Featured

ಸೋನಿಯಾ ಗಾಂಧಿ ಪರಮಾಪ್ತ ವಡಕ್ಕನ್ ಬಿಜೆಪಿಗೆ ಸೇರ್ಪಡೆ – Vishwanews24

ಹೊಸದಿಲ್ಲಿ: ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ದೇಶಾದ್ಯಂತ ಪಕ್ಷಾಂತರಿಗಳೇ ಸದ್ದು ಮಾಡುತ್ತಿದ್ದಾರೆ. ಇದಕ್ಕೆ ಗುರುವಾರ ಹೊಸ ಸೇರ್ಪಡೆಯಾಗಿದೆ. ಕಾಂಗ್ರೆಸ್‌ಗೆ ತೀವ್ರ ಮುಜುಗರವೆಂಬಂತೆ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಪರಮಾಪ್ತ ಮತ್ತು ಪಕ್ಷದ ವಕ್ತಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಕೇರಳದ ಕಾಂಗ್ರೆಸ್‌ ನಾಯಕ ಟಾಮ್‌ ವಡಕ್ಕನ್‌ ಅವರು ದಿಢೀರನೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಗುರುವಾರ ನಡೆದ ಈ ಬೆಳವಣಿಗೆಯು ಕಾಂಗ್ರೆಸ್‌ಗೆ ಆಘಾತ ತಂದಿದೆ.

ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪುಲ್ವಾಮಾ ಉಗ್ರ ದಾಳಿಯ ನಂತರ ಕೇಂದ್ರ ಸರಕಾರ ಕೈಗೊಂಡ ದಿಟ್ಟ ಕ್ರಮಗಳಿಗೆ ಕಾಂಗ್ರೆಸ್‌ ಸರಿಯಾದ ಸ್ಪಂದನೆ ನೀಡಲಿಲ್ಲ. ಶತ್ರು ದೇಶದ ಮೇಲಿನ ದಾಳಿ ವಿಷಯದಲ್ಲಿ ಕಾಂಗ್ರೆಸ್‌ನ ಲಘುವಾಗಿ ವರ್ತಿಸಿತು. ಇದರಿಂದ ನನ್ನ ಮನಸ್ಸಿಗೆ ತೀವ್ರ ನೋವಾಯಿತು. ಪಕ್ಷ ತೊರೆಯಲು ಇದೇ ಕಾರಣ,” ಎಂದರು.

ಇದೇ ವೇಳೆ, ರಾಹುಲ್‌ ಗಾಂಧಿ ನಾಯಕತ್ವದ ಬಗ್ಗೆ ಅವರು ಅಸಮಾಧಾನ ವ್ಯಕ್ತಪಡಿಸಿದರು. ”ಎರಡು ದಶಕಗಳ ಕಾಲ ನಾನು ಆ ಪಕ್ಷಕ್ಕಾಗಿ ದುಡಿದಿದ್ದೇನೆ. ಅದಕ್ಕೆ ಪ್ರತಿಯಾಗಿ ಏನನ್ನೂ ಪಡೆಯಲಿಲ್ಲ. ಬಳಸಿಕೊಂಡು ಬಿಸಾಡುವ ಕೆಟ್ಟ ಸಂಪ್ರದಾಯವನ್ನು ಕಾಂಗ್ರೆಸ್‌ ಅನುಸರಿಸುತ್ತಿದೆ. ವಂಶಪಾರಂಪರ್ಯ ರಾಜಕಾರಣವೂ ಆ ಪಕ್ಷದಲ್ಲಿ ಮೇರೆ ಮೀರಿದೆ,” ಎಂದು ಟೀಕಿಸಿದರು.

ಬಿಜೆಪಿಗೆ ಸೇರ್ಪಡೆಯಾದ ಟಾಮ್‌ ವಡಕ್ಕನ್‌ ಮತ್ತು ಅರ್ಜುನ್‌ ಸಿಂಗ್‌, ಪುಲ್ವಾಮಾ ದಾಳಿ ಬಳಿಕ ತಮ್ಮ ತಮ್ಮ ಪಕ್ಷಗಳು ಮತ್ತು ನಾಯಕರು ನೀಡಿರುವ ಹೇಳಿಕೆಗಳಿಂದ ನೊಂದು ಪಕ್ಷ ತ್ಯಜಿಸಿರುವುದಾಗಿ ಹೇಳಿದ್ದಾರೆ.

ಟಾಮ್ ವಡಕ್ಕನ್ ಯಾರು?:
ಸೋನಿಯಾ ಅವರು ಎಐಸಿಸಿ ಅಧ್ಯಕ್ಷರಾಗಿದ್ದಾಗ ಟಾಮ್ ವಡಕ್ಕನ್ ಅವರು ಮಾಧ್ಯಮ ಸಲಹೆಗಾರರಾಗಿದ್ದರು. ಈ ಮೂಲಕ ಸುಮಾರು 20 ವರ್ಷಗಳಿಂದ ಪಕ್ಷದಲ್ಲಿದ್ದು, ಸೋನಿಯಾ ಗಾಂಧಿ ಅವರ ನಿಕಟವರ್ತಿ ಹಾಗೂ ಕಾಂಗ್ರೆಸ್ ವಕ್ತಾರರಾಗಿ ಟಾಮ್ ಕೆಲಸ ಮಾಡಿದ್ದಾರೆ. ಆದರೆ ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಬರುತ್ತಿದ್ದಂತೆ ಹೊಸ ಮಾಧ್ಯಮ ಸಲಹಾ ತಂಡವನ್ನು ರಚಿಸಿಕೊಂಡರು. ಇದರಿಂದಾಗಿ ಟಾಮ್ ಕಡೆಗಣಿಸಲ್ಪಟ್ಟಿದ್ದರು. ಅಷ್ಟೇ ಅಲ್ಲದೇ ಕೇರಳದಿಂದ ಲೋಕಸಭೆ ಚುನಾವಣಾ ಕಣಕ್ಕೆ ಇಳಿಯುವ ಇಚ್ಛೆಯನ್ನು ವ್ಯಕ್ತಪಡಿಸಿದ್ದ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಹಿಂದೇಟು ಹಾಕಿತ್ತು. ಈ ಎಲ್ಲ ಬೆಳವಣಿಗೆಯಿಂದಾಗಿ ಟಾಮ್ ಅವರು ಕಾಂಗ್ರೆಸ್‍ಗೆ ಗುಡ್‍ಬೈ ಹೇಳಿ ಬಿಜೆಪಿ ಸೇರಿದ್ದಾರೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

3 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

3 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

3 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

3 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

3 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

3 days ago