ಬಾಗಲಕೋಟೆ: ಸೋನಿಯಾ ಗಾಂಧಿಗೂ ಈ ದೇಶಕ್ಕೂ ಏನು ಸಂಬಂಧ ಎಂದು ನಾನು ವಾಪಸ್ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ಗೂ ಕರ್ನಾಟಕಕ್ಕೂ ಏನು ಸಂಬಂಧ ಎಂದ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸೋನಿಯಾ ಗಾಂಧಿಗೆ ಈ ದೇಶಕ್ಕೆ ಸಂಬಂಧವೇ ಇಲ್ಲ. ಸೋನಿಯಾಗಾಂಧಿ ವಿದೇಶದಿಂದ ಬಂದ ವ್ಯಕ್ತಿ. ನಾನು ವೈಯಕ್ತಿಕವಾಗಿ ಅವರನ್ನು ಟೀಕೆ ಮಾಡಲು ಇಷ್ಟ ಪಡುವುದಿಲ್ಲ. ಆದರೆ ಕಾಂಗ್ರೆಸ್ ಯಾವ ದಿಕ್ಕಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದರು.
ಸೋನಿಯಾ ಗಾಂಧಿ ಜೈಲು ಶಿಕ್ಷೆ ಅನುಭವಿಸಿದ್ದಾರಾ? ರಾಹುಲ್ ಗಾಂಧಿ ಅನುಭವಿಸಿದ್ದಾರಾ? ತಿಹಾರ್ ಜೈಲಿಗೆ ಡಿಕೆಶಿ ಹೋಗಿದ್ದು ಇರಬಹುದು. ಆದರೆ ಡಿ.ಕೆ. ಶಿವಕುಮಾರ್ ಹಾಗೂ ಅವರ ಶಿಷ್ಯಂದಿರಿಗೆ ತಿಹಾರ್ ಜೈಲು ಪರಪ್ಪನ ಅಗ್ರಹಾರ ಸಂಬಂಧ ಮಾತ್ರ ಗೊತ್ತು. ಇದು ಅವರು ವೈಯಕ್ತಿಕವಾಗಿ ಮಾಡಿದಂತಹ ರಾಷ್ಟ್ರದ್ರೋಹಿ ಚಟುವಟಿಕೆಗಳಿಂದ ಜೈಲಿಗೆ ಹೋದರು. ಆದರೆ ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋಗಿದ್ದರು. ವೀರ ಸಾವರ್ಕರ್ ಅವರು ಅಂಡಮಾನ್ನ ಜೈಲಲ್ಲಿ ಎಷ್ಟು ವರ್ಷ ಇದ್ದರು? ಅಲ್ಲಿನ ಕಠಿಣ ಶಿಕ್ಷೆ ಎಷ್ಟರ ಮಟ್ಟಿಗೆ ಅನುಭವಿಸಿದರು ಅನ್ನೊದು ಗೊತ್ತಿಲ್ಲ. ಇತಿಹಾಸ ನೋಡಿಕೊಂಡು ಡಿಕೆಶಿ ಮಾತಾಡಲಿ ಎಂದು ತಿರುಗೇಟು ನೀಡಿದರು.
ರಾಜಕಾರಣ ಮಾಡಲಿ ನಾವು ಮಾಡ್ತೇವೆ ಇಲ್ಲ ಅಂತಲ್ಲ. ಇಂದಿರಾ ಗಾಂಧಿಯವರನ್ನು ಪಾಕಿಸ್ತಾನ – ಭಾರತ ಯುದ್ಧದ ಸಮಯದಲ್ಲಿ ವಾಜಪೇಯಿಯವರು ದುರ್ಗೆ ಅಂತ ಕರೆದರು. ದೇಶದ ಸಂಕಷ್ಟದ ಸಮಯದಲ್ಲೂ ಇಂದಿರಾ ಗಾಂಧಿಯನ್ನು ಹೊಗಳಿದರು. ಅದೇ ಇಂದಿರಾ ಗಾಂಧಿ ವಾಜಪೇಯಿ, ಜಯಪ್ರಕಾಶ್ ನಾರಾಯಣ ಸೇರಿದಂತೆ ಅನೇಕ ನಾಯಕರನ್ನು ತುರ್ತು ಪರಿಸ್ಥಿತಿ ತಂದು ಜೈಲು ಸೇರಿಸಿದರು. ಅದನ್ನು ಬಿಜೆಪಿ ವಿರೋಧಿಸಿತು. ಯಾವ ಸಂದರ್ಭದಲ್ಲಿ ರಾಜಕಾರಣ ಮಾಡಬೇಕು ಎಂಬ ಕಲ್ಪನೆ ಕಾಂಗ್ರೆಸ್ಗೆ ಇಲ್ಲ. ಇಡೀ ರಾಜ್ಯ ದೇಶದ ಜನರಿಗೆ ಕಾಂಗ್ರೆಸ್ ಬಗ್ಗೆ ಅಸಹ್ಯ ಹುಟ್ಟುತ್ತದೆ. ಆ ರೀತಿ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಆರ್ಎಸ್ಎಸ್ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…
ಬೆಳ್ತಂಗಡಿ: ಎಸ್ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…
ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…
ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…
ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…
"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…