Featured

ಸೋನಿಯಾ ಗಾಂಧಿಗೂ ಈ ದೇಶಕ್ಕೂ ಏನು ಸಂಬಂಧ : ಡಿ.ಕೆ.ಶಿ ಗೆ ಕೆ.ಎಸ್. ಈಶ್ವರಪ್ಪ ತಿರುಗೇಟು – VIshwanews24

ಸೋನಿಯಾ ಗಾಂಧಿಗೂ ಈ ದೇಶಕ್ಕೂ ಏನು ಸಂಬಂಧ : ಡಿ.ಕೆ.ಶಿ ಗೆ ಕೆ.ಎಸ್. ಈಶ್ವರಪ್ಪ ತಿರುಗೇಟು

ಬಾಗಲಕೋಟೆ: ಸೋನಿಯಾ ಗಾಂಧಿಗೂ ಈ ದೇಶಕ್ಕೂ ಏನು ಸಂಬಂಧ ಎಂದು ನಾನು ವಾಪಸ್ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ  ತಿರುಗೇಟು ನೀಡಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್‌ಗೂ ಕರ್ನಾಟಕಕ್ಕೂ ಏನು ಸಂಬಂಧ ಎಂದ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸೋನಿಯಾ ಗಾಂಧಿಗೆ ಈ ದೇಶಕ್ಕೆ ಸಂಬಂಧವೇ ಇಲ್ಲ. ಸೋನಿಯಾಗಾಂಧಿ ವಿದೇಶದಿಂದ ಬಂದ ವ್ಯಕ್ತಿ. ನಾನು ವೈಯಕ್ತಿಕವಾಗಿ ಅವರನ್ನು ಟೀಕೆ ಮಾಡಲು ಇಷ್ಟ ಪಡುವುದಿಲ್ಲ. ಆದರೆ ಕಾಂಗ್ರೆಸ್ ಯಾವ ದಿಕ್ಕಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದರು.

ಸೋನಿಯಾ ಗಾಂಧಿ ಜೈಲು ಶಿಕ್ಷೆ ಅನುಭವಿಸಿದ್ದಾರಾ? ರಾಹುಲ್ ಗಾಂಧಿ ಅನುಭವಿಸಿದ್ದಾರಾ? ತಿಹಾರ್ ಜೈಲಿಗೆ ಡಿಕೆಶಿ ಹೋಗಿದ್ದು ಇರಬಹುದು. ಆದರೆ ಡಿ.ಕೆ. ಶಿವಕುಮಾರ್ ಹಾಗೂ ಅವರ ಶಿಷ್ಯಂದಿರಿಗೆ ತಿಹಾರ್ ಜೈಲು ಪರಪ್ಪನ ಅಗ್ರಹಾರ ಸಂಬಂಧ ಮಾತ್ರ ಗೊತ್ತು. ಇದು ಅವರು ವೈಯಕ್ತಿಕವಾಗಿ ಮಾಡಿದಂತಹ ರಾಷ್ಟ್ರದ್ರೋಹಿ ಚಟುವಟಿಕೆಗಳಿಂದ ಜೈಲಿಗೆ ಹೋದರು. ಆದರೆ ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋಗಿದ್ದರು. ವೀರ ಸಾವರ್ಕರ್ ಅವರು ಅಂಡಮಾನ್‍ನ ಜೈಲಲ್ಲಿ ಎಷ್ಟು ವರ್ಷ ಇದ್ದರು? ಅಲ್ಲಿನ ಕಠಿಣ ಶಿಕ್ಷೆ ಎಷ್ಟರ ಮಟ್ಟಿಗೆ ಅನುಭವಿಸಿದರು ಅನ್ನೊದು ಗೊತ್ತಿಲ್ಲ. ಇತಿಹಾಸ ನೋಡಿಕೊಂಡು ಡಿಕೆಶಿ ಮಾತಾಡಲಿ ಎಂದು ತಿರುಗೇಟು ನೀಡಿದರು.

ರಾಜಕಾರಣ ಮಾಡಲಿ ನಾವು ಮಾಡ್ತೇವೆ ಇಲ್ಲ ಅಂತಲ್ಲ. ಇಂದಿರಾ ಗಾಂಧಿಯವರನ್ನು ಪಾಕಿಸ್ತಾನ – ಭಾರತ ಯುದ್ಧದ ಸಮಯದಲ್ಲಿ ವಾಜಪೇಯಿಯವರು ದುರ್ಗೆ ಅಂತ ಕರೆದರು. ದೇಶದ ಸಂಕಷ್ಟದ ಸಮಯದಲ್ಲೂ ಇಂದಿರಾ ಗಾಂಧಿಯನ್ನು ಹೊಗಳಿದರು. ಅದೇ ಇಂದಿರಾ ಗಾಂಧಿ ವಾಜಪೇಯಿ, ಜಯಪ್ರಕಾಶ್ ನಾರಾಯಣ ಸೇರಿದಂತೆ ಅನೇಕ ನಾಯಕರನ್ನು ತುರ್ತು ಪರಿಸ್ಥಿತಿ ತಂದು ಜೈಲು ಸೇರಿಸಿದರು. ಅದನ್ನು ಬಿಜೆಪಿ ವಿರೋಧಿಸಿತು. ಯಾವ ಸಂದರ್ಭದಲ್ಲಿ ರಾಜಕಾರಣ ಮಾಡಬೇಕು ಎಂಬ ಕಲ್ಪನೆ ಕಾಂಗ್ರೆಸ್‍ಗೆ ಇಲ್ಲ. ಇಡೀ ರಾಜ್ಯ ದೇಶದ ಜನರಿಗೆ ಕಾಂಗ್ರೆಸ್ ಬಗ್ಗೆ ಅಸಹ್ಯ ಹುಟ್ಟುತ್ತದೆ. ಆ ರೀತಿ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago