Featured

ಸೋತಾಗ ನನಗೆ ಹೆಚ್ಚಿನ ಶಕ್ತಿ ಬರುತ್ತದೆ : ಮಾಜಿ ಪ್ರಧಾನಿ ದೇವೇಗೌಡ -Vishwanews24

ಕಲಬುರಗಿ: ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ. ಆದರೆ ಎಲ್ಲ ಸ್ಥಾನಗಳನ್ನು ಗೆಲ್ಲುತ್ತೇವೆ ಅನ್ನೋ ಶಕ್ತಿ ನಮ್ಮಲ್ಲಿಲ್ಲ. ಐದಾರು ಕ್ಷೇತ್ರಗಳಲ್ಲಿ ಹೆಚ್ಚಿನ ಪೈಪೋಟಿ ನೀಡುತ್ತೇವೆ ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದರು.

ಬೆಳಗಾವಿ ವಿಭಾಗ ಮತ್ತು ಹಳೆ ಮೈಸೂರು ಭಾಗದಲ್ಲಿ ಹೆಚ್ಚಿನ ಸ್ಪರ್ಧೆ ನೀಡುತ್ತೇವೆ. ಎಲ್ಲ ಕಡೆ ನಮ್ಮ  ಅಭ್ಯರ್ಥಿಗಳನ್ನು ಹಾಕುತ್ತೇವೆ. ಗೆಲವು ಸೋಲು ನಮ್ಮ ಕೈಯಲ್ಲಿಲ್ಲ ಎಂದರು.

ಅನೇಕ ಅನರ್ಹ ಶಾಸಕರೇ ಸಿದ್ದರಾಮಯ್ಯರತ್ತ ಬೊಟ್ಟು ಮಾಡಿದ್ದಾರೆ. ನೀವೇ ನಮಗೆ ಹೋಗಿ ಅಂತ ಹೇಳಿ, ನೀವೇ ನಮಗೆ ಅನರ್ಹರು ಅಂತ ಹೇಳ್ತಿದ್ದೀರಿ ಎಂದು ಹೇಳಿದ್ದಾರೆ. ಸದ್ಯದ ಮಟ್ಟಿಗೆ ಯಡಿಯೂರಪ್ಪ ಸರ್ಕಾರಕ್ಕೆ ಅಪಾಯವಾಗಲಾರದು ಎಂದನಿಸುತ್ತದೆ. ನಾವು ಮತ್ತು ಕಾಂಗ್ರೆಸ್ ಒಂದಾಗದೇ ಇರೋದರಿಂದಾಗಿ ಅಪಾಯವಾಗಲಾರದು ಅಂತ ಅನ್ಸುತ್ತೆ ಎಂದ ದೇವೇಗೌಡರು ಹೇಳಿದರು.

ನಾವಂತೂ ಮಧ್ಯಂತರ ಚುನಾವಣೆಗೆ ಹೋಗೋ ವಿಚಾರದಲ್ಲಿಲ್ಲ. ಉಪ ಚುನಾವಣೆ ಫಲಿತಾಂಶದಿಂದ ಮಧ್ಯಂತರ ಚುನಾವಣೆ ಬರೋದಿಲ್ಲ. ಆದರೆ ಬಿಜೆಪಿಯ ಆಂತರಿಕ ಕಚ್ಚಾಟ ಹೆಚ್ಚಾಗಿ ಬಂದ್ರೆ ನನಗೆ ಗೊತ್ತಿಲ್ಲ ಎಂದರು.

ಜೆಡಿಎಸ್ ಬಿಜೆಪಿ ಬಿ-ಟೀಮ್ ಅಂತ ರಾಹುಲ್ ಗಾಂಧಿ ಬಾಯಿಯಿಂದ ಹೇಳಿಸಿದರು. ಅವರು ಹೇಳದಿದ್ದರು ಚೀಟಿ ಕೊಟ್ಟು ಹೇಳಿಸಿದರು ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ಎರಡು ರಾಷ್ಟ್ರೀಯ ಪಕ್ಷಗಳ ನಡುವೆ ಪ್ರಾದೇಶಿಕ ಪಕ್ಷ ಉಳಿಸಿಕೊಳ್ಳಲು ಹೋರಾಟ ನಡೆಸುತ್ತಿದ್ದೇವೆ ಎಂದು ಹೇಳಿದರು.

ನಾನು ಮಾಜಿ ಪ್ರಧಾನಿ ಆಗಿದ್ದೇನೆ. ಜೊತೆಗೆ ಸೋತಿದ್ದೇನೆ. ಸನ್ನಿವೇಶದ ಒತ್ತಡದಿಂದ ತುಮಕೂರಿನಲ್ಲಿ ಸ್ಪರ್ಧಿಸಿದ್ದೆ. ಸೋಲಿಗೆ ಯಾರನ್ನು ಹೊಣೆಗಾರನನ್ನು ಮಾಡೋದಿಲ್ಲ ಆದರೆ, ಸೋತಾಗ ನನಗೆ ಹೆಚ್ಚಿನ ಶಕ್ತಿ ಬರುತ್ತದೆ ಎಂದು ದೇವೇಗೌಡರು ಹೇಳಿದರು

Vishwa News 24

Recent Posts

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

32 minutes ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

42 minutes ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

54 minutes ago

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

1 hour ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

2 hours ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

2 hours ago