Featured

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ `ED’ ಚಾರ್ಜ್ ಶೀಟ್ : ಪ್ರಧಾನಿ ಮೋದಿ, ಅಮಿತ್ ಶಾ ಸೇಡಿನ ರಾಜಕಾರಣ : ಸಿದ್ದರಾಮಯ್ಯ ಆಕ್ರೋಶ – vishwanews24

ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ `ED’ ಚಾರ್ಜ್ ಶೀಟ್ : ಪ್ರಧಾನಿ ಮೋದಿ, ಅಮಿತ್ ಶಾ ಸೇಡಿನ ರಾಜಕಾರಣ : ಸಿದ್ದರಾಮಯ್ಯ ಆಕ್ರೋಶ

ಬೆಂಗಳೂರು : ಕಾಂಗ್ರೆಸ್ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಕೇಂದ್ರ ಸರ್ಕಾರದ ಪಾಲಿಗೆ ಸಿಂಹಸ್ವಪ್ನರಾಗಿರುವ ರಾಹುಲ್ ಗಾಂಧಿಯವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಸೇಡಿನ ರಾಜಕಾರಣದ ಮುಂದುವರಿದ ಭಾಗವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ಕೇವಲ ನಮ್ಮ ಪಕ್ಷದ ಇಬ್ಬರು ನಾಯಕರ ಇಲ್ಲವೇ ಕಾಂಗ್ರೆಸ್ ಪಕ್ಷದ ವಿರುದ್ಧದ ಸೇಡಿನ ಕ್ರಮ ಅಲ್ಲ, ಇದು ವಿರೋಧದ ದನಿಯನ್ನು ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ದೇಶದ ವಿರೋಧ ಪಕ್ಷಗಳು ಮತ್ತು ಪ್ರಜಾಪ್ರಭುತ್ವಪ್ರೇಮಿ ನಾಗರಿಕರಿಗೆ ನರೇಂದ್ರ ಮೋದಿ ಸರ್ಕಾರ ನೀಡಿರುವ ಎಚ್ಚರಿಕೆಯಾಗಿದೆ. ದ್ವೇಷದ ರಾಜಕಾರಣವನ್ನು ಎದುರಿಸುತ್ತಲೇ ಬಂದಿರುವ ಕಾಂಗ್ರೆಸ್ ಪಕ್ಷ ಇದನ್ನು ಕೂಡಾ ಸತ್ಯ ಮತ್ತು ನ್ಯಾಯದ ಬಲದಿಂದ ಎದುರಿಸಲಿದೆ.

ಸ್ವಾಯತ್ತ ತನಿಖಾ ಸಂಸ್ಥೆಯಾದ ಇಡಿಯನ್ನು ವಿರೋಧ ಪಕ್ಷದ ನಾಯಕರ ವಿರುದ್ಧ ದ್ವೇಷ ಸಾಧಿಸಲು ಆಯುಧವನ್ನಾಗಿ ಬಳಸುತ್ತಾ ಬಂದಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈಗ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆಯಾಗಿರುವ ಸುಳ್ಳು ಆರೋಪವನ್ನು ಬಳಸಿಕೊಂಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ಆದೇಶದಂತೆಯೇ ಈ ದ್ವೇಷದ ರಾಜಕಾರಣ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

ವಿಚಾರಣೆಯ ನೆಪದಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಯವರು ಸೇರಿದಂತೆ ನಮ್ಮ ಪಕ್ಷದ ಪ್ರಮುಖ ನಾಯಕರಿಗೆ ನಿರಂತರವಾಗಿ ಮಾನಸಿಕ ಕಿರುಕುಳ ನೀಡಿ ಪೀಡಿಸಿದ ಇ.ಡಿ ಯು ಅದರಿಂದ ಯಾವುದೇ ಫಲ ಸಿಗದೆ ಇದ್ದಾಗ ಕಲ್ಪಿತ ಕತೆಗಳನ್ನು ಕಟ್ಟಿ ಆರೋಪ ಪಟ್ಟಿ ಸಲ್ಲಿಸಿದೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸರ್ವಾಧಿಕಾರಿ ಧೋರಣೆಯ ವಿರುದ್ದ ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನೂ ಬೀದಿಗೆ ಇಳಿದು ಇದನ್ನು ಪ್ರತಿಭಟಿಸಲಿದ್ದಾರೆ. ಈ ಪ್ರತಿರೋಧಕ್ಕೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಟ್ಟಿರುವ ಪ್ರತಿಯೊಬ್ಬ ಪ್ರಜೆಯೂ ಕೈಜೋಡಿಸಬೇಕಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

6 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

6 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

6 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

6 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

7 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

7 hours ago