆ. ಜೊತೆಗೆ ಸೋತಿದ್ದೇನೆ. ಸನ್ನಿವೇಶದ ಒತ್ತಡದಿಂದ ತುಮಕೂರಿನಲ್ಲಿ ಸ್ಪರ್ಧಿಸಿದ್ದೆ. ಸೋಲಿಗೆ ಯಾರನ್ನು ಹೊಣೆಗಾರನನ್ನು ಮಾಡೋದಿಲ್ಲ ಆದರೆ, ಸೋತಾಗ ನನಗೆ ಹೆಚ್ಚಿನ ಶಕ್ತಿ ಬರುತ್ತದೆ ಎಂದು ದೇವೇಗೌಡರು ಹೇಳಿದರು

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

18 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

22 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago