ಬಾಗಲಕೋಟೆ: ಸೋನಿಯಾ ಗಾಂಧಿಗೂ ಈ ದೇಶಕ್ಕೂ ಏನು ಸಂಬಂಧ ಎಂದು ನಾನು ವಾಪಸ್ ಕೇಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ಗೆ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ತಿರುಗೇಟು ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ ಸಾವರ್ಕರ್ಗೂ ಕರ್ನಾಟಕಕ್ಕೂ ಏನು ಸಂಬಂಧ ಎಂದ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿದರು. ಸೋನಿಯಾ ಗಾಂಧಿಗೆ ಈ ದೇಶಕ್ಕೆ ಸಂಬಂಧವೇ ಇಲ್ಲ. ಸೋನಿಯಾಗಾಂಧಿ ವಿದೇಶದಿಂದ ಬಂದ ವ್ಯಕ್ತಿ. ನಾನು ವೈಯಕ್ತಿಕವಾಗಿ ಅವರನ್ನು ಟೀಕೆ ಮಾಡಲು ಇಷ್ಟ ಪಡುವುದಿಲ್ಲ. ಆದರೆ ಕಾಂಗ್ರೆಸ್ ಯಾವ ದಿಕ್ಕಲ್ಲಿ ಹೋಗುತ್ತಿದೆ ಎಂದು ಪ್ರಶ್ನಿಸಿದರು.
ಸೋನಿಯಾ ಗಾಂಧಿ ಜೈಲು ಶಿಕ್ಷೆ ಅನುಭವಿಸಿದ್ದಾರಾ? ರಾಹುಲ್ ಗಾಂಧಿ ಅನುಭವಿಸಿದ್ದಾರಾ? ತಿಹಾರ್ ಜೈಲಿಗೆ ಡಿಕೆಶಿ ಹೋಗಿದ್ದು ಇರಬಹುದು. ಆದರೆ ಡಿ.ಕೆ. ಶಿವಕುಮಾರ್ ಹಾಗೂ ಅವರ ಶಿಷ್ಯಂದಿರಿಗೆ ತಿಹಾರ್ ಜೈಲು ಪರಪ್ಪನ ಅಗ್ರಹಾರ ಸಂಬಂಧ ಮಾತ್ರ ಗೊತ್ತು. ಇದು ಅವರು ವೈಯಕ್ತಿಕವಾಗಿ ಮಾಡಿದಂತಹ ರಾಷ್ಟ್ರದ್ರೋಹಿ ಚಟುವಟಿಕೆಗಳಿಂದ ಜೈಲಿಗೆ ಹೋದರು. ಆದರೆ ವೀರ ಸಾವರ್ಕರ್ ಸ್ವಾತಂತ್ರ್ಯ ಹೋರಾಟಕ್ಕಾಗಿ ಹೋಗಿದ್ದರು. ವೀರ ಸಾವರ್ಕರ್ ಅವರು ಅಂಡಮಾನ್ನ ಜೈಲಲ್ಲಿ ಎಷ್ಟು ವರ್ಷ ಇದ್ದರು? ಅಲ್ಲಿನ ಕಠಿಣ ಶಿಕ್ಷೆ ಎಷ್ಟರ ಮಟ್ಟಿಗೆ ಅನುಭವಿಸಿದರು ಅನ್ನೊದು ಗೊತ್ತಿಲ್ಲ. ಇತಿಹಾಸ ನೋಡಿಕೊಂಡು ಡಿಕೆಶಿ ಮಾತಾಡಲಿ ಎಂದು ತಿರುಗೇಟು ನೀಡಿದರು.
ರಾಜಕಾರಣ ಮಾಡಲಿ ನಾವು ಮಾಡ್ತೇವೆ ಇಲ್ಲ ಅಂತಲ್ಲ. ಇಂದಿರಾ ಗಾಂಧಿಯವರನ್ನು ಪಾಕಿಸ್ತಾನ – ಭಾರತ ಯುದ್ಧದ ಸಮಯದಲ್ಲಿ ವಾಜಪೇಯಿಯವರು ದುರ್ಗೆ ಅಂತ ಕರೆದರು. ದೇಶದ ಸಂಕಷ್ಟದ ಸಮಯದಲ್ಲೂ ಇಂದಿರಾ ಗಾಂಧಿಯನ್ನು ಹೊಗಳಿದರು. ಅದೇ ಇಂದಿರಾ ಗಾಂಧಿ ವಾಜಪೇಯಿ, ಜಯಪ್ರಕಾಶ್ ನಾರಾಯಣ ಸೇರಿದಂತೆ ಅನೇಕ ನಾಯಕರನ್ನು ತುರ್ತು ಪರಿಸ್ಥಿತಿ ತಂದು ಜೈಲು ಸೇರಿಸಿದರು. ಅದನ್ನು ಬಿಜೆಪಿ ವಿರೋಧಿಸಿತು. ಯಾವ ಸಂದರ್ಭದಲ್ಲಿ ರಾಜಕಾರಣ ಮಾಡಬೇಕು ಎಂಬ ಕಲ್ಪನೆ ಕಾಂಗ್ರೆಸ್ಗೆ ಇಲ್ಲ. ಇಡೀ ರಾಜ್ಯ ದೇಶದ ಜನರಿಗೆ ಕಾಂಗ್ರೆಸ್ ಬಗ್ಗೆ ಅಸಹ್ಯ ಹುಟ್ಟುತ್ತದೆ. ಆ ರೀತಿ ಅವರು ನಡೆದುಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…